Arrested: ಜನರನ್ನು ಅಡ್ಡಗಟ್ಟಿ ಸುಲಿಗೆಗೈದ ಇಬ್ಬರು ಆರೋಪಿಗಳ ಬಂಧನ
Team Udayavani, Jun 10, 2024, 12:01 PM IST
ಬೆಂಗಳೂರು: ಸಾರ್ವಜನಿಕರ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಇಬ್ಬರು ಆರೋ. ಪಿಗಳನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಜೆ.ಸಿ.ನಗರದ ಮೊಹಮ್ಮದ್ ಜಬಿ (22) ಮತ್ತು ಭಾರತಿನಗರದ ರೆಯಾನ್(20) ಬಂಧಿತರು.
ಆರೋಪಿಗಳಿಂದ 60 ಸಾವಿರ ರೂ. ಮೌಲ್ಯದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳು ಮೇ 22ರಂದು ಬೆಳಗ್ಗೆ ಸುಮಾರು 8.45ಕ್ಕೆ ಬಾಗಲೂರು ಲೇಔಟ್ ನಿವಾಸಿ ಧರ್ಮಲಿಂಗಂ ಎಂಬುವರು ದ್ವಿಚಕ್ರ ವಾಹನದಲ್ಲಿ ಪುಲಿಕೇಶಿ ನಗರದ ಹೇನ್ಸ್ ರಸ್ತೆಯ ಹರಿದ್ರ ಗಣಪತಿ ದೇವಸ್ಥಾನ ಬಳಿ ಬರುವಾಗ, ದ್ವಿಚಕ್ರ ವಾಹನದಲ್ಲಿ ಬಂದು ಧರ್ಮಲಿಂಗಂ ಅವರ ದ್ವಿಚಕ್ರ ವಾಹನ ಅಡ್ಡಗಟ್ಟಿ ಕೀ ಕಿತ್ತುಕೊಂಡಿದ್ದಾರೆ. ಬಳಿಕ ಧರ್ಮಲಿಂಗಂ ಮೊಬೈಲ್ ಮತ್ತು ಪರ್ಸ್ ಕಿತ್ತುಕೊಂಡು ಪರಿಶೀಲಿಸಿದ್ದಾರೆ. ಬಳಿಕ ಮೊಬೈಲ್ ವಾಪಸ್ ಕೊಟ್ಟು ಪರ್ಸ್ನೊಂದಿಗೆ ಪರಾರಿ ಯಾಗಿದ್ದರು. ಆರೋಪಿ ಜಬಿ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್, ಎಚ್ಎಸ್ಆರ್ ಲೇಔಟ್, ಹೆಬ್ಟಾಳ, ಕೆ.ಆರ್.ಪುರ, ಸದಾಶಿವ ನಗರ ಠಾಣೆಗಳಲ್ಲಿ ರಾಬರಿ, ಕಳವು ಕೇಸ್ ದಾಖಲಾಗಿವೆ. ಉಪ್ಪಾರ ಪೇಟೆ ಠಾಣೆಯಲ್ಲಿ ಕೊಲೆ, ಅವಲಹಳ್ಳಿ ಠಾಣೆಯಲ್ಲಿ ಕಳವು, ರಾಬರಿ ಪ್ರಕರಣಗಳಲ್ಲಿ ಭಾಗಿ ಯಾಗಿ ¨ªಾನೆ. ಕೆಲ ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ ಜಾಮೀನಿನ ಮೇಲೆ ಹೊರಬಂದು ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ. ಮತ್ತೂಬ್ಬ ಆರೋಪಿ ರೆಯಾನ್ ವಿರುದ್ಧ ಪುಲಿಕೇಶಿನಗರ ಠಾಣೆಯಲ್ಲಿ ಕೇಸ್ದಾಖ ಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.