![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Apr 23, 2024, 12:07 PM IST
ಬೆಂಗಳೂರು: ವ್ಯಕ್ತಿಯೊಬ್ಬ ಅಪ್ರಾಪೆ¤ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಕೆ.ಆರ್.ಪುರದ ಮೇಡಹಳ್ಳಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಕೋಲ್ಕತಾ ಮೂಲದ ಮಂಜುಮ್(30) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಏ.18ರಂದು ಕೃತ್ಯ ಎಸಗಿದ್ದ ಎಂದು ಪೊಲೀಸರು ಹೇಳಿದರು.
ಸಂತ್ರಸ್ತೆ ಕುಟುಂಬ, ಆರೋಪಿ ಒಂದೇ ಏರಿಯಾದಲ್ಲಿ ವಾಸವಾಗಿದ್ದು,. ಏ.18 ರಂದು ಬಾಲಕಿ ತಂದೆ ಹೊರಗೆ ಹೋಗಿದ್ದರು. ಈ ವೇಳೆ ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದಳು. ಅದನ್ನು ಗಮನಿಸಿದ ಆರೋಪಿ ಮನೆಯೊಳಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಾಲಕಿಯ ಪೋಷಕರು ಕೆಲ ಹೊತ್ತಿನ ಬಳಿಕ ಮನೆಗೆ ವಾಪಸ್ ಬಂದಾಗ ಬಾಲಕಿ ಅಸ್ವಸ್ಥಗೊಂಡಿದ್ದಳು. ಅದನ್ನು ಕಂಡು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆಗ ಲೈಂಗಿಕ ದೌರ್ಜನ್ಯ ಎಸಗಿರುವುದು ಬೆಳಕಿಗೆ ಬಂದಿದೆ.
You seem to have an Ad Blocker on.
To continue reading, please turn it off or whitelist Udayavani.