3 ತಿಂಗಳಲ್ಲಿ ಆಸ್ತಿ ಡಿಜಿಟಲೀಕರಣ


Team Udayavani, Feb 26, 2020, 3:09 AM IST

3tingalalli

ಬೆಂಗಳೂರು: ನಗರ ಜಿಲ್ಲಾ ಪಂಚಾಯಿತಿ ವ್ಯಪ್ತಿಯ 96 ಗ್ರಾ.ಪಂ.ಗಳಲ್ಲಿ ಮೂರು ತಿಂಗಳೊಳಗೆ ಆಸ್ತಿಗಳ ಡಿಜಿಟಲೀಕರಣ ಕಾರ್ಯ ಪೂರ್ಣಗೊಳ್ಳಲಿದ್ದು, ಬಳಿಕ ಜಿ.ಪಂ ಬೊಕ್ಕಸಕ್ಕೆ ಸುಮಾರು 800 ಕೋಟಿ ರೂ. ತೆರಿಗೆ ಹರಿದು ಬರುವ ನಿರೀಕ್ಷೆಯಿದೆ.

ಜಿಲ್ಲಾಡಳಿತಕ್ಕೆ ಮತ್ತಷ್ಟು ಆದಾಯ ತಂದು ಕೊಡುವ ನಿಟ್ಟಿ ನಲ್ಲಿ ಆಸ್ತಿಗಳ ಡಿಜಿಟಲೀಕರಣ ಕೆಲಸ ಈಗಾಗಲೇ ಆರಂಭ ವಾಗಿದೆ. ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಪಂಚಾಯತ್‌ ರಾಜ್‌ ಇಲಾಖೆ ಮತ್ತು ನಗರ ಜಿ.ಪಂ ಯೋಜನಾ ಅಧಿಕಾರಿಗಳು ನಿರತರಾಗಿದ್ದಾರೆ.

96 ಗ್ರಾ.ಪಂಗಳಿಂದ ಜಿ.ಪಂ.ಗೆ ತೆರಿಗೆ ರೂಪದಲ್ಲಿ ಸುಮಾರು 115 ಕೋಟಿ ರೂ. ಬರುತ್ತಿದೆ. ಆಸ್ತಿಗಳ ಡಿಜಿಟಲೀಕರಣ ಬಳಿಕ ಆದಾಯ ಹೆಚ್ಚಲಿದೆ. ಯೋಜನೆ ಸಮರ್ಪಕ ಅನುಷ್ಠಾನಕ್ಕಾಗಿ ಪಂಚಾಯತ್‌ ರಾಜ್‌ ಇಲಾಖೆಯು ಈಗಾಗಲೇ ಜಿ.ಪಂ ಉಪ ಕಾರ್ಯದರ್ಶಿಗಳನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಿದೆ.

ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಮತ್ತು ಬೆಂಗಳೂರು ಉತ್ತರ ತಾಲೂಕಿನ ರಾಜಾನುಕುಂಟೆ, ಚಿಕ್ಕಜಾಲ, ಚಿಕ್ಕಬಾಣಾವರ, ದೊಡ್ಡ ಜಾಲ ಗ್ರಾ.ಪಂ.ಗಳಲ್ಲಿ ಆರಂಭಿಕ ಹಂತದ ಡಿಜಿಟಲೀಕರಣ ಕೆಲಸ ಪೂರ್ಣಗೊಂಡಿದೆ. ಜತೆಗೆ ಅನೇಕಲ್‌ ತಾಲೂಕಿನ ಹೆನ್ನಾಗರ ಗ್ರಾ.ಪಂನಲ್ಲಿ ಕೆಲಸ ನಡೆದಿದೆ.

ನಗರ ಜಿ.ಪಂ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳ ಸಂಖ್ಯೆ ಹೆಚ್ಚಾಗಿದ್ದು, ತೆರಿಗೆ ಕೂಡ ಸಮರ್ಪಕವಾಗಿ ಸಂಗ್ರಹ ವಾಗುತ್ತಿಲ್ಲ. ಪಂಚತಂತ್ರ ಮತ್ತು ಇ-ಸ್ವತ್ತು ತಂತ್ರಾಂಶಗಳಲ್ಲಿ ಸೇರ್ಪಡೆಯಾಗದಿರುವ ಆಸ್ತಿಗಳೂ ಡಿಜಿಟಲೀಕರಣದಿಂದ ಪತ್ತೆಯಾಗಲಿವೆ.

ಮೂರು ಹಂತಗಳಲ್ಲಿ ಈ ಪ್ರಕ್ರಿಯೆ ನಡೆಯ ಲಿದ್ದು, ಒಂದು ಗ್ರಾ.ಪಂಗೆ ಎಂಟರಂತೆ ಸುಮಾರು 250 ಟ್ಯಾಬ್‌ಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಡಿಜಿ ಟಲೀಕರಣಕ್ಕೆ 5 ಕೋಟಿ.ರೂ. ವೆಚ್ಚವಾಗುವ ನಿರೀಕ್ಷೆ ಯಿದ್ದು, ಸರ್ಕಾರ ಈಗಾಗಲೇ ಅನುದಾನ ಬಿಡುಗಡೆ ಮಾಡಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಸ್ರೋ ಮೂಲಕ ನಕ್ಷೆ: ಸರ್ಕಾರಿ ಆಸ್ತಿಗಳ ಡಿಜಿಟಲೀಕರಣ ಕಾರ್ಯಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸಹಾಯ ಪಡೆಯಲಾಗುವುದು. ಈಗಾಗಲೇ ಇಸ್ರೋ ದಿಂದ ನಕ್ಷೆ ಪ್ರತಿ ಪಡೆದಿದ್ದು, ನಕ್ಷೆ ಮುಂದುಟ್ಟುಕೊಂಡು ಆಸ್ತಿಗಳ ಡಿಜಿಟಲೀಕರಣ ನಡೆಸುವುದಾಗಿ ಬೆಂಗಳೂರು ನಗರ ಜಿ.ಪಂ ಸಹಾಯಕ ಯೋಜನಾಧಿಕಾರಿ ಕೆ.ಜಿ.ಜಗದೀಶ್‌ ತಿಳಿಸಿದ್ದಾರೆ.

ಹೊರಗುತ್ತಿಗೆ ಸಂಸ್ಥೆ ನೆರವು: ಆಸ್ತಿ ಡಿಜಿಟಲೀಕರಣ ಕೆಲಸಕ್ಕೆ ಗ್ರಾ.ಪಂ ಸಿಬ್ಬಂದಿ ಜತೆಗೆ ಹೊರಗುತ್ತಿಗೆ ಸಂಸ್ಥೆ ಸಿಬ್ಬಂದಿಯ ನೆರವು ಪಡೆಯಲಾಗುತ್ತಿದೆ. ಇವರೆಲ್ಲರಿಗೂ ಇ-ಸ್ವತ್ತು, ಮೊಬೈಲ್‌ ಆ್ಯಪ್‌ ಬಳಕೆ ಬಗ್ಗೆ ತರಬೇತಿ ನೀಡಲಾಗಿದೆ. ತೆರಿಗೆ ವ್ಯಾಪ್ತಿಯಿಂದ ಹೊರಗುಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸುವ ಪ್ರಕ್ರಿಯೆ ಕೂಡ ಆರಂಭವಾಗಿದೆ. ಮೂರು ತಿಂಗಳಲ್ಲಿ ಕೆಲಸ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರಂಭಿಕ ಹಂತದಲ್ಲಿ 32 ಗ್ರಾ.ಪಂಗಳಲ್ಲಿ ಆಸ್ತಿ ಡಿಜಿಟಲೀಕರಣ ಆರಂಭವಾಗಿದೆ. ಮೂರು ಹಂತಗಳಲ್ಲಿ ಪ್ರಕ್ರಿಯೆ ನಡೆಯಲಿದ್ದು, ಎಲ್ಲ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತಂದು ದಾಯ ಹೆಚ್ಚಿಸುವ ಉದ್ದೇಶದಿಂದ ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಮತ್ತು ಜಿ.ಪಂ ಈ ಯೋಜನೆ ಕೈಗೊಂಡಿವೆ.
-ಕೆ.ಶಿವರಾಮೇಗೌಡ, ಬೆಂಗಳೂರು ನಗರ ಜಿ.ಪಂ ಸಿಇಒ

* ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.