ಬೆಂಗಳೂರು ಉತ್ತರ ವಿವಿಗೆ ಕೋಲಾರದಲ್ಲಿ ಇಂದು ಚಾಲನೆ


Team Udayavani, Sep 20, 2017, 11:43 AM IST

bang-vv-logo.jpg

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಿದ ನಂತರ ಹೊಸದಾಗಿ ಹುಟ್ಟಿಕೊಂಡಿರುವ ಬೆಂಗಳೂರು ಉತ್ತರ ವಿವಿಯ ಉದ್ಘಾಟನೆ ಸೆ.20ರಂದು ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನೆರವೇರಲಿದೆ. 

ಬೆಂಗಳೂರು ವಿವಿಯ ಕೇಂದ್ರ ಕಚೇರಿಯನ್ನು ಜ್ಞಾನಭಾರತಿ ಕ್ಯಾಂಪಸ್‌ನಲ್ಲೇ ಉಳಿಸಿಕೊಂಡು, ಸೆಂಟ್ರಲ್‌ ವಿವಿಯ ಆಡಳಿತ ಕಚೇರಿ ಸೆಂಟ್ರಲ್‌ ಕಾಲೇಜಿನ ಆವರಣದಲ್ಲಿ ಮತ್ತು ಉತ್ತರ ವಿವಿಯ ಕೇಂದ್ರ ಕಚೇರಿಯನ್ನು ಕೋಲಾರದ ಟಮಕದಲ್ಲಿ ತೆರೆಯಲು ಈಗಾಗಲೇ ನಿರ್ಧರಿಸಲಾಗಿದೆ. 

ಬೆಂಗಳೂರು ಸೆಂಟ್ರಲ್‌ ವಿವಿಯ ವಿಶೇಷಾಧಿಕಾರಿಯಾಗಿದ್ದ ಪ್ರೊ.ಜಾಫೆಟ್‌ ಹಾಗೂ ಉತ್ತರ ವಿವಿಯ ವಿಶೇಷಾಧಿಕಾರಿಯಾಗಿದ್ದ ಪ್ರೊ. ಟಿ.ಡಿ.ಕೆಂಪರಾಜು ಅವರನ್ನೇ ಈ ಎರಡು ವಿಶ್ವವಿದ್ಯಾಲಯಕ್ಕೆ ಕುಲಪತಿಯಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಅನುದಾನ ಸೇರಿದಂತೆ ಪ್ರಾಧ್ಯಾಪಕರ ನಿಯೋಜನೆ, ಸಿಬ್ಬಂದಿ ಹಂಚಿಕೆ ಇತ್ಯಾದಿ ಯಾವುದನ್ನು ಸರ್ಕಾರ ಮಾಡಿಲ್ಲ.

ಎರಡು ಹೊಸ ವಿವಿಯಿಂದಲೂ ಶೈಕ್ಷಣಿಕ ಚಟುವಟಿಕೆ ಆರಂಭ ಸೇರಿದಂತೆ ವಿವಿಧ ಆಡಳಿತಾತ್ಮಕ ಕಾರ್ಯಕ್ಕೆ 100 ಕೋಟಿಯಷ್ಟು ಅನುದಾನ ಕೋರಿ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾಗಿಲ್ಲ. ಬದಲಿಗೆ  ಬೆಂಗಳೂರು ವಿವಿಯಿಂದಲೇ ಹಣಕಾಸು ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