![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, May 15, 2019, 3:02 AM IST
ಬೆಂಗಳೂರು: ಕ್ರಿಕೆಟ್ ಆಡುವಾಗ ನಡೆದ ಗಲಾಟೆ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದ ನಾಲ್ವರು ಆರೋಪಿಗಳನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ.
ಸುಬ್ರಹ್ಮಣ್ಯನಗರದ ಮಂಜುನಾಥ (27), ಗಾಯತ್ರಿನಗರದ ವಿನೋದ್ (28), ಮನೋಜ್ ಕುಮಾರ್(19) ಮತ್ತು ರಾಕೇಶ್ (19) ಬಂಧಿತರು. ಆರೋಪಿಗಳು ಏ.24ರಂದು ಮಂಜುನಾಥನಗರದ ಜೆ.ಸಿ.ಬೇಕರಿ ಸಮೀಪದ ಭರತ್ ಕುಮಾರ್ ಎಂಬಾತನ ಮೇಲೆ ಮಾರಕಾಸðಗಳಿಂದ ಹಲ್ಲೆ ನಡೆಸಿದ್ದರು ಎಂದು ಪೊಲೀಸರು ಹೇಳಿದರು.
ಸಂಜಯ್ನಗರದ ಮೈದಾನದಲ್ಲಿ ಕ್ರಿಕೆಟ್ ಆಡುವಾಗ ಭರತ್ಕುಮಾರ್ ಹಾಗೂ ಸ್ನೇಹಿತರ ಜತೆ ಆರೋಪಿಗಳು ವಾಗ್ವಾದ ನಡೆಸಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಏ.24ರಂದು ತಡರಾತ್ರಿ 12.30ರ ಸುಮಾರಿಗೆ ಮಂಜುನಾಥನಗರದ ಜೆ.ಸಿ.ಬೇಕರಿ ಬಳಿ ಬೈಕ್ನಲ್ಲಿ ಬಂದ ಆರೋಪಿಗಳು,
ಸ್ನೇಹಿತರಾದ ಪ್ರಮೋದ್ ಹಾಗೂ ಮಹೇಂದ್ರ ಜತೆ ಮಾತನಾಡುತ್ತಾ ನಿಂತಿದ್ದ ಭರತ್ಕುಮಾರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು. ಪರಿಣಾಮ ಭರತ್ ಕುಮಾರ್ ಕೈ ಮತ್ತು ಎದೆಗೆ ಗಂಭೀರ ಗಾಯವಾಗಿತ್ತು. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.