3,400 ಕೋಟಿ ವ್ಯಯಿಸಿದರೂ ಪ್ರವಾಹ ತಪ್ಪಲಿಲ್ಲ  


Team Udayavani, Sep 13, 2022, 12:51 PM IST

tdy-4

ಬೆಂಗಳೂರು: ರಾಜಕಾಲುವೆ ಒತ್ತುವರಿ ತೆರವು, ಅಭಿವೃದ್ಧಿಯಿಂದಷ್ಟೆ ನಗರದಲ್ಲಿ ಸೃಷ್ಟಿಯಾಗುವ ಪ್ರವಾಹ ಪರಿಸ್ಥಿತಿ ತಡೆಯಬಹುದು ಎಂದು ಬಿಬಿಎಂಪಿ ಅಧಿಕಾರಿಗಳು ಹೇಳುತ್ತಿದ್ದಾರೆ. ಅದಕ್ಕೆ ತಕ್ಕಂತೆ 2019- 20ರಿಂದ 2022-23ರವರೆಗೆ 3,400 ಕೋಟಿ ರೂ.ಗೂ ಹೆಚ್ಚಿನ ಹಣ ವ್ಯಯಿಸಲಾಗಿದೆ. ಆದರೂ ಈವರೆಗೆ ಪ್ರವಾಹಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿಲ್ಲ.

ಒಂದು ಕಾಲದಲ್ಲಿ ಬೆಂಗಳೂರಿನಲ್ಲಿ ಸಾವಿರಕ್ಕೂ ಹೆಚ್ಚಿನ ಕೆರೆಗಳು, 2 ಸಾವಿರ ಕಿ.ಮೀ. ಹೆಚ್ಚಿನ ಉದ್ದದ ಮಳೆ ನೀರುಗಾಲುವೆ (ರಾಜಕಾಲುವೆ) ಗಳಿದ್ದವು. ಆದರೆ, ಸದ್ಯ ನಗರದಲ್ಲಿ 210 ಕೆರೆಗಳು, 842 ಕಿ.ಮೀ. ಉದ್ದದ ಮಳೆ ನೀರುಗಾಲುವೆಗಳಿವೆ. ಅದರಲ್ಲಿ 50ಕ್ಕೂ ಹೆಚ್ಚಿನ ಕೆರೆಗಳ ಅಭಿವೃದ್ಧಿ ಮಾಡಲಾಗಿದ್ದು, 32 ಕೆರೆಗಳ ಅಭಿವೃದ್ಧಿ ಕಾರ್ಯ ಚಾಲ್ತಿಯಲ್ಲಿದೆ. ಅದೇ ರೀತಿ ರಾಜಕಾಲುವೆಅಭಿವೃದ್ಧಿಗೆ ಸಂಬಂಧಿಸಿದಂತೆ ಈವರೆಗೆ 400 ಕಿ.ಮೀ. ಉದ್ದದ ರಾಜಕಾಲುವೆಗಳಿಗೆ ಕಾಂಕ್ರಿಟ್‌ ಸೈಡ್‌ವಾಲ್‌ ನಿರ್ಮಾಣ ಕಾರ್ಯಪೂರ್ಣ ಗೊಳಿಸಲಾಗಿದೆ.

ಅದರಂತೆ ಕಳೆದ ನಾಲ್ಕೈದು ವರ್ಷ ಗಳಲ್ಲಿ ರಾಜಕಾಲುವೆ ದುರಸ್ತಿ, ಅಭಿವೃದ್ಧಿಗಾಗಿಯೇ 3,400 ಕೋಟಿ ರೂ. ವ್ಯಯಿಸಲಾಗಿದೆ. ಅದರಲ್ಲೂ 2021ಕ್ಕೂ ಹಿಂದಿನ 5 ವರ್ಷಗಳಲ್ಲಿ 312 ಕಿ.ಮೀ. ಉದ್ದದ ರಾಜಕಾಲುವೆಗಳ ಸೈಡ್‌ವಾಲ್‌ ನಿರ್ಮಾಣ, ಹೂಳು ತೆಗೆಯುವುದು ಸೇರಿ ಇನ್ನಿತರ ಕಾಮಗಾರಿಗಳಿಗಾಗಿ 2,169 ಕೋಟಿ ರೂ.ವ್ಯಯಿಸಲಾಗಿದೆ.

2016ನಂತರ ಆಸಕ್ತಿ: ರಾಜ ಕಾಲುವೆ ಒತ್ತುವರಿ ತೆರವು, ಅಭಿವೃದ್ಧಿ ಕುರಿತುಕೇವಲ ಮಾತನಾಡುತ್ತಿದ್ದ ಆಡ ಳಿತ ನಡೆಸುವವರು 2016ರಲ್ಲಿ ಸೃಷ್ಟಿ ಯಾದ ಪ್ರವಾಹದ ನಂತರ ಎಚ್ಚೆತ್ತು ಕೊಂಡು ಬಿಬಿಎಂಪಿ ಮತ್ತುರಾಜ್ಯ ಸರ್ಕಾರ ರಾಜಕಾಲುವೆ ಒತ್ತುವರಿ ಪತ್ತೆ ಮುಂದಾಗಿತ್ತು. ಅದರಂತೆ 2,626 ಒತ್ತುವರಿ ಪತ್ತೆ ಮಾಡಿ, 2018-19ರ ಅಂತ್ಯದ ವೇಳೆಗೆ 1900ಕ್ಕೂ ಹೆಚ್ಚಿನ ಒತ್ತುವರಿ ತೆರವು ಮಾಡಲಾಗಿತ್ತು. ಅದರ ಜತೆಗೆ 312 ಕಿ.ಮೀ. ಉದ್ದದ ರಾಜಕಾಲುವೆಗಳ ಅಭಿವೃದ್ಧಿಗೆ ನಿರ್ಧರಿಸಿ 2,169 ಕೋಟಿ ರೂ. ಖರ್ಚು ಮಾಡಲಾಗಿತ್ತು.

ನಾಲ್ಕು ವರ್ಷಗಳಲ್ಲಿ 3,460 ಕೋಟಿ ರೂ.: ಅದೇ ರೀತಿ 2019-20ರಿಂದ 2022-23ರವರೆಗೆ ರಾಜ ಕಾಲುವೆ ಅಭಿವೃದ್ಧಿಗಾಗಿಯೇ ರಾಜ್ಯ ಸರ್ಕಾರ ಬಿಬಿಎಂಪಿ 3,460 ಕೋಟಿ ರೂ. ನೀಡಿದೆ. 2019-20ರಲ್ಲಿ 1,060 ಕೋಟಿ ರೂ. ನೀಡಿದ್ದ ಸರ್ಕಾರ 75 ಕಿ.ಮೀ. ಉದ್ದದ ರಾಜಕಾಲುವೆಗಳ ಸಂಪೂರ್ಣ ಅಭಿವೃದ್ಧಿಗೆಸೂಚಿಸಿತ್ತು. ಅದೇ ರೀತಿ 2021-22ರಲ್ಲಿ ಮತ್ತೆ ಪ್ರವಾಹಸೃಷ್ಟಿಯಾದಾಗ 900 ಕೋಟಿ ರೂ. ಮೊತ್ತದಲ್ಲಿ 51.5 ಕಿ.ಮೀ. ಉದ್ದದ ರಾಜಕಾಲುವೆಗಳ ದುರಸ್ತಿಗೆ ಸೂಚಿಸಲಾಗಿತ್ತು. ಈ ವರ್ಷ ಮೇ ತಿಂಗಳಲ್ಲಿ ಸೃಷ್ಟಿಯಾದ ಪ್ರವಾಹದ ನಂತರ ಸಿಎಂ ಬೊಮ್ಮಾಯಿ ಅವರು ಅಧಿಕಾರಿಗಳ ಸಭೆ ನಡೆಸಿ, 171 ಕಿ.ಮೀ. ಉದ್ದದ ರಾಜ ಕಾಲುವೆ ಅಭಿವೃದ್ಧಿಗಾಗಿ 1500 ಕೋಟಿ ರೂ. ನೀಡುವುದಾಗಿ ಘೋಷಿಸಿದರು. ಅದೇ ರೀತಿ ಯಲ್ಲಿ ಅನುದಾನ ನೀಡಿ ರಾಜಕಾಲುವೆ ಅಭಿವೃದ್ಧಿಗೆ ಸಂಬಂಧಿಸಿದ ಯೋಜನಾ ವರದಿಗೆ ಅನುಮೋದನೆ ನೀಡಲಾಗಿದೆ.

ಕಳಪೆ ಕಾಮಗಾರಿ, ವಿಳಂಬ :

ರಾಜಕಾಲುವೆ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ವಾರ್ಷಿಕ ಸಾವಿರಾರು ಕೋಟಿ ರೂ. ವ್ಯಯಿಸುತ್ತಿದೆ.ಆದರೆ, ಅದಕ್ಕೆ ತಕ್ಕಂತೆ ಗುಣಮಟ್ಟದ ಕಾಮಗಾರಿಗಳುನಡೆಯುತ್ತಿಲ್ಲ. ಕಳೆದ ವರ್ಷ ನಿರ್ಮಿಸಲಾದ ರಾಜಕಾಲುವೆ ಸೈಡ್‌ವಾಲ್‌ಗ‌ಳು ಈ ವರ್ಷದಮಳೆಗೆ ಬೀಳುತ್ತಿವೆ. ಅದೇ ರೀತಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗಳಲ್ಲಾಗುತ್ತಿರುವ ವಿಳಂಬದಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲುಸಮರ್ಪಕ ವ್ಯವಸ್ಥೆಯಿಲ್ಲದಂತಾಗಿ ಪ್ರವಾಹ ಸೃಷ್ಟಿಯಾಗುತ್ತಿದೆ. ಕೆಲವೆಡೆ ಶಾಶ್ವತ ಪರಿಹಾರ ದೊರೆತಿದೆಯಾದರೂ, ಉಳಿದೆಡೆ ಇನ್ನೂ ಪರಿಹಾರ ದೊರೆತಿಲ್ಲ.

ಕೋರಮಂಗಲ ಕಣಿವೆಗಾಗಿಯೇ 175 ಕೋಟಿ ರೂ. :

ಕೋರಮಂಗಲ ಕಣಿವೆ ವ್ಯಾಪ್ತಿಯ ರಾಜಕಾಲುವೆಯನ್ನು ಗುಜರಾತ್‌ನ ಸಬರಮತಿಪಾತ್‌ವೇ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಈಗಾಗಲೆ ಚಾಲನೆ ನೀಡಲಾಗಿದೆ.175 ಕೋಟಿ ರೂ. ವೆಚ್ಚದಲ್ಲಿ 28 ಕಿ.ಮೀ.ಉದ್ದದ ರಾಜಕಾಲುವೆಯನ್ನು ಅಭಿವೃದ್ಧಿಮಾಡಲಾಗುತ್ತಿದ್ದು, ಶೇ. 90 ಕಾಮಗಾರಿ ಪೂರ್ಣಗೊಂಡಿದೆ.

 

ಗಿರೀಶ್‌ ಗರಗ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.