ಇನ್ನೊಂದು ಡಿಸಿಎಂ ಹುದ್ದೆ ಸೃಷ್ಟಿ ಮಾಡಲ್ಲ​​​​​​​


Team Udayavani, Jun 10, 2018, 6:00 AM IST

rahul-gandhi-800.jpg

ಬೆಂಗಳೂರು: ಸಚಿವ ಸ್ಥಾನ ಸಿಗದೆ ತೀವ್ರ ಅಸಮಾಧಾನಗೊಂಡು ಉಪ ಮುಖ್ಯಮಂತ್ರಿ ಪಟ್ಟದ ಬೇಡಿಕೆ ಇಟ್ಟಿದ್ದ ಎಂ.ಬಿ.ಪಾಟೀಲ್‌ಗೆ ಕಾಂಗ್ರೆಸ್‌ ಹೈಕಮಾಂಡ್‌ ನಿರಾಸೆಯುಂಟು ಮಾಡಿದ್ದು, ಮತ್ತೂಂದು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಲು ಸಾಧ್ಯವಿಲ್ಲ ಎಂದಿದೆ. 

ಜತೆಗೆ ಎರಡನೇ ಕಂತಿನಲ್ಲಿ ಸಂಪುಟ ಸೇರುವ ಅವಕಾಶ ಕಲ್ಪಿಸಲಾಗುವುದು ಎಂಬ ಭರವಸೆಯನ್ನಷ್ಟೇ ನೀಡಿದೆ.
ಜತೆಗೆ ತಕ್ಷಣದಿಂದಲೇ ಅತೃಪ್ತ ಶಾಸಕರ ಸಭೆ ಸೇರಿದಂತೆ ಸಮ್ಮಿಶ್ರ ಸರ್ಕಾರಕ್ಕೆ ಮುಜುಗರ ಉಂಟಾಗುವ ಚಟುವಟಿಕೆ ನಿಲ್ಲಿಸಿ ಎಂಬ ಸೂಚನೆಯನ್ನೂ ನೀಡಿದೆ.  ಸಂಪುಟದಲ್ಲಿ ಖಾಲಿ ಉಳಿದಿರುವ ಆರು ಸ್ಥಾನ ಶೀಘ್ರ ಭರ್ತಿ ಮಾಡುವ ಭರವಸೆಯನ್ನು ನೀಡಿದೆ.

ಈ ಮಧ್ಯೆ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾಗಾಂಧಿ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರಾಹುಲ್‌ಗಾಂಧಿಯವರ ಜತೆ  ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದು , ರಾಹುಲ್‌ಗಾಂಧಿ ಸಹ ರಾಜ್ಯ ನಾಯಕರ ಜತೆಯೂ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ಇದರ ಬೆನ್ನಲ್ಲೇ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸಹ ಸಚಿವ ವಂಚಿತ ಕಾಂಗ್ರೆಸ್‌ ಶಾಸಕರ ಜತೆ ದೂರವಾಣಿ ಮೂಲಕ ಮಾತನಾಡಿ ಮುಂದಿನ ದಿನಗಳಲ್ಲಿ ಅವಕಾಶ ಸಿಗಲಿದೆ. ಕ್ಷೇತ್ರದ ಕೆಲಸ ಕಾರ್ಯಗಳಿಗೆ ನಾನು ನಿಮ್ಮ ಜತೆಗಿರುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಹೈಕಮಾಂಡ್‌ ಸೂಚನೆ ಮೇರೆಗೆ ಶನಿವಾರ ಸಚಿವ ಸ್ಥಾನ ವಂಚಿತ ಎಚ್‌.ಕೆ.ಪಾಟೀಲ್‌ ನಿವಾಸಕ್ಕೆ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಸಮಾಧಾನಪಡಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ನಾಯಕ ಜಾಫ‌ರ್‌ ಷರೀಫ್ ಸಹ ಭೇಟಿ ನೀಡಿ ಮಾತನಾಡಿದರು. ಹೈಕಮಾಂಡ್‌ನ‌ ಸೂಚನೆ  ಹಿನ್ನೆಲೆಯಲ್ಲಿ ಅತೃಪ್ತರು ಸಮಾಧಾನಗೊಳ್ಳುತ್ತಾರಾ ಅಥವಾ ಬೇರೆ ಸ್ವರೂಪ ಪಡೆಯುತ್ತಾ ಕಾದು ನೋಡಬೇಕಾಗಿದೆ.

