Arrested: ಜಲಮಂಡಳಿಯ ಸೆಂಟ್ರಿಂಗ್ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ
Team Udayavani, Sep 30, 2024, 1:23 PM IST
ಬೆಂಗಳೂರು: ಜಲಮಂಡಳಿಗೆ ಸೇರಿದ ಸ್ಥಳದಲ್ಲಿ ಕಟ್ಟಡ ಕಾಮಗಾರಿಗೆ ಬಳಸುವ ಸೆಂಟ್ರಿಂಗ್ ಸಾಮಗ್ರಿಗಳನ್ನು ಕಳವು ಮಾಡಿದ್ದ ಇಬ್ಬರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸರ್ಜಾಪುರ ಮುಖ್ಯ ರಸ್ತೆಯ ಸೋಂಪುರ ಗೇಟ್ ನಿವಾಸಿ ರಂಜಿತ್ ತಾತಿ(26) ಮತ್ತು ಕಳವು ಮಾಲು ಸ್ವೀಕರಿಸಿದ್ದ ವಿಜಯನಗರ ಆರ್ಪಿಸಿ ಲೇಔಟ್ ನಿವಾಸಿ
ಸೈಯದ್ ಸಾಹಿಲ್(42) ಬಂಧಿತರು. ಆರೋಪಿಗಳಿಂದ ಸುಮಾರು 5 ಲಕ್ಷ ರೂ. ಮೌಲ್ಯದ ಸೆಂಟ್ರಿಂಗ್ ಸಾಮಾಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಪೈಕಿ ರಂಜಿತ್ ತಾತಿ
ಸೆಕ್ಯೂರಿಟಿ ಫೀಲ್ಡ್ ಆಫೀಸರ್ ಆಗಿದ್ದು, ಸೈಯದ್ ಸಾಹಿಲ್ ಗುಜರಿ ವ್ಯಾಪಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.
ಹೆಮ್ಮಿಗೇಪುರ ಮುಖ್ಯರಸ್ತೆಯಲ್ಲಿ ಬೆಂಗಳೂರು ಜಲಮಂಡಳಿಗೆ ಸೇರಿದ ಜಾಗದಲ್ಲಿ 13 ಎಂಎಲ್ಡಿ ಸಾಮರ್ಥ್ಯ ಎಸ್ಟಿಪಿ ನಿರ್ಮಿಸಲು ಖಾಸಗಿ ಕಂಪನಿಯೊಂದು ಗುತ್ತಿಗೆ ಪಡೆದು ಕಾಮಗಾರಿ ನಡೆಸುತ್ತಿದೆ. ಸೆ.6ರಿಂದ 8ರ ನಡುವೆ ದುಷ್ಕರ್ಮಿಗಳು ಈ ಕಾಮಗಾರಿ ಸ್ಥಳದಲ್ಲಿ 200 ಕಬ್ಬಿಣದ ಶೀಟ್ಗಳು, ಸ್ಲ್ಯಾಬ್ಗಳು ಸೇರಿ ಇತರೆ ಸೆಂಟ್ರಿಂಗ್ ಸಾಮಾಗ್ರಿಗಳನ್ನು ಕಳವು ಮಾಡಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸಿಸಿ ಕ್ಯಾಮೆರಾ ಸುಳಿವು ಆಧರಿಸಿ ಬಂಧನ: ವಿವಿಧ ಆಯಾಮಗಳಲ್ಲಿ ತನಿಖೆ ಆರಂಭಿಸಿದ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಸಿಕ್ಕ ಸುಳಿವು ಆಧರಿಸಿ ಆರೋಪಿ ರಂಜಿತ್ ನನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆ ವೇಳೆ ಆರೋಪಿಯು ಸೆಂಟ್ರಿಂಗ್ ಸಾಮಾಗ್ರಿ ಕಳವು ಮಾಡಿದ್ದು ತಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈತ ನೀಡಿದ ಮಾಹಿತಿ ಮೇರೆಗೆ ಕಳವು ಮಾಲು ಸ್ವೀಕರಿಸಿದ್ದ ಆರೋಪಿ ಸೈಯದ್ ಸಾಹಿಲ್ನನ್ನು ಬಂಧಿಸಿದ್ದಾರೆ.
ಅಸ್ಸಾಂ ಮೂಲದ ಆರೋಪಿ ರಂಜಿತ್ ಸೆಕ್ಯೂರಿಟಿ ಫೀಲ್ಡ್ ಆಫೀಸ್ ಆಗಿದ್ದು, ಕುಟುಂಬದ ಜತೆ ಸರ್ಜಾಪುರ ಮುಖ್ಯರಸ್ತೆಯ ಸೋಂಪುರ ಗೇಟ್ ಬಳಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದಾನೆ. ಆರೋಪಿ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಕಾಮಗಾರಿ ಸ್ಥಳದಿಂದ ಸೆಟ್ರಿಂಗ್ ಸಾಮಾಗ್ರಿಗಳನ್ನು ಕಳವು ಮಾಡಿದ್ದ. ಕದ್ದ ಮಾಲುಗಳನ್ನು ಗುಜರಿ ವ್ಯಾಪಾರಿ ಸೈಯದ್ ಸಾಹಿಲ್ಗೆ ಮಾರಾಟ ಮಾಡಿದ್ದ ಎಂಬುದು ವಿಚಾರಣೆಯಿಂದ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubli: ಬಂಡತನ ಇದ್ದರೆ ಏನು ಮಾಡುವುದಕ್ಕಾಗುತ್ತದೆ…; ಸಿಎಂ ಕುರಿತು ಶೆಟ್ಟರ್ ಮಾತು
Sleep Champion; ನಿದ್ದೆ ಮಾಡಿ 9 ಲಕ್ಷ ರೂ ಗೆದ್ದ ಬೆಂಗಳೂರಿನ ಯುವತಿ
Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ
Toxic Movie: ಯಶ್ ʼಟಾಕ್ಸಿಕ್ʼ ಅಖಾಡಕ್ಕೆ ಖಡಕ್ ಬ್ರಿಟೀಷ್ ನಟ ಎಂಟ್ರಿ
Gadag; ಚಾಮುಂಡೇಶ್ವರಿ ವಿಚಾರದಲ್ಲಿ ಪ್ರೊ.ಭಗವಾನ್ ಜನರ ದಾರಿ ತಪ್ಪಿಸುತ್ತಿದ್ದಾರೆ: ಬೊಮ್ಮಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.