![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
Bengaluru: ನಟ ಧ್ರುವ ಸರ್ಜಾ ಜಿಮ್ ತರಬೇತುದಾರನ ಮೇಲೆ ಹಲ್ಲೆ
Team Udayavani, May 28, 2024, 1:41 PM IST
![Bengaluru: ನಟ ಧ್ರುವ ಸರ್ಜಾ ಜಿಮ್ ತರಬೇತುದಾರನ ಮೇಲೆ ಹಲ್ಲೆ](https://www.udayavani.com/wp-content/uploads/2024/05/11-23-620x372.jpg)
ಬೆಂಗಳೂರು: ನಟ ಧ್ರುವ ಸರ್ಜಾ ಅವರ ಜಿಮ್ ತರಬೇತುದಾರ ಪ್ರಶಾಂತ್ ಪೂಜಾರಿ ಎಂಬುವರ ಮೇಲೆ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಬನಶಂಕರಿ ಕೆ.ಆರ್.ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಹಲ್ಲೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ಬನಶಂಕರಿಯ ಕೆ.ಆರ್.ರಸ್ತೆಯಲ್ಲಿ ಪ್ರಶಾಂತ್ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಾರಕಾಸ್ತ್ರದಿಂದ ಅವರ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈಯಕ್ತಿಕ ವಿಚಾರಕ್ಕೆ ಸ್ಥಳೀಯ ಹುಡುಗರ ಜತೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ ಎನ್ನಲಾಗಿದೆ. ಈ ಬಗ್ಗೆ ಎಫ್ಐಆರ್ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಈ ಕುರಿತು ನಟ ಧ್ರುವ ಸರ್ಜಾ ಪ್ರತಿಕ್ರಿಯಿಸಿ, ಪ್ರಶಾಂತ್ ನಮ್ಮ ಹುಡುಗ, ಅವನ ಜತೆಗಿರುತ್ತೇನೆ ಎಂದಿದ್ದಾರೆ.
ಟಾಪ್ ನ್ಯೂಸ್
![1-sadsadasd](https://www.udayavani.com/wp-content/uploads/2024/06/1-sadsadasd-3-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-sadsadasd](https://www.udayavani.com/wp-content/uploads/2024/06/1-sadsadasd-3-150x90.jpg)
Congress; ಈ ಬಾರಿಯೇ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ
![suicide (2)](https://www.udayavani.com/wp-content/uploads/2024/06/suicide-2-2-150x81.jpg)
kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು
![1-wew-e-weewqewq](https://www.udayavani.com/wp-content/uploads/2024/06/1-wew-e-weewqewq-150x73.jpg)
Muddebihal; 2 ಮರಿಗಳ ಸಮೇತ ಬೃಹತ್ ಹೆಣ್ಣು ಮೊಸಳೆ ಸೆರೆ
![1-wqeqwe](https://www.udayavani.com/wp-content/uploads/2024/06/1-wqeqwe-150x109.jpg)
Gundlupete: ಜನಸ್ಪಂದನಾ ಕಾರ್ಯಕ್ರಮ ಮುಗಿಸಿ ಬರುವಾಗ ಅಪಘಾತ: ಆಹಾರ ನಿರೀಕ್ಷಕ ಸಾವು
![1-sdsads](https://www.udayavani.com/wp-content/uploads/2024/06/1-sdsads-150x90.jpg)
Ramanagara; ಡಿಸಿ ಕಚೇರಿಯಲ್ಲೇ ಹೃದಯಾಘಾತದಿಂದ ನೌಕರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.