ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ
Team Udayavani, Feb 4, 2018, 12:15 PM IST
ಕೆಂಗೇರಿ: ಹೇರೋಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಮಾಗಡಿ ಮುಖ್ಯ ರಸ್ತೆಯ ಹೇರೋಹಳ್ಳಿಯಲ್ಲಿ ಶತಮಾನಗಳಿಂದ ಶ್ರೀ ಆಂಜನೇಯ ಸ್ವಾಮಿಯ ಬ್ರಹ್ಮರಥೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ.
ಪ್ರಸಕ್ತ ಸಾಲಿನ ರಥೋತ್ಸವದ ಪ್ರಯುಕ್ತ ಶನಿವಾರ ಶ್ರೀ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ, ವಿಶಿಷ್ಟ ಅಲಂಕಾರನೆರವೇರಿತು. ಇದೇ ವೇಳೆ ರಥದ ಪುಣ್ಯಾಹ ಅಂಕುರಾರ್ಪಣೆ, ನಾಂದಿ, ನವಗ್ರಹ ಆರಾಧನೆ, ಧ್ವಜಾರೋಹಣ, ರಥದ ಅಂಕ ಪೂಜೆ ನಂತರ ಕಳಸ ಸ್ಥಾಪಿಸಲಾಯಿತು. ರಥವನ್ನು ಹೂಗಳಿಂದ ಅಲಂಕರಿಸಿ ಶ್ರೀ ಆಂಜನೇಯ ಸ್ವಾಮಿ ಮೂರ್ತಿಗೆ ಅಭಿಷೇಕ ಮಾಡಿದ ನಂತರ ಉತ್ಸವ ಮೂರ್ತಿಯ ಉತ್ಸವ ನೆರವೇರಿತು.
ಪ್ರಮುಖ ಬೀದಿಗಳಲ್ಲಿ ಸಾಗಿದ ಉತ್ಸವದಲ್ಲಿ ಪಾಲ್ಗೊಂಡಿದ್ದ ವೀರಗಾಸೆ, ಡೊಳ್ಳು ಕುಣಿತ, ಗಾರುಡಿಗೊಂಬೆ, ಪೂಜಾ ಕುಣಿತ, ಕಂಸಾಳೆ, ಸೋಮನ ಕುಣಿತ, ಚಂಡೆವಾದ್ಯ, ಕುಂಭ ಕಹಳೆ, ರಂ ಡೋಲು, ಕೀಲು ಕುದುರೆ, ಗೊರವನ ಕುಣಿತ ಸೇರಿದಂತೆ ಹಲವಾರು ಜಾನಪದ ಕಲಾ ತಂಡಗಳ ಕಲಾವಿದರು ಮೆರುಗು ತಂದರು.
ನಂತರ ರಥದಲ್ಲಿ ಉತ್ಸವ ಮೂರ್ತಿ ಪ್ರತಿಷ್ಠಾಪಿಸಿ ವಿಧಿವತ್ತಾಜಿ ಪೂಜಾ ಕೈಂಕರ್ಯಗಳನ್ನು ಕೈಗೊಂಡ ನಂತರ ಬ್ರಹ್ಮ ರಥೋತ್ಸವ ನೆರವೇರಿಸಲಾಯಿತು. ರಥೋತ್ಸವದ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಶಾಸಕ ಎಸ್.ಟಿ.ಸೋಮಶೇಖರ್, ಪಾಲಿಕೆ ಸದಸ್ಯರಾದ ರಾಜಣ್ಣ, ಎಂ.ವಾಸುದೇವ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.