ಜನರ ದೂರು ದುಮ್ಮಾನ ಪರಿಹರಿಸಲೆಂದೇ ಬಂದಿದೆ ಜನಹಿತ ಆ್ಯಪ್‌


Team Udayavani, Feb 28, 2017, 12:45 PM IST

mobile-app.jpg

ಬೆಂಗಳೂರು: ನಗರಾಡಳಿತಗಳಿಗೆ ಸಂಬಂಸಿದ ದೂರುಗಳನ್ನು ದಾಖಲಿಸಲು ಮತ್ತು ಕುಂದುಕೊರತೆಗಳ ತಿಳಿಸಲು ಅತ್ಯಾಧುನಿಕ ತಂತ್ರಜ್ಞಾನದ “ಜನಹಿತ’ ಮೊಬೈಲ್‌ ಆ್ಯಪ್‌ಅನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾರಿಗೆ ತರಲಾಗಿದೆ.

ಕರ್ನಾಟಕ ಸಿಟಿ ಮ್ಯಾನೇಜರ್ಸ್‌ ಅಸೋಸಿಯೇಷನ್‌, ಪೌರಾಡಳಿತ ನಿರ್ದೇಶನಾಲಯ ಮತ್ತು ಮುನ್ಸಿಪಲ್‌ ಡಾಟಾ ಸಂಸ್ಥೆ ಸಹಯೋಗದೊಂದಿಗೆ ಸೋಮವಾರ ವಿಕಾಸಸೌಧದಲ್ಲಿ ನಡೆದ “ಮುನ್ಸಿಪಲ್ ಡಾಟಾ ಸೊಸೈಟಿಯ ನಾಗರಿಕ ಕೇಂದ್ರಿತ ಸೇವೆ’ಗಳ ಉದಾ#ಟನೆ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭದದಲ್ಲಿ ನಗರಾಭಿವೃದ್ಧಿ ಸಚಿವ ರೋಷನ್‌ ಬೇಗ್‌ ಮತ್ತು ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ ಆ್ಯಪ್‌ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಸಚಿವ ಈಶ್ವರ್‌ ಖಂಡ್ರೆ, “ಈ ಆ್ಯಪ್‌ ಮೂಲಕ ನಾಗರಿಕರ ದೂರು ಸ್ವೀಕಾರ ಸೇರಿದಂತೆ ಅವರ ಕುಂದುಕೊರತೆಗಳನ್ನು ಆನ್‌ಲೈನ್‌ ಮೂಲಕ ವಿಲೇವಾರಿ ಮಾಡಬಹುದು. ಈ ರೀತಿಯ ತಂತ್ರಜ್ಞಾನ ಬಳಕೆ ದೇಶದಲ್ಲೇ ಮೊದಲು. ಜನಹಿತ ಮೊಬೈಲ… ಆ್ಯಪ್‌ ಮೂಲಕ ಕಟ್ಟಡ ನಿರ್ಮಾಣ ಪರವಾನಗಿ, ಉದ್ದಿಮೆಗಳಿಗೆ ನೀಡುವ ಪರವಾನಗಿ, ವ್ಯಾಪಾರಕ್ಕೆ ಸಂಬಂಧಿ ಸಿದ ಪರವಾನಗಿ, ಇ- ಆಸ್ತಿ, ಹಾಗೂ ಜನನ ಮತ್ತು ಮರಣ ದಾಖಲೆಗಳ ನೊಂದಣಿ ಮಾಡಬಹುದು ,”ಎಂದರು.

ಸಚಿವ ರೋಷನ್‌ ಬೇಗ್‌ ಮಾತನಾಡಿ, “ನಗರೀಕರಣ ಹೆಚ್ಚಾದಂತೆ ನಗರಕ್ಕೆ ವಲಸೆ ಬರುವವರ ಸಂಖ್ಯೆಯಲ್ಲೂ ಏರಿಕೆಯಾಗುತ್ತಿದೆ. ಪ್ರಸ್ತುತ ನಗರ ವಾಸಿಗಳ ಸಂಖ್ಯೆ ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 38ರಷ್ಟಿದ್ದು, ಮುಂದಿನ ದಿನಗಳಲ್ಲಿ ಅದು ಶೇ. 50ಕ್ಕೆ ಹೆಚ್ಚಲಿದೆ. ನಗರ ಮತ್ತು ಪಟ್ಟಣ ಪ್ರದೇಶಗಳ ಜನಸಂಖ್ಯೆ ಹೆಚ್ಚಳ ಗಮನದಲ್ಲಿಟ್ಟುಕೊಂಡು ರಸ್ತೆ, ಕುಡಿಯುವ ನೀರು, ಒಳಚರಂಡಿ ಮತ್ತಿತರ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು,” ಎಂದರು.

“ಸರ್ಕಾರ ಜಾರಿಗೆ ತಂದಿರುವ ಆನ್‌ಲೈನ್‌ ಸೇವೆ ಮೂಲಕ ದೂರು ದಾಖಲಿಸುವುದರ ಜತೆಗೆ ದೂರವಾಣಿ ಕರೆಗಳ ಮೂಲಕವೂ ಜನರು ತಮ್ಮ ಅಹವಾಲು ನೋಂದಾಯಿಸಿಕೊಳ್ಳಬಹುದು. ಇಂತಹ ದೂರು, ಅಹವಾಲು ಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು,” ಎಂದು ಹೇಳಿದರು. ಇದೇ ವೇಳೆ ಅತ್ಯುತ್ತಮ ಪದ್ಧತಿ ರೂಪಿಸಿ, ಉತ್ತಮ ಆಡಳಿತ ನಡೆಸುತ್ತಿರುವ ಸ್ಥಳೀಯ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಯಿತು. 

ಟಾಪ್ ನ್ಯೂಸ್

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Kumapala

Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ

R.Ashok

Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್‌ ಸೀಮಿತ: ಆರ್‌. ಅಶೋಕ್‌

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Accident-Logo

Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.