ರಾಹುಲ್‌ ಭೇಟಿ ಮಾಡಿದ ಎಂ.ಬಿ.ಪಾಟೀಲ್‌ ಹೈಕಮಾಂಡ್‌ ಬುಲಾವ್‌ ಮೇರೆಗೆ ದೆಹಲಿಯಲ್ಲಿ ಶನಿವಾರ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ, ಸಂಪುಟಕ್ಕೆ ಸೇರ್ಪಡೆ ಸರಿ, ಆದರೆ, ಉಪ ಮುಖ್ಯಮಂತ್ರಿಯೇ ಆಗಬೇಕು ಎಂದರೆ ಕಷ್ಟ. ಸಚಿವ ಸ್ಥಾನ ಬೇಡ ಎಂದಾದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವುದಾದರೂ ಸರಿ ಎಂದು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯ ದೃಷ್ಟಿಯಿಂದ ರಾಷ್ಟ್ರಾದ್ಯಂತ ರಾಜಕೀಯ ಧ್ರುವೀಕರಣ ಆಗುತ್ತಿದ್ದು ಕರ್ನಾಟದಲ್ಲೂ ನಾವು ಕೆಲವೊಂದು ತೀರ್ಮಾನ ಕೈಗೊಂಡಿದ್ದೇವೆ. ಸಮ್ಮಿಶ್ರ ಸರ್ಕಾರ ಸುಗಮವಾಗಿ ನಡೆಯುವುದು ನಮಗೆ ಅಗತ್ಯ. ನೀವು ಪಕ್ಷದ ನಾಯಕತ್ವ ವಹಿಸಿಕೊಂಡು ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಸಂಘಟನೆ ಮಾಡಿ ಎಂಬ ಮಾತನ್ನೂ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಸಂಪುಟ ಸೇರುವುದಾದರೆ ಎರಡನೇ ಕಂತಿನಲ್ಲಿ ಅವಕಾಶ ಕಲ್ಪಿಸಿ ಒಳ್ಳೆಯ ಖಾತೆ ನೀಡಲಾಗುವುದು ಎಂಬ ಭರವಸೆ ಸಹ ನೀಡಲಾಯಿತು ಎಂದು ಹೇಳಲಾಗಿದೆ.

ಆದರೆ, ಸಂಪುಟ¨ಲ್ಲಿ  ಎಂ.ಬಿ.ಪಾಟೀಲ್‌  ಬಯಸಿದ್ದ ಜಲಸಂಪನ್ನೂಲ ಖಾತೆ  ಈಗಾಗಲೇ ಡಿ.ಕೆ.ಶಿವಕುಮಾರ್‌ ಅವರಿಗೆ ನೀಡಿರುವುದರಿಂದ ಸಚಿವ ಸಂಪುಟ ಸೇರಿ ಬೇರೆ ಖಾತೆ ಪಡೆಯುತ್ತಾರಾ? ಎಂಬ ಪ್ರಶ್ನೆಯೂ ಇದೆ.
ರಾಹುಲ್‌ಗಾಂಧಿ ಭೇಟಿ ಸಂದರ್ಭದಲ್ಲಿ ರಾಜ್ಯದಲ್ಲಿನ ಬೆಳವಣಿಗೆಗಳ ಬಗ್ಗೆಯೂ ಎಂ.ಬಿ.ಪಾಟೀಲ್‌ ಮಾಹಿತಿ ನೀಡಿದ್ದು, ಅನುಸರಿಸಿಕೊಂಡು ಹೋಗುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ನಾಳೆ ಸತೀಶ್‌ ಜಾರಕಿಹೊಳಿ ಸಭೆ:  ಸೋಮವಾರ ಸತೀಶ್‌ ಜಾರಕಿಹೊಳಿ ಸೇರಿದಂತೆ ಅತೃಪ್ತ ಶಾಸಕರ ಸಭೆ ಕರೆಯಲಾಗಿದ್ದು ಅಲ್ಲಿ ರಾಹುಲ್‌ಗಾಂಧಿ ಅವರೊಂದಿಗೆ ನಡೆದ ಮಾತುಕತೆ ವಿವರ ನೀಡಿ ಮುಂದಿನ ತೀರ್ಮಾನ ಪ್ರಕಟಿಸುವ ಸಾಧ್ಯತೆಯಿದೆ.

ಮತ್ತೂಂದೆಡೆ ಅತೃಪ್ತ ಸಚಿವರ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಕೆ.ಆರ್‌.ಪುರ ಶಾಸಕ ಬೈರತಿ ಬಸವರಾಜ್‌, ಸಚಿವ ಸ್ಥಾನಕ್ಕಾಗಿ ಒತ್ತಡ ಹಾಕುವುದು ಸರಿಯಲ್ಲ.  ಈಗ ಚುನಾವಣೆಗೆ ಹೋಗಲು ಯಾವ ಶಾಸಕರೂ ತಯಾರಿಲ್ಲ. ಸೋಮವಾರ ಒಂದು ಹಾಗೂ ಎರಡು ಬಾರಿ ಗೆದ್ದಿರುವ 40 ಶಾಸಕರ ಸಭೆ ನಡೆಸಿ ನಾವೂ ಒಂದು ಸಂದೇಶ ರವಾನಿಸಲಿದ್ದೇವೆ ಎಂದು ಹೇಳಿದ್ದಾರೆ.

ಸಿಎಂಗೆ “ಭಿನ್ನ’ ತಲೆನೋವು
ಸಾಲಮನ್ನಾ ಕುರಿತು ಮಾರ್ಗಸೂಚಿ ಹೊರಡಿಸಲು ರೂಪು-ರೇಷೆ ಹಾಗೂ ಹೊಸ ಬಜೆಟ್‌ ಮಂಡಿಸುವ ಸಿದ್ಧತೆಯಲ್ಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರಿಗೆ  ಕಾಂಗ್ರೆಸ್‌ ಪಕ್ಷದಲ್ಲಿನ ಬೆಳವಣಿಗೆಗಳು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಗೆ ತಲೆನೋವು ತಂದಿದೆ.

ಜೆಡಿಎಸ್‌ನಲ್ಲಿ ಯಾವುದೇ ಗೊಂದಲ ಇಲ್ಲದಿದ್ದರೂ ಕಾಂಗ್ರೆÕಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟು ಸರ್ಕಾರದ ಮೇಲೆ ಜನಸಾಮಾನ್ಯರಲ್ಲಿ ಬೇರೆ ರೀತಿಯ ಭಾವನೆ ಬರುವಂತಾಗಿದೆ. ಎಂ.ಬಿ.ಪಾಟೀಲ್‌, ಎಚ್‌.ಕೆ.ಪಾಟೀಲ್‌, ಸತೀಶ್‌ ಜಾರಕಿಹೊಳಿ, ರೋಷನ್‌ಬೇಗ್‌, ರಾಮಲಿಂಗಾರೆಡ್ಡಿ, ಶಾಮನೂರು ಶಿವಶಂಕರಪ್ಪ ಅವರಂತಹ ಹಿರಿಯ ನಾಯಕರ ಅಸಮಾಧಾನ ಸರ್ಕಾರದ ಮೇಲೂ ಪರಿಣಾಮ ಬೀರಬಹುದು ಎಂಬ ಆತಂಕವೂ ಕಾಡುತ್ತಿದೆ ಎಂದು ಹೇಳಲಾಗಿದೆ.

ಕೆಪಿಸಿಸಿ ಹೊಣೆ ದಿನೇಶ್‌ ಗುಂಡೂರಾವ್‌ಗೆ?
ಡಿಸಿಎಂ ಪಟ್ಟ ಬೇಡಿಕೆ ಇಟ್ಟಿರುವ ಎಂ.ಬಿ.ಪಾಟೀಲ್‌ ಸಚಿವ ಸ್ಥಾನ ಒಪ್ಪದೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡರೆ ನೀಡಲು ಸಿದ್ಧ ಇರುವ ಎಐಸಿಸಿ, ಎಂ.ಬಿ.ಪಾಟೀಲ್‌ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಡ ಎಂದರೆ ಆ ಸ್ಥಾನಕ್ಕೆ ದಿನೇಶ್‌ಗುಂಡೂರಾವ್‌ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲೇ ಕೆಪಿಸಿಸಿ ಸ್ಥಾನಕ್ಕೆ ದಿನೇಶ್‌ ಗುಂಡೂರಾವ್‌ ಹಾಗೂ ಕೃಷ½ಬೈರೇಗೌಡ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೃಷ್ಣಬೈರೇಗೌಡ ಸಚಿವರಾಗಿದ್ದರಿಂದ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್‌ಗುಂಡೂರಾವ್‌ ನೇಮಕ ಖಚಿತ ಎಂಬ ಮಾತುಗಳು ಕೇಳಿಬರುತ್ತಿವೆ. ಅವರ ಜತೆಗೆ ದಲಿತ ಹಾಗೂ ಹಿಂದುಳಿದ ವರ್ಗದ ಇಬ್ಬರನ್ನೂ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ಮನಸ್ಸು ಮಾಡಿದರೆ…!
ಈ ನಡುವೆ, ಬಸವಕಲ್ಯಾಣ ಶಾಸಕ ನಾರಾಯಣ ಅವರು, ಸಿದ್ದರಾಮಯ್ಯ ಅವರು ಮನಸ್ಸು ಮಾಡಿದರೆ ಎರಡು ನಿಮಿಷದಲ್ಲಿ ಸರ್ಕಾರ ಉರುಳುತ್ತದೆ. ಸಿದ್ದರಾಮಯ್ಯ ಅವರನ್ನು ಯಾರೂ ಏನೂ ಮಾಡಿಕೊಳ್ಳಲಾಗದು. ಅವರಿಲ್ಲದಿದ್ದರೆ ಸರ್ಕಾರವೇ ಇಲ್ಲ, ಅವನ್ನು ನಿರ್ಲಕ್ಷ್ಯ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ನಾನಾ ರೀತಿಯ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿ ಇಷ್ಟೆಲ್ಲಾ ಬೆಳವಣಿಗೆ ಆಗುತ್ತಿದ್ದರೂ ಸಿದ್ದರಾಮಯ್ಯ ಬಾದಾಮಿಯಲ್ಲೇ ಇರುವುದು.   ಅಸಮಾಧಾನಿತರ ಸಮಾಧಾನ ಮಾಡುವ ಹೊಣೆ ಪರಮೇಶ್ವರ್‌, ಡಿ.ಕೆ.ಶಿವಕುಮಾರ್‌, ದಿನೇಶ್‌ಗುಂಡೂರಾವ್‌ ಅವರ ಮೇಲೆ ಬಿದ್ದಿರುವುದು ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಸುಮ್ಮನಾಗಿಸಿದ ಎಚ್‌ಡಿಕೆ
ಅತ್ತ ಜೆಡಿಎಸ್‌ನಲ್ಲಿ ಸಚಿವಗಿರಿ ವಿಚಾರದಲ್ಲಿ ಅಸಮಾಧಾನ ಇಲ್ಲದಿದ್ದರೂ ಖಾತೆ ವಿಚಾರದಲ್ಲಿ ಜಿ.ಟಿ.ದೇವೇಗೌಡ ಹಾಗೂ ಸಿ.ಎಸ್‌.ಪುಟ್ಟರಾಜು ಬೇಸರಗೊಂಡಿದ್ದಾರೆ. ಆದರೆ, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಖಡಕ್‌ ತಿರುಗೇಟು ನೀಡಿ ಸುಮ್ಮನಾಗಿಸಿದ್ದಾರೆ.

ನಾಯಕರ ಜತೆ ಚರ್ಚೆ ನಡೆಸಿದ್ದೇನೆ. ಬೆಂಗಳೂರಿಗೆ ವಾಪಸ್‌ ತೆರಳಿದ ನಂತರ ಜತೆಯಲ್ಲಿರುವ 15-20 ಶಾಸಕರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್‌ ಬಿಡುವ ಮಾತೇ ಇಲ್ಲ.
– ಎಂ.ಬಿ.ಪಾಟೀಲ್‌, ಕಾಂಗ್ರೆಸ್‌ ನಾಯಕ

ಗೊಂದಲ ನಿವಾರಿಸಲು ಎಲ್ಲಾ ಪ್ರಯತ್ನ ನಡೆಸುತ್ತಿದ್ದೇವೆ. ಸದ್ಯ ಪ್ರಕ್ರಿಯೆ ಜಾರಿಯಲ್ಲಿದೆ ಅಷ್ಟೇ. ಯಾವುದೇ ನಿರ್ಧಾರಕ್ಕೆ ಬರಲಾಗಿಲ್ಲ.
– ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.