ಸರ್ಕಾರದಿಂದ ಭರವಸೆ: ಆಶಾ ಮುಷ್ಕರ ಅಂತ್ಯ


Team Udayavani, Sep 9, 2017, 6:00 AM IST

170908kpn82.jpg

ಬೆಂಗಳೂರು: ರಾಜ್ಯ ಸರ್ಕಾರ ಮಾಸಿಕ ಮೂರೂವರೆ ಸಾವಿರ ರೂ. ಪ್ರೋತ್ಸಾಹಧನ ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಎರಡು ದಿನಗಳ ಧರಣಿಯನ್ನು ಶುಕ್ರವಾರ ರಾತ್ರಿ ಕೈಬಿಟ್ಟರು.

ಔಷಧ ನಿಯಂತ್ರಣಾಲಯ ಇಲಾಖೆ ಕಚೇರಿಯಲ್ಲಿ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳೊಂದಿಗೆ ಆರೋಗ್ಯ ಸಚಿವ ರಮೇಶ್‌ಕುಮಾರ್‌ ಸತತ ಎರಡು ತಾಸು ಸಂಧಾನ ಸಭೆ ನಡೆಸಿದರು. ಸರ್ಕಾರ ಮೂರು ಸಾವಿರ ರೂ. ನೀಡುವುದಾಗಿ ಹೇಳಿದರೆ, ಕಾರ್ಯಕರ್ತೆಯರು ಆರು ಸಾವಿರ ರೂ.ಗಳಿಗೆ ಪಟ್ಟುಹಿಡಿದರು. ಅಂತಿಮವಾಗಿ ಸರ್ಕಾರ ಮೂರೂವರೆ ಸಾವಿರ ನೀಡುವುದಾಗಿ ಹೇಳಿತು. ಇದಕ್ಕೆ ಸಮ್ಮತಿಸಿದ ಕಾರ್ಯಕರ್ತೆಯರು ಮುಷ್ಕರ ಹಿಂಪಡೆದರು.

ಕಲ್ಯಾಣ ಮಂಟಪ,ನಿಲ್ದಾಣಗಳಲ್ಲಿ ಆಶ್ರಯ
ಈ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕರ್ತೆಯರು ತಮ್ಮ ಊರುಗಳತ್ತ ಮುಖಮಾಡಿದರು. ಆದರೆ, ರಾತ್ರಿ 9.30ಕ್ಕೆ ಮುಷ್ಕರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದರಿಂದ ದೂರದಿಂದ ಬಂದಿದ್ದ ಅನೇಕರಿಗೆ ರಾತ್ರಿ ಊರಿಗೆ ತೆರಳಲು ಸಾಧ್ಯವಾಗಲಿಲ್ಲ. ಹಾಗಾಗಿ, ಕಾಯ್ದಿರಿಸಿದ್ದ  ಕಲ್ಯಾಣ ಮಂಟಪಗಳಲ್ಲಿ ಕಾರ್ಯಕರ್ತೆಯರು ಆಶ್ರಯ ಪಡೆದರು.
ಗಾಳಿಸಹಿತ ಮಳೆಯ ನಡುವೆಯೇ ಮಕ್ಕಳು-ಮರಿಗಳೊಂದಿಗೆ ಸಹಸ್ರಾರು ಆಶಾ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನದಿಂದ ರೈಲು ನಿಲ್ದಾಣ, ಮೆಜೆಸ್ಟಿಕ್‌ಗಳಿಗೆ ತೆರಳಿದರು. ಆದರೆ, ಅಲ್ಲಿ ಸಾರಿಗೆ ವ್ಯವಸ್ಥೆ ಕೆಲವರಿಗೆ ಸಿಕ್ಕಿತು, ಇನ್ನು ಕೆಲವರು ಅದೇ ನಿಲ್ದಾಣದಲ್ಲಿ ಮಲಗಿದ್ದ ದೃಶ್ಯ ಕಂಡುಬಂದಿತು.

ಸಭೆಯಲ್ಲಿ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಹೊರತುಪಡಿಸಿ, ರಾಜ್ಯ ಸರ್ಕಾರ ಆರು ಸಾವಿರ ರೂ. ನೀಡಬೇಕು ಎಂದು ಆಶಾ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು. ಆದರೆ ಸಚಿವರು, ಮೂರು ಸಾವಿರ ರೂ. ನೀಡುವುದಾಗಿ ಹೇಳಿದರು. ಆದರೆ, ಪದಾಧಿಕಾರಿಗಳು ಬಿಗಿಪಟ್ಟುಹಿಡಿದರು. ಆರು ಸಾವಿರ ರೂ. ನೀಡುವುದಾಗಿ ಘೋಷಿಸುವವರೆಗೂ ಮುಷ್ಕರ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಹಾಗಾಗಿ, ಮತ್ತೆ 500 ರೂ. ಹೆಚ್ಚಿಸುವ ಭರವಸೆ ಸರ್ಕಾರದಿಂದ ಬಂದಿತು.

ಸರ್ಕಾರದ ಭರವಸೆಗಳು
ಪ್ರಸ್ತುತ ರಾಜ್ಯ ಸರ್ಕಾರ ಈಗ ಸಾವಿರ ರೂ. ಪ್ರೋತ್ಸಾಹಧನ ನೀಡುತ್ತಿದೆ. ಇದನ್ನು ಮೂರು ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು. ಹಾಗೂ ಕೇಂದ್ರದಿಂದ ಆಯಾ ಚಟುವಟಿಕೆಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ಕೂಡ ಬರಲಿದೆ. ಜತೆಗೆ ಆಶಾ ಕಾರ್ಯಕರ್ತೆಯರಿಗೆ ಉಚಿತ ಬಸ್‌ ಪಾಸ್‌ ವಿತರಿಸಲಾಗುವುದು. ಸ್ವಸಹಾಯ ಸಂಘಗಳಿಂದ 2 ಲಕ್ಷ ರೂ. ವರೆಗೆ ಸ್ವ-ಉದ್ಯೋಗಕ್ಕೆ ಬಡ್ಡಿರಹಿತ ಸಾಲ ನೀಡಲಾಗುವುದು. ಇದನ್ನು ಕಂತುಗಳಲ್ಲಿ ಪಾವತಿಸಬೇಕು. ಆರು ಸಾವಿರ ಆಶಾ ಕಾರ್ಯಕರ್ತೆಯರಿಗೆ ನಿವೇಶನ ನೀಡಲಾಗುವುದು. ಅಪಘಾತ ಅಥವಾ ಕಾಯಿಲೆಯಿಂದ ಅಕಾಲಿಕ ಸಾವನ್ನಪ್ಪಿದ ಕಾರ್ಯಕರ್ತೆಯರಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಸಚಿವರು ತಿಳಿಸಿದರು.

ಆಗ, ಈ ಬಗ್ಗೆ ಯೋಚಿಸಲು ಸಮಯಾವಕಾಶ ಕೇಳಿದ ಪದಾಧಿಕಾರಿಗಳು, ಕಾರ್ಯಕರ್ತೆಯರೊಂದಿಗೆ ಮತ್ತೂಂದು ಸುತ್ತಿನ ಮಾತುಕತೆ ನಡೆಸಿದರು. ಅಂತಿಮವಾಗಿ ಮುಷ್ಕರ ಹಿಂಪಡೆಯುವ ನಿರ್ಧಾರ ಪ್ರಕಟಿಸಿದರು. ಒಮ್ಮೆಲೇ ಸಹಸ್ರಾರು ಕಾರ್ಯಕರ್ತೆಯರು ನಿಲ್ದಾಣಗಳತ್ತ ಹೊರಟಿದ್ದರಿಂದ ಹಾಗೂ ಮಳೆ ಕೂಡ ಇದ್ದುದರಿಂದ ಸಂಚಾರದಟ್ಟಣೆ ಉಂಟಾಯಿತು.

ಮಳೆ ನಡುವೆಯೂ ಮುಷ್ಕರ
ಈ ಮಧ್ಯೆ ಎರಡನೇ ದಿನ ಸಂಘದ ಪದಾಧಿಕಾರಿಗಳು ನಿರ್ಧಾರ ಪ್ರಕಟಿಸುವವರೆಗೂ ಕಾರ್ಯಕರ್ತೆಯರು ಜಾಗಬಿಟ್ಟು ಕದಲಲಿಲ್ಲ. ಬೆಳಿಗ್ಗೆ ಹತ್ತಿರದ ಚೌಲಿó ಮತ್ತು ಸುಲಭ ಶೌಚಾಲಯಗಳಲ್ಲಿ ಬೆಳಗಿನ ಕಾರ್ಯಗಳನ್ನು ಪೂರೈಸಿ ಮತ್ತೆ ಸ್ವಾತಂತ್ರ್ಯ ಉದ್ಯಾನಕ್ಕೆ ಬಂದು ಧರಣಿಯಲ್ಲಿ ಪಾಲ್ಗೊಂಡರು. ಮಳೆ-ಗಾಳಿ ನಡುವೆ ರಾತ್ರಿಯಿಡೀ ಫ‌ುಟ್‌ಪಾತ್‌ಗಳಲ್ಲಿ ಕಳೆದರೂ, ಕರಗದ ಸರ್ಕಾರದ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರದ ಆರೋಗ್ಯ ಯೋಜನೆಗಳ ಬಹುತೇಕ ಯಶಸ್ಸು ನಮ್ಮ ಶ್ರಮವನ್ನು ಅವಲಂಬಿಸಿದೆ. ಆದೆರ, ನಮ್ಮ ಬಗ್ಗೆ ಸರ್ಕಾರಕ್ಕೆ ಕರುಣೆಯೇ ಇಲ್ಲ. ಮಕ್ಕಳು-ಮರಿಗಳನ್ನು ಕಟ್ಟಿಕೊಂಡು ಸತತ ಎರಡು ದಿನ ಇಲ್ಲಿ ಬಿದ್ದಿದ್ದೇವೆ. ನೂರಾರು ಕಾರ್ಯಕರ್ತೆಯರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ತೆಗೆದುಕೊಂಡು ಮತ್ತೆ ಧರಣಿಯಲ್ಲಿ ಕುಳಿತಿದ್ದಾರೆ’ ಎಂದು ಮಂಡ್ಯದ ಆಶಾ ಕಾರ್ಯಕರ್ತೆ ಲಕ್ಷ್ಮೀ ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಪದಾಧಿಕಾರಿಗಳಾದ ಸೋಮಶೇಖರ್‌, ನಾಗಲಕ್ಷ್ಮಿ, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.