ಕಲೆ ಮತ್ತು ಸಾಹಿತ್ಯಕ್ಕೆ ಸೃಜನಶೀಲತೆಯೇ ಮೂಲ


Team Udayavani, Feb 15, 2017, 11:42 AM IST

chandrasherkar-la.jpg

ಬೆಂಗಳೂರು: “ಚಿತ್ರಕಲೆ ಮತ್ತು ಸಾಹಿತ್ಯಕ್ಕೆ ಸೃಜನಶೀಲತೆಯೇ ಮೂಲ,” ಎಂದು ಜ್ಞಾನಪೀಠ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟಿದ್ದಾರೆ. “ಫೈನ್‌ ಆರ್ಟ್‌ ಕಾಲೇಜ್‌’ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ಚಿತ್ರಕಲಾ ಪರಿಷತ್ತಿನಲ್ಲಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಕಲಾವಿದರ ಶಿಬಿರದಲ್ಲಿ ಮಾತನಾಡಿದ ಅವರು, “ಸೃಜನಶೀಲತೆಯೇ ಕಲೆಯ ದೊಡ್ಡ ಸಂಪತ್ತು. ಅದು ಎಂದಿಗೂ ಸ್ವಂತಿಕೆಯನ್ನೇ ಅಪೇಕ್ಷಿಸುತ್ತದೆ. ಕಲಾವಿದರ ಪ್ರತಿಭೆ ಕಲಾಕೃತಿಗಳಲ್ಲಿ ಅಡಕವಾಗಿರುತ್ತದೆ,” ಎಂದು ಹೇಳಿದರು.

“ಕಲಾವಿದರ ಮನದಾಳದ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ಉತ್ತಮ ವೇದಿಕೆಗಳ ಅಗತ್ಯವಿದೆ. ಚಿತ್ರಕಲಾ ಪರಿಷತ್ತು ಅಂತಹ ವೇದಿಕೆ ಒದಗಿಸಿದ್ದು, ಅದರ ಸದುಪಯೋಗವಾಗಬೇಕು. ಬದುಕು ಮತ್ತು ಅದರ ಹಿನ್ನೆಲೆ ಕಟ್ಟಿಕೊಡುವ ಕಲಾವಿದರ ಕಲಾಕೃತಿಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ,” ಎಂದು ಹೇಳಿದರು. 

ರಾಜ್ಯಸಭಾ ಸದಸ್ಯ ಡಾ.ಎಂ.ವಿ.ರಾಜೀವ್‌ಗೌಡ ಮಾತನಾಡಿ, “ಕಲಾವಿದರು ಕಲಾಕೃತಿಗಳ ಮೂಲಕ ಸಮಾಜಕ್ಕೆ ನೀಡುವ ಸಂದೇಶ ಕಾನೂನಿಗಿಂತ ಮಿಗಿಲಾದದ್ದು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸಲು ಕಲಾವಿದರ ಕೊಡುಗೆ ದೊಡ್ಡದು,” ಎಂದರು.  ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌, “ಕಲಾವಿದರು ರಚಿಸುವ ಕಲಾಕೃತಿಗಳಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ.

ಕಲಾಕೃತಿ ಮತ್ತು ಕಲಾವಿದರು ಕರ್ನಾಟಕದ ಆಸ್ತಿ,” ಎಂದರು.  ಕಾರ್ಯಕ್ರಮದಲ್ಲಿ ಪರಿಷತ್ತಿನ ಕಾರ್ಯದರ್ಶಿ ಪ್ರೊ.ಎಂ.ಜೆ.ಕಮಲಾಕ್ಷಿ, ಸಹಾಯಕ ಕಾರ್ಯದರ್ಶಿ ಪ್ರೊ.ಕೆ.ಎಸ್‌.ಅಪ್ಪಜಯ್ಯ ಉಪಸ್ಥಿತರಿದ್ದರು. ಮಂಗಳವಾರದಿಂದ ಆರಂಭವಾಗಿರುವ ರಾಷ್ಟ್ರೀಯ ಕಲಾ ಶಿಬಿರದಲ್ಲಿ ವಿವಿಧ ರಾಜ್ಯಗಳ 16 ಕಲಾವಿದರು ಭಾಗವಹಿಸಿದ್ದರು.  

ಫೆ.25ರಿಂದ ನ್ಯಾಷನಲ್‌ ಕಲಾ ಶಿಬಿರ: “ಫೆ.25ರಿಂದ 10 ದಿನಗಳ ಕಾಲ ನ್ಯಾಷನಲ್‌ ಕಲಾ ಶಿಬಿರ ಆಯೋಜಿಸಲು ಸಿದ್ಧತೆ ನಡೆಸುತ್ತಿದ್ದೇವೆ. ವಿವಿಧ ರಾಜ್ಯಗಳ ಸುಮಾರು 111 ಕಲಾವಿದರು ಈ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ಆಂತರಿಕ ದೃಷ್ಟಿ ಇರುವ ಕಲಾವಿದರಿಗೆ ತಮ್ಮ ಭಾವನೆಗಳನ್ನು ಅಭಿವ್ಯಕ್ತಿಗೊಳಿಸಲು ಬೆಂಗಳೂರಿನಲ್ಲಿ ಅವಕಾಶಗಳು ಬಹಳಷ್ಟಿವೆ. ವಿವಿಧ ಸಮುದಾಯದ, ವಿವಿಧ ಪ್ರಜ್ಞೆಯ ಜನರಿದ್ದು, ಅದರ ಲಾಭ ಪಡೆಯಬಹುದಾಗಿದೆ,” ಎಂದು ಕೇಂದ್ರ ಲಲಿತಕಲಾ ಅಕಾಡೆಮಿ ಆಡಳಿತಾಧಿಕಾರಿ ಚಿ.ಸು.ಕೃಷ್ಣಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.