![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 20, 2024, 1:24 PM IST
ಬೆಂಗಳೂರು: ಮನೆ ಮುಂದೆ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರು ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ವಿಲ್ಸನ್ಗಾರ್ಡನ್ನ ಅರ್ಷದ್ ಖಾನ್, ಪ್ರದೀಪ್ ಬಂಧಿತರು. 4 ಲಕ್ಷ ರೂ. ಮೌಲ್ಯದ ಏಳು ದ್ವಿಚಕ್ರ ವಾಹನಗಳು, 1 ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಮನೆ ಮುಂದೆ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರವಾಹನ ಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿ ಗಳು ಅದರ ಹ್ಯಾಂಡ್ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದರು. ಬಳಿಕ ಸಿಕ್ಕಿದ ಬೆಲೆಗೆ ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ಮೋಜು-ಮಸ್ತಿ ಮಾಡುತ್ತಿದ್ದರು.
ವಿಲ್ಸನ್ಗಾರ್ಡನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿಚಕ್ರವಾಹನ ಕಳವು ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳಾದ ಪ್ರದೀಪ್ ಮತ್ತು ಅರ್ಷದ್ ಖಾನ್ ಸುಳಿವು ಸಿಕ್ಕಿತ್ತು. ಕೂಡಲೇ ಇಬ್ಬರನ್ನೂ ಪತ್ತೆ ಹಚ್ಚಿ ಬಂಧಿಸಿ ವಿಚಾರಣೆ ನಡೆಸಿದಾಗ ನಗರದ ವಿವಿಧೆಡೆ ನಡೆದ ಇನ್ನಷ್ಟು ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.