ರೈತರಿಗೆ ಕೊಡಬೇಕಾದ ಹಣಕೇಳಿದ್ದಕ್ಕೆ ರೌಡಿಗಳಿಂದ ಹಲ್ಲೆ


Team Udayavani, Oct 26, 2017, 11:06 AM IST

bng-2.jpg

ಮಹದೇವಪುರ: ಜಮೀನು ವಿವಾದದ ಸಂಧಾನಕ್ಕೆ ತೆರಳಿದ್ದ ಕಾಂಗ್ರೆಸ್‌ನ ಜಿಲ್ಲಾ ಪಂಚಾಯಿತಿ ಸದಸ್ಯನ ಮೇಲೆ ರೌಡಿಗಳು
ಹಲ್ಲೆ ನಡೆಸಿರುವ ಘಟನೆ ಆವಲಹಳ್ಳಿ ಪೊಲೀಸ್‌ ಠಾಣೆಯ ಕಿತ್ತನಗನೂರು ಸಮೀಪ ನಡೆದಿದೆ. ಆವಲಹಳ್ಳಿ ಜಿ.ಪಂ ಸದಸ್ಯ ಕೆ.ವಿ. ಜಯರಾಮ್‌ ಹಲ್ಲೆಗೊಳಗಾ ದವರು. ಘಟನೆಯಲ್ಲಿ ಜಯರಾವ್‌ರ ತಲೆಗೆ ಗಂಭೀರ ಗಾಯವಾಗಿದ್ದು, ರಾಮ ಮೂರ್ತಿ ನಗರದ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತಗನೂರು ಗ್ರಾಮಸ್ಥರಿಂದ ಜಮೀನು ಖರೀದಿಸಿದ್ದ ಎಸ್‌ಎಲ್‌ವಿ ಚಂದ್ರಶೇಖರ್‌ ಎಂಬಾತ, ರೈತರಿಗೆ ಹಣ ನೀಡದೆ ವಂಚಿಸಿದ್ದ. ಅಲ್ಲದೆ ಗ್ರಾಮಸ್ಥರಿಂದ ಖರೀದಿಸಿದ್ದ ಜಮೀನಿನ ಸುತ್ತ ಕಾಂಪೌಡ್‌ ಕಟ್ಟಿಕೊಳ್ಳುವ ಸಲುವಾಗಿ ಬುಧವಾರ ಗುದ್ದಲಿ ಪೂಜೆ ನೆರವೇರಿಸಲು ಕಿತ್ತಗನೂರಿಗೆ ತನ್ನ ಇತರೆ ಸಹಚರರೊಂದಿಗೆ ಬಂದಿದ್ದ. ಈ ವಿಚಾರ ತಿಳಿದ ಸ್ಥಳೀಯ ಗ್ರಾಮಸ್ಥರು ಚಂದ್ರಶೇಖರ್‌ ಜತೆ ಮಾತುಕತೆ
ನಡೆಸುವಂತೆ ಜಿ.ಪಂ ಸದಸ್ಯ ಕೆ.ವಿ.ಜಯರಾಮ್‌ರನ್ನು ಕರೆದೊಯ್ದಿದ್ದರು. 

ಈ ವೇಳೆ ರೈತರು ಮತ್ತು ಚಂದ್ರಶೇಖರ್‌ ನಡುವೆ ಮಾತಿನ ಚಕಮಕಿ ನಡೆದು ತಳ್ಳಾಟ ಕೂಡ ನಡೆದಿದೆ. ಆಗ ಜಯರಾಮ್‌
ಗ್ರಾಮಸ್ಥರ ಪರವಾಗಿ ಮಾತನಾಡಲು ಮಧ್ಯಪ್ರವೇಶಿಸಿದ್ದಾರೆ. ಇದರಿಂದ ಕೆರಳಿದ ರೌಡಿಶೀಟರ್‌ ವಾಲೆ ಮಾರುತಿ ತನ್ನ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಕೆಲ ಹೊತ್ತಿನಲ್ಲೇ ಹತ್ತಾರು ಮಂದಿ ಸಹಚರರ ಜತೆ ಮಾರಕಾಸ್ತ್ರಗಳೊಂದಿಗೆ ಸ್ಥಳಕ್ಕೆ ಬಂದ ವಾಲೆ ಮಾರುತಿ ಸಹೋದರ ವಾಲೆ ಮಂಜ ಕಬ್ಬಿಣದ ಸಲಾಕೆಯಿಂದ ಜಿ.ಪಂ ಸದಸ್ಯ ಜಯರಾಮ್‌ ತಲೆಗೆ ಹಲ್ಲೆ ಮಾಡಿ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ್ದಾನೆ. ಕೆಳಗೆ ಬಿದ್ದು ತೀವ್ರರಕ್ತಸ್ರಾವದಿಂದ ನರಳುತ್ತಿದ್ದ ಜಯರಾಮ್‌ ಅವರನ್ನು
ಕೂಡಲೇ ಸ್ಥಳೀಯ ಗ್ರಾಮಸ್ಥರು ಜಯರಾಮ್‌ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಈ ವೇಳೆ ವಾಲೆ ಮಂಜನಿದ್ದ ಕಾರಿನತ್ತ ಗ್ರಾಮಸ್ಥರು ಕಲ್ಲು ತೂರಾಟ ನಡೆಸಿ ವಾಹನವನ್ನು ಜಖಂಗೊಳಿಸಿದ್ದಾರೆ. ಆದರೆ
ತನ್ನಲ್ಲಿದ್ದ ಪಿಸ್ತೂಲ್‌ ತೋರಿಸಿ ಗ್ರಾಮಸ್ಥರನ್ನು ಬೆದರಿಸಿದ ಮಂಜ, ಫಾರ್ಚೂನರ್‌ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿ ಶಿವಕುಮಾರ್‌ ತಿಳಿದ್ದಾರೆ. ಎಸ್‌ಎಲ್‌ವಿ ಶೇಖರ್‌ ವಿರುದ್ಧ ಈ ಹಿಂದೆಯೇ ಹಲವು ಪ್ರಕರಣಗಳಿದ್ದು ಚೀಟಿ ವ್ಯವಹಾರ ನಡೆಸಿ ಜನರಿಗೆ ವಂಚಿಸಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದೆ.

ಘಟನೆ ಸಂಬಂಧ ಎಸ್‌ಎಲ್‌ವಿ ಚಂದ್ರಶೇಖರ್‌ ಮತ್ತು ವಾಲೆ ಮಂಜ, ವಾಲೆ ಮಾರುತಿ ಸೇರಿದಂತೆ ಇತರರ ವಿರುದ್ಧಪ್ರಕರಣ ದಾಖಲಾಗಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದು, ಅನುಮಾನದ ಮೇರೆಗೆ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

2

Theft Case: ಬ್ಯಾಂಕಿನಿಂದ ಹಣದ ಬ್ಯಾಗ್‌ ಕಳವು ಪ್ರಕರಣ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.