Rain: ಕೆಳ ಸೇತುವೆಯಲ್ಲೇ ವಾಹನ ಬಿಟ್ಟು ಪ್ರಾಣ ಉಳಿಸಿಕೊಂಡ ಸವಾರರು
Team Udayavani, Nov 8, 2023, 10:03 AM IST
ಕೆ.ಆರ್.ಪುರ: ಸೋಮವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ವಿಜಿ ನಾಪುರದಿಂದ ಟಿನ್ ಫ್ಯಾಕ್ಟರಿ ಕಡೆಗೆ ಸಂಪರ್ಕ ಕಲ್ಪಿಸುವ ರೈಲ್ವೇ ಕೆಳ ಸೇತುವೆ ಜಲಾವೃತಗೊಂಡು ವಾಹನ ಸವಾರರು ಪರದಾಡಿದರು.
ರಾತ್ರಿ ಸುರಿದ ಮಳೆಗೆ ಐದು ಅಡಿ ನೀರು ಶೇಖರಣೆಗೊಂಡು ಕೇಳಸೇತುವೆ ಕೆರೆಯಂತೆ ಆಯಿತು. ನೀರು ಹೆಚ್ಚು ಆವರಿಸಿಕೊಂಡ ಕಾರಣ ಸವಾರರು ವಾಹನಗಳನ್ನು ನೀರಲ್ಲೇ ಬಿಟ್ಟು ಪ್ರಾಣ ಉಳಿಸಿಕೊಂಡರು. ಬೈಕ್, ಕಾರು ಮುಳುಗಡೆ ಆಗಿದ್ದವು. ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ಅಗ್ನಿ ಶಾಮಕ ದಳದ ಸಿಬ್ಬಂದಿ ಮೋಟಾರ್ಪಂಪ್ ಇಟ್ಟು ನೀರು ಹೊರಹಾಕಿದರು.
ಎಷ್ಟು ಹೊತ್ತು ಆದರೂ ನೀರಿನ ಪ್ರಮಾಣ ಕಡಿಮೆ ಆಗದಿರುವುದನ್ನು ಕಂಡು ವಾಹನ ಸವಾರರು ಬೇರೆ ಮಾರ್ಗದ ಮೂಲಕ ತೆರಳಿದರು. ಹತ್ತಾರು ವರ್ಷಗಳಿಂದ ಈ ಸಮಸ್ಯೆ ಇದೆ. ಪ್ರತಿ ಸಾರಿ ಮಳೆ ಬಂದಾಗ ರೈಲ್ವೇ ಸೇತುವೆ ಬಳಿ ನೀರು ಶೇಖರಣೆ ಆಗುತ್ತದೆ. ಶಾಶ್ವತ ಕ್ರಮ ಕೈಗೊಳ್ಳುವ ಬದಲು ಬಿಬಿಎಂಪಿ ಅಧಿಕಾರಿಗಳು ಪ್ರತಿ ಬಾರಿ ನೀರು ತೆರವುಗೊಳಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಕೆಳ ಸೇತುವೆ ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ನೀರು ಹರಿಯಲು ಸಮರ್ಪಕ ವ್ಯವಸ್ಥೆ ಇಲ್ಲ: ಮಳೆ ನೀರು ಚರಂಡಿ ಮೂಲಕ ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲ. ಹೀಗಾಗಿ, ಮಳೆ ನೀರು ನಾಲ್ಕು ಅಡಿಗೂ ಹೆಚ್ಚು ಶೇಖರಣೆಗೊಳ್ಳುತ್ತದೆ. ಪ್ರತೀ ಸಲ ಮಳೆ ಬಂದಾಗ ಇದೇ ಪರಿಸ್ಥಿತಿ ಎದುರಿಸಬೇಕಾಗಿದೆ ಎಂದು ವಾಹನ ಸವಾರರು ಆರೋಪಿಸಿದ್ದಾರೆ. ಸಾವಿರಾರು ವಾಹನ ಸವಾರರು ಈ ಕೆಳ ಸೇತುವೆಯನ್ನೇ ನೆಚ್ಚಿಕೊಂಡಿದ್ದಾರೆ. ಮಳೆ ಬಂದಾಗಲೆಲ್ಲ ಜಲವೃತಗೊಂಡು ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ. ಸೋಮವಾರ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ವಾಹನಗಳನ್ನು ನಡುನೀರಿನಲ್ಲಿ ಬಿಟ್ಟು ಪ್ರಾಣ ಉಳಿಸಿಕೊಳ್ಳಲು ಪರದಾಡಿದ್ದಾರೆ. ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಎಷ್ಟು ಬಾರಿ ಮನವಿ ಮಾಡಿಕೊಂಡರೂ ಶಾಶ್ವತ ಪರಿಹಾರಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯ ರಮೇಶ್ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Flipkart Big Billion Day ಸೆ. 27 ರಿಂದ ಆರಂಭ
Bengaluru: ನಮ್ಮ ಕ್ಲಿನಿಕ್ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
Recipe: ಫಾಸ್ಟ್ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.