Bangalore: ಮಾಹಿತಿ ನೀಡುವ ನೆಪದಲ್ಲಿ ಪೊಲೀಸರಿಂದಲೇ ಹಣ ವಸೂಲಿ ಮಾಡುತ್ತಿದ್ದ ಆಟೋ ಚಾಲಕ ಸೆರೆ
Team Udayavani, Nov 9, 2023, 10:20 AM IST
ಬೆಂಗಳೂರು: ಅಕ್ರಮ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುವುದಾಗಿ ನಂಬಿಸಿ ಪೊಲೀಸರಿಂದಲೇ ಹಣ ವಸೂಲಿ ಮಾಡುತ್ತಿದ್ದ ಖತರ್ನಾಕ್ ಆಟೋ ಚಾಲಕ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಬನಶಂಕರಿ ನಿವಾಸಿ ವಸೀಂ (32) ಬಂಧಿತ.
ಆಟೋ ಚಾಲಕನಾಗಿರುವ ಆರೋಪಿ, ನಾಲ್ಕು ವರ್ಷಗಳಿಂದ ಬೇರೆ ಬೇರೆ ಹೆಸರುಗಳಿಂದ ಪೊಲೀಸರನ್ನು ಪರಿಚಯಿಸಿಕೊಂಡು, ಬಾತ್ಮೀದಾರನಾಗಿ ಕೆಲಸ ಮಾಡುತ್ತಿದ್ದ. ಈ ವೇಳೆ ಕಷ್ಟ ಎಂದು ಪೊಲೀಸರಿಂದಲೇ 2-5 ಸಾವಿರ ರೂ.ವರೆಗೆ ಹಣ ವಸೂಲಿ ಮಾಡಿದ್ದಾನೆ. ಬಳಿಕ ತಪ್ಪು ಮಾಹಿತಿ ನೀಡಿ, ಪೊಲೀಸರನ್ನು ಯಾಮಾರಿಸುತ್ತಿದ್ದ ಎಂಬುದು ಗೊತ್ತಾಗಿದೆ.
ಆರೋಪಿ ವಾಸೀಂ ಪೊಲೀಸರಿಗೆ ಕರೆ ಮಾಡಿ, ಅಲ್ಲೊಂದು ದಂಧೆ ನಡೆಯುತ್ತಿದೆ. ಆ ಬಗ್ಗೆ ಮಾಹಿತಿ ನೀಡುವೆ ಎನ್ನುತ್ತಿದ್ದ. ಬಳಿಕ ಪೊಲೀಸರು ಸ್ಥಳಕ್ಕೆ ಬರುವುದಾಗಿ ಹೇಳುತ್ತಿದ್ದಂತೆ, ಬೇಡ, ಖುದ್ದು ನಾನೇ ಆ ಸ್ಥಳಕ್ಕೆ ತೆರಳಿ ಲೊಕೇಶನ್ ಕಳುಹಿಸುತ್ತೇನೆ ಎಂದು ಹೇಳುತ್ತಿದ್ದ. ಕೆಲ ಹೊತ್ತಿನ ಬಳಿಕ ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಮಾರ್ಗ ಮಧ್ಯೆ ಆಟೋದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಮನೆಯಲ್ಲಿ ಸಮಸ್ಯೆಯಿದ್ದು, ಹಣವಿಲ್ಲ ಎನ್ನುತ್ತಿದ್ದ. ಈತನ ಮಾತು ನಂಬಿದ ಪೊಲೀಸರು, ಫೋನ್ ಪೇ ಅಥವಾ ಗೂಗಲ್ ಪೇ ಮೂಲಕ 2-5 ಸಾವಿರ ರೂ.ವರೆಗೂ ಕಳುಹಿಸುತ್ತಿದ್ದರು.
ಖಾತೆಗೆ ಹಣ ಬೀಳುತ್ತಿದ್ದಂತೆ ಆರೋಪಿ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ನಾಪತ್ತೆಯಾಗುತ್ತಿದ್ದ. ಹೀಗೆ ಸಿಸಿಬಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರಿಗೆ ನಾಲ್ಕು ವರ್ಷಗಳಿಂದ ವಂಚಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಕಾಟನ್ಪೇಟೆ ಠಾಣೆಯಲ್ಲಿ ವಸೀಂ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ
Dengue ನಿಯಂತ್ರಣಕ್ಕೆ ಸರಕಾರದ ಬಳಿ ದುಡ್ಡಿಲ್ಲ: ಅಶೋಕ್
Dengue: ಜನರ ಪ್ರಾಣ ಹೋಗುವ ಮುನ್ನ ಸರಕಾರ ಎಚ್ಚೆತ್ತುಕೊಳ್ಳಲಿ: ಶೋಭಾ ಕರಂದ್ಲಾಜೆ
Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್
BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್ಗೆ ಪಾಲಿಕೆ ಬೀಗ
MUST WATCH
ಹೊಸ ಸೇರ್ಪಡೆ
Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ
Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 44 ಶಾಲೆಗಳಿಗೆ ರಜೆ ಘೋಷಣೆ
Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.