Arrested: ಕೋರ್ಟ್ ಆವರಣದಲ್ಲಿದ್ದ ಹಿಟಾಚಿ ಕದ್ದ ಇಬ್ಬರು ಆರೋಪಿಗಳ ಬಂಧನ
Team Udayavani, Jul 21, 2024, 11:58 AM IST
ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ನಿಲುಗಡೆ ಮಾಡಿದ್ದ ಹಿಟಾಚಿ ಯಂತ್ರ ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜಿಗಣಿಯ ಸಚ್ಚಿದಾನಂದ (45) ಹಾಗೂ ಶಕ್ತಿವೇಲು (40) ಬಂಧಿತರು.
ಇತರೆ ಇಬ್ಬರು ಆರೋಪಿಗಳು ತಲೆಮರೆಸಿ ಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಆರೋಪಿ ಗಳು ಜುಲೈ 17ರಂದು ತಡರಾತ್ರಿ ಹಿಟಾಚಿ ಕಳವು ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಲಿಫ್ಟ್ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ಕಾಮಗಾರಿಯ ಗುತ್ತಿಗೆಯನ್ನು ಗೋವಿಂದರಾಜು ಎಂಬುವರು ಪಡೆದುಕೊಂಡಿದ್ದರು. ಅವರೊಂದಿಗೆ ಆರೋಪಿಗಳು ಕೂಡ ಜಂಟಿ ಮಾಲೀಕತ್ವದಲ್ಲಿ ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಗೋವಿಂದರಾಜು ಮತ್ತು ಆರೋಪಿಗಳ ನಡುವೆ ಹಣಕಾಸಿನ ವಿಚಾರಕ್ಕೆ ಗಲಾಟೆ ಆಗಿತ್ತು. ಅದರಿಂದ ಆಕ್ರೋಶಗೊಂಡ ಆರೋಪಿಗಳು ಹಿಟಾಚಿ ಕದ್ದೊಯ್ದು ಬೇರೆಡೆ ಮಾರಾಟಕ್ಕೆ ಸಿದ್ಧತೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಜುಲೈ 17ರ ತಡರಾತ್ರಿ 1 ಗಂಟೆ ಸುಮಾರಿಗೆ ಲಾರಿ ಸಮೇತ ಆರೋಪಿಗಳು ಬಂದಿದ್ದು, ಅದನ್ನು ಪ್ರಶ್ನಿಸಿದ್ದ ಕೋರ್ಟ್ನ ಭದ್ರತಾ ಸಿಬ್ಬಂದಿಗೆ ಹಿಟಾಚಿ ನಮ್ಮದೇ ಕಾಮಗಾರಿ ಮುಕ್ತಾಯವಾಗಿರುವುದರಿಂದ ಬೇರೆ ಕಡೆಗೆ ಕೊಂಡೊಯ್ಯಬೇಕು ಎಂದು ಸುಳ್ಳು ಹೇಳಿದ್ದಾರೆ.
ಪ್ರತಿದಿನ ಕಾಮಗಾರಿ ಸ್ಥಳದಲ್ಲೂ ಆರೋಪಿಗಳನ್ನು ನೋಡುತ್ತಿದ್ದರಿಂದ ಸೆಕ್ಯೂರಿಟಿ ಗಾರ್ಡ್ ಲಾರಿಯನ್ನು ಒಳಗಡೆ ಬಿಟ್ಟಿದ್ದಾನೆ. ಬಳಿಕ ಆರೋಪಿಗಳು ಲಾರಿಯಲ್ಲಿ ಹಿಟಾಚಿ ಯಂತ್ರವನ್ನು ಹಾಕಿಕೊಂಡು ಪರಾರಿಯಾಗಿದ್ದರು. ಮರು ದಿನ ಬೆಳಿಗ್ಗೆ ಕಾರ್ಮಿಕರು ಬಂದು ಕಾಮಗಾರಿ ನಡೆಸಲು ಮುಂದಾದ ವೇಳೆ ಹಿಟಾಚಿ ಕಳ್ಳತನವಾಗಿರುವುದು ಗೊತ್ತಾಗಿದೆ. ಆರೋಪಿಗಳು ಹಿಟಾಚಿ ಕಳವು ಮಾಡುತ್ತಿರುವುದು ನ್ಯಾಯಾಲಯದ ಆವರಣದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿತ್ತು. ಈ ಸಂಬಂಧ ಗೋವಿಂದರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಗಳು, ಹಿಟಾಚಿ ಮಾಲೀಕನ ನಡುವೆ ಜಗಳ: ಹಿಟಾಚಿ ಮಾಲೀಕರು ಹಾಗೂ ಆರೋಪಿಗಳ ನಡುವೆ 15 ವರ್ಷಗಳ ಸ್ನೇಹವಿತ್ತು. ಆರೋಪಿಗಳು ಕೂಡ ಹಿಟಾಚಿ ಹೊಂದಿದ್ದಾರೆ. ಹಣಕಾಸಿನ ವ್ಯವಹಾರವೂ ಇಬ್ಬರ ನಡುವೆ ಇತ್ತು. ಈ ನಡುವೆ ಹಣಕಾಸಿನ ವಿಚಾರದಲ್ಲಿ ಆರೋಪಿಗಳು ಹಾಗೂ ಗೋವಿಂದರಾಜು ನಡುವೆ ಜಗಳ ನಡೆದಿತ್ತು. ಅದೇ ದ್ವೇಷದಿಂದ ಹಿಟಾಚಿ ಯಂತ್ರ ಕಳವು ಮಾಡಿ ಮಾರಾಟಕ್ಕೆ ಮುಂದಾಗಿದ್ದರು. ಜಿಗಣಿಯ ಹೋಟೆಲ್ ವೊಂದರಲ್ಲಿ ಕುಳಿತು ಚರ್ಚಿಸುತ್ತಿದ್ದ ವೇಳೆ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು
Bengaluru: ನಗರದಲ್ಲಿ ಏಕಕಾಲಕ್ಕೆ 200 ಗಣೇಶ ಮೂರ್ತಿಗಳ ಮೆರವಣಿಗೆ
Parappana Agrahara Prison: ಪರಪ್ಪನ ಅಗ್ರಹಾರ ಜೈಲಲ್ಲಿ ಮತ್ತೆ ಮೊಬೈಲ್ಗಳು ಪತ್ತೆ
Bengaluru: ಚಿನ್ನಾಭರಣ ಮಳಿಗೆಯಲ್ಲಿ ತಡರಾತ್ರಿ ದುಷ್ಕರ್ಮಿಗಳಿಂದ ಕಳವಿಗೆ ಯತ್ನ
BBMP: ರಜೆ ದಿನದಲ್ಲೂ ಗುಂಡಿ ಮುಚ್ಚಿದ ಪಾಲಿಕೆ ನೌಕರರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.