Auto driver: ಮದ್ಯದ ಆಸೆಗೆ ಬಿದ್ದು ಆಟೋ ಕಳಕೊಂಡ ಚಾಲಕ


Team Udayavani, Aug 19, 2023, 3:11 PM IST

09

ಬೆಂಗಳೂರು: ದಾಸರಹಳ್ಳಿಯ 8ನೇ ಮೈಲಿ ಅಟೋಸ್ಟಾಂಡ್‌ನ‌ಲ್ಲಿ ಪರಿಚಿತರ ಸೋಗಲ್ಲಿ ಬಂದ ವ್ಯಕ್ತಿಯೊಬ್ಬ ಚಾಲಕನಿಗೆ ಮದ್ಯಪಾನ ಮಾಡಿಸಿ ಆಟೋ ಕಳ್ಳತನ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ. ವಿಜಯ್‌ ಕುಮಾರ್‌ ಆಟೋ ಕಳೆದುಕೊಂಡವರು.

ಆ.17ರಂದು ಮಧ್ಯಾಹ್ನ ಹಳೆಯ ಅಟೋವೊಂದರಲ್ಲಿ ಬಂದಿದ್ದ ಅಪರಿಚಿತ ಆಟೋ ಚಾಲಕನೊಬ್ಬ ವಿಜಯ್‌ ಕುಮಾರ್‌ ಬಳಿ ಬಂದು ಪರಿಚಿತರ ಸೋಗಿನಲ್ಲಿ ಮಾತನಾಡಿದ್ದ. ಈ ಆಟೋ ಸ್ಟ್ಯಾಂಡ್  ನ‌ಲ್ಲಿ ಎಷ್ಟು ದುಡ್ಡು ಬಾಡಿಗೆ ಸಿಗುತ್ತದೆ ಎಂಬಿತ್ಯಾದಿ ಮಾಹಿತಿ ಪಡೆದಿದ್ದ. ಬಳಿಕ ಪಕ್ಕದಲ್ಲಿರುವ ಬಾರ್‌ಗೆ ಹೋಗಿ ಮದ್ಯಪಾನ ಮಾಡೋಣವೆಂದು ವಿಜಯ್‌ ಕುಮಾರ್‌ಅನ್ನು ಕರೆದುಕೊಂಡು ಹೋಗಿದ್ದ. ಆತನ ಮಾತಿನ ಮೋಡಿಗೆ ಮರುಳಾದ ವಿಜಯಕುಮಾರ್‌ ಆಟೋ ನಿಲ್ದಾಣದಲ್ಲೇ ತಮ್ಮ ಆಟೋಯಿಟ್ಟು ಆತನ ಜೊತೆಗೆ ಬಾರ್‌ಗೆ ಹೋಗಿ ಮದ್ಯಪಾನ ಮಾಡಿದ್ದರು.

ಮದ್ಯಪಾನ ಮಾಡಿ ಸ್ವಂತ ಆಟೋದಲ್ಲಿ ಮಲಗಬಾರದು ಎಂದು ಹೇಳಿದ ಅಪರಿಚಿತ ಆತನ ಹಳೆಯ ಆಟೋದಲ್ಲಿ ವಿಜಯ್‌ಕುಮಾರ್‌ಗೆ ಮಲಗುವಂತೆ ಸೂಚಿಸಿದ್ದ. ಅದರಂತೆ ವಿಜಯ್‌ ಕುಮಾರ್‌ ಹಳೆಯ ಆಟೋದಲ್ಲೇ ನಿದ್ದೆಗೆ ಜಾರಿದ್ದರು.

ಇದೇ ಸಮಯಕ್ಕೆ ಕಾದು ಕುಳಿತಿದ್ದ ಅಪರಿಚಿತ ವ್ಯಕ್ತಿ ತನ್ನ ಹಳೆಯ ಆಟೋವನ್ನು ಅಲ್ಲೇ ಬಿಟ್ಟು ವಿಜಯ್‌ ಕುಮಾರ್‌ ಅವರ ಹೊಸ ಆಟೋದಲ್ಲಿ ಪರಾರಿಯಾಗಿದ್ದಾನೆ. ವಿಜಯ್‌ ಕುಮಾರ್‌ ನಿದ್ದೆಯಿಂದ ಎದ್ದಾಗ ಆಟೋ ಕಾಣದೇ ಕಂಗಾಲಾಗಿ ಪಕ್ಕದಲ್ಲಿರುವ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಆಟೋ ಕಳ್ಳತನ ಮಾಡಿರುವುದು ಕಂಡು ಬಂದಿತ್ತು.

ಕೂಡಲೇ ಈ ಬಗ್ಗೆ ಪೀಣ್ಯ ಪೊಲೀಸರಿಗೆ ವಿಜಯ್‌ ಕುಮಾರ್‌ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಹಳೆಯ ಆಟೋವನ್ನು ಸುದ್ದಗುಂಟೆಪಾಳ್ಯದಲ್ಲಿ ಕದ್ದಿರುವುದು ತನಿಖೆಯಲ್ಲಿ ಕಂಡು ಬಂದಿದೆ. ಹೀಗಾಗಿ ಆ ಆಟೋವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನು ಅಟೋದಲ್ಲಿದ್ದ 25 ಸಾವಿರ ಬೆಲೆಬಾಳುವ ವಿಜಯ್‌ಕುಮಾರ್‌ ಮೊಬೈಲ್‌ ಸಹ ಅಪರಿಚಿತ ಕದ್ದಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.