Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು


Team Udayavani, Sep 16, 2024, 12:24 PM IST

Suspension: ಸುಳ್ಳು ಮಾಹಿತಿ ಮೇರೆಗೆ ಇಬ್ಬರು ಯುವಕರ ಬಂಧನ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು: ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಪಿಎಸ್‌ಐ ಸೇರಿ ನಾಲ್ವರು ಅಧಿಕಾರಿ-ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬನಶಂಕರಿ ಪೊಲೀಸ್‌ ಠಾಣೆಯ ಪಿಎಸ್‌ಐ ಶ್ರೀಧರ್‌ ಗುಗ್ರಿ, ಎಎಸ್‌ಐ ಎಸ್‌.ಕೆ.ರಾಜು, ಕಾನ್‌ಸ್ಟೇಬಲ್‌ ಸತೀಶ್‌ ಬಗಲಿ ಹಾಗೂ ತಿಮ್ಮಣ್ಣ ಪೂಜಾರ್‌ ಅಮಾನತುಗೊಳಿಸಿ ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್‌ ಬಿ.ಜಗಲಸಾರ ಆದೇಶ ಹೊರಡಿಸಿದ್ದಾರೆ.

ಆ.9ರಂದು ಕದಿರೇನಹಳ್ಳಿಯ ಸಿಮೆಂಟ್‌ ರಸ್ತೆಯಲ್ಲಿ ಡ್ರಗ್ಸ್‌ ಮಾರುತ್ತಿದ್ದ ಆರೋಪದಡಿ ಐದಾರು ಮಂದಿಯನ್ನು ಅಮಾನತುಗೊಂಡ ಅಧಿಕಾರಿ-ಸಿಬ್ಬಂದಿ ಬಾತ್ಮೀದಾರನ ಮಾಹಿತಿ ಆಧರಿಸಿ ಠಾಣೆಗೆ ಕರೆದೊಯ್ದಿದ್ದರು. ಆರೋಪಿತರ ದ್ವಿಚಕ್ರ ವಾಹನದಲ್ಲಿದ್ದ 400ಕ್ಕೂ ಅಧಿಕ ಗ್ರಾಂ ತೂಕದ ಅಫೀಮು ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಐದಾರು ಮಂದಿ ಪೈಕಿ ಇಬ್ಬರು ಯುವಕರನ್ನು ಮಾತ್ರ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿತ್ತು.

ಅದರಿಂದ ಆತಂಕಗೊಂಡ ಬಂಧಿತ ಯುವಕರ ಕುಟುಂಬ ಸದಸ್ಯರು, ಬಾತ್ಮೀದಾರ ರಾಜನ್‌ ಎಂಬಾತನ ಕೈವಾಡವಿದೆ ಎಂದು ಆರೋಪಿಸಿ ನಗರ ಪೊಲೀಸ್‌ ಆಯುಕ್ತರು ಮತ್ತು ದಕ್ಷಿಣ ವಿಭಾಗದ ಡಿಸಿಪಿಗೆ ದೂರು ನೀಡಿದ್ದರು. ಈ ಸಂಬಂಧ ಸುಬ್ರಹ್ಮಣ್ಯಪುರ ಉಪವಿಭಾಗದ ಎಸಿಪಿ ಗಿರೀಶ್‌ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಆಗ ಬಂಧಿತ ಇಬ್ಬರು ಯುವಕರು ಅಮಾಯಕರಾಗಿದ್ದು, ಉದ್ದೇಶ ಪೂರ್ವಕವಾಗಿ ಬಂಧಿಸಲಾಗಿದೆ ಎಂದು ಎಸಿಪಿ ಗಿರೀಶ್‌ ವರದಿ ನೀಡಿದ್ದರು. ಈ ವರದಿ ಆಧರಿಸಿ ನಾಲ್ವರು ಅಧಿಕಾರಿಗಳ ವಿರುದ್ಧ ಇಲಾಖೆಗೆ ಆದೇಶಿದಲ್ಲದೆ, ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ತೋರಿದ ಆರೋಪದಡಿ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಪಿಎಸ್‌ಐ ಸೇರಿ ನಾಲ್ವರು ಮಂದಿಗೂ ಬಾತ್ಮೀದಾರ ರಾಜನ್‌ಗೂ ಹಣಕಾಸಿನ ವ್ಯವಹಾರ ಇದೆಯೇ? ಎಂಬ ಮಾಹಿತಿ ಪಡೆಯಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಬಾತ್ಮೀದಾರ ಸೇರಿ ಇಬ್ಬರ ಬಂಧನ: ಸುಳ್ಳು ಮಾಹಿತಿ ನೀಡಿದ್ದ ರಾಜನ್‌ ಹಾಗೂ ಆತನ ಸ್ನೇಹಿತೆ ಚೈತ್ರಾಳನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಜನ್‌ ಸೂಚನೆ ಮೇರೆಗೆ ಚೈತ್ರಾ ಅಮಾಯಕ ಯುವಕರ ಬೈಕ್‌ನಲ್ಲಿ ಮಾದಕ ವಸ್ತು ಇಟ್ಟಿದ್ದಳು. ಹೀಗಾಗಿ ಇಬ್ಬರನ್ನು ಬಂಧಿಸಲಾಗಿದ್ದು,ರಾಜನ್‌ಗೆ 400 ಗ್ರಾಂ ತೂಕದ ಮಾದಕ ವಸ್ತು ಹೇಗೆ ಸಿಕ್ಕಿತ್ತು. ಈತನೇ ಡ್ರಗ್ಸ್‌ ಪೆಡ್ಲರ್‌ಗಳ ಜತೆ ಸಂಪರ್ಕ ಹೊಂದಿದ್ದಾನೆಯೇ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ವೈಯಕ್ತಿಕ ದ್ವೇಷ ಕಾರಣ:  ಪೊಲೀಸ್‌ ಬಾತ್ಮೀದಾರ ರಾಜನ್‌ ಮತ್ತು ಇಬ್ಬರು ಅಮಾಯಕ ಯುವಕರ ನಡುವೆ ವೈಯಕ್ತಿಕ ದ್ವೇಷ ಇತ್ತು. ಹೀಗಾಗಿ ಆ ಯುವಕರನ್ನು ಸಿಲುಕಿಸುವ ಉದ್ದೇಶದಿಂದ ಚೈತ್ರಾಳ ಮೂಲಕ ಯುವಕರ ಬೈಕ್‌ನಲ್ಲಿ ಮಾದಕ ವಸ್ತು ಇರಿಸಿದ್ದ. ನಂತರ ಪೊಲೀಸರಿಗೆ ಮಾಹಿತಿ ನೀಡಿ ದಾಳಿ ಮಾಡಿಸಿದ್ದ. ಬಾತ್ಮೀದಾರ ರಾಜನ್‌ ಮಾಹಿತಿಯನ್ನು ಪರಿಶೀಲಿಸದೆಯೇ ಪೊಲೀಸರು ನಾಮಕೆವಾಸ್ತೆಗೆ ಐದಾರು ಮಂದಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು, ಆ ಇಬ್ಬರು ಯುವಕರನ್ನು ಮಾತ್ರ ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದರು.

ಕರ್ತವ್ಯಲೋಪ ಆರೋಪದಡಿ ಬನಶಂಕರಿ ಠಾಣೆಯ ಪಿಎಸ್‌ಐ ಸೇರಿನಾಲ್ವರು ಅಧಿಕಾರಿ-ಸಿಬ್ಬಂದಿ ಅಮಾನತು ಗೊಳಿಸಲಾಗಿದೆ. ಸುಳ್ಳು ಮಾಹಿತಿ ನೀಡಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. -ಲೋಕೇಶ್‌ ಬಿ.ಜಗಲಸಾರ, ದಕ್ಷಿಣ ವಿಭಾಗದ ಡಿಸಿಪಿ

 

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.