ಮತ್ತೂಂದು ಬ್ಲೇಡ್‌ ಕಂಪನಿ ವಂಚನೆ ಬಯಲಿಗೆ

ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ವಂಚನೆ | ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಹೆಸರಿನ ಕಂಪನಿಯಿಂದ ಮೋಸ

Team Udayavani, Aug 6, 2019, 10:09 AM IST

bng-tdy-1

ಬೆಂಗಳೂರು: ಆ್ಯಂಬಿಡೆಂಟ್, ಐಎಂಎ ಬಹುಕೋಟಿ ವಂಚನೆ ಪ್ರಕರಣಗಳ ಮಾದರಿಯಲ್ಲಿಯೇ ಅಧಿಕ ಲಾಭಾಂಶದ ಆಮಿಷವೊಡ್ಡಿ ಗ್ರಾಹಕರಿಂದ ಹಣ ಸಂಗ್ರಹಿಸಿ ಮತ್ತೂಂದು ಕಂಪನಿ ವಂಚಿಸಿರುವುದು ಪತ್ತೆಯಾಗಿದೆ.

ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಹೆಸರಿನ ಕಂಪನಿ ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿದೆ ಎಂದು ಆರೋಪಿಸಿರುವ ಗ್ರಾಹಕರು ತಿಲಕ್‌ ನಗರ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಾರೆ. ಕಂಪನಿಯಿಂದ ಮೋಸ ಹೋದ ಆಂಧ್ರಮೂಲದ ಸೈಯದ್‌ ಖಲೀದ್‌ ಅಹ್ಮದ್‌ ನೀಡಿರುವ ದೂರಿನ ಅನ್ವಯ, ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ನ ನಿರ್ದೇಶಕರುಗಳಾದ ಹಬೀಬುಲ್ಲಾ ಷರೀಫ್, ಆತನ ಸಂಬಂಧಿ ಮಸೀವುಲ್ಲಾ ಷರೀಫ್, ಫ‌ಹಾದ್‌, ಮಂಜುನಾಥ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಆರಂಭದಲ್ಲಿ ಶೇ 7ರಷ್ಟು ಲಾಭಾಂಶ!: ಟಿಫಾರ್ಫ್ ಕಂಪನಿಯ ಬಗ್ಗೆ ನಮ್ಮ ಸಹೋದರನಿಂದ ಮಾಹಿತಿ ಗೊತ್ತಾಗಿದ್ದು ಆತನಿಗೆ 1ಲಕ್ಷ ರೂಗಳಿಗೆ ಶೇ 7 ರಷ್ಟು ಲಾಭಾಂಶ ನೀಡಿದ್ದರು. ಅದನ್ನು ನಂಬಿ ನಾನು ನನ್ನ ಕುಟುಂಬ ಒಟ್ಟು 36 ಲಕ್ಷ ರೂ.ಗಳನ್ನು 2017ರಲ್ಲಿ ಹೂಡಿಕೆ ಮಾಡಿದ್ದೆವು. ಆರಂಭದಲ್ಲಿ ಶೇ. 4 ಲಾಭಾಂಶ ನೀಡಿದ್ದರು. ಆದರೆ, ಕಳೆದ 9 ತಿಂಗಳಿನಿಂದ ಲಾಭಾಂಶ ನೀಡದೆ ಏಕಾಏಕಿ ಕಂಪನಿ ಮುಚ್ಚಿದ್ದರು. ಹೀಗಾಗಿ ಹಣ ವಾಪಾಸ್‌ ನೀಡುವಂತೆ ಕೇಳಿದರೆ ಕೊಡುತ್ತೇವೆ ಎಂದು ನಂಬಿಸುತ್ತಲೇ ಇದ್ದರು ಆದರೆ ಕಡೆಗೂ ಕೊಟ್ಟಿಲ್ಲ ಎಂದು ದೂರುದಾರ ಸೈಯದ್‌ಖಲೀಲ್ ಅಹ್ಮದ್‌ ‘ ಉದಯವಾಣಿ’ಗೆ ತಿಳಿಸಿದರು.

ಪೊಲೀಸರಿಗೆ ದೂರು ನೀಡಿದರೆ ಹಣ ವಾಪಾಸ್‌ ನೀಡುವುದಿಲ್ಲ ಎಂದು ಬೆದರಿಕೆ ಒಡ್ಡಲಾಗಿತ್ತು. ನಮ್ಮಂತೆಯೇ ನೂರಾರು ಮಂದಿ ಹೂಡಿಕೆ ಮಾಡಿದ್ದು, ಅವರೂ ಅವರ ಬೆದರಿಕೆಗೆ ಹೆದರಿದ್ದರು. ಐಎಂಎ ವಂಚನೆ ಬಳಿಕ ಆರೋಪಿಗಳು ಪುನ: ಸಿಕ್ಕಿರಲಿಲ್ಲ. ಹೀಗಾಗಿ ಅಂತಿಮವಾಗಿ ದೂರು ನೀಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

ವರ್ಷದ ಹಿಂದೆಯೇ ಕಂಪನಿಗೆ ಬೀಗ:

ಜಯನಗರದ 9ನೇ ಬ್ಲಾಕ್‌ನಲ್ಲಿರುವ ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿಯ ಕಚೇರಿ ವರ್ಷದ ಹಿಂದೆಯೇ ಮುಚ್ಚಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಾಲ್ವರು ಆರೋಪಿಗಳು ಕೂಡ ತಲೆಮರೆಸಿಕೊಂಡಿದ್ದು ಅವರ ಬಂಧನಕ್ಕೆ ಕ್ರಮವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿ ವಂಚಿಸಿದೆ ಎಂದು ಆರೋಪಿಸಿ ಇದುವರೆಗೂ ನಾಲ್ಕು ದೂರುಗಳು ಬಂದಿದ್ದು, ಪ್ರಕರಣ ದಾಖಲಿಸಲಾಗಿದೆ. ಇದುವರೆಗೂ 36 ಲಕ್ಷ ರೂ. ವಂಚಿಸಿದೆ ಎಂಬುದು ಗೊತ್ತಾಗಿದೆ. ಈ ಪ್ರಮಾಣ ಇನ್ನೂ ಹೆಚ್ಚಿರುವ ಸಾಧ್ಯತೆಯಿದೆ. ತನಿಖೆ ಮುಂದುವರಿಸುತ್ತಿದ್ದೇವೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ದೂರು ನೀಡಬಹುದು!:

ಟಿಫಾರ್ಫ್ ಟ್ರೇಡಿಂಗ್‌ ಸರ್ವೀಸ್‌ ಕಂಪನಿಯಿಂದ ವಂಚನೆಗೊಳಗಾದ ಸಾರ್ವಜನಿಕರ ದೂರು ನೀಡಿದರೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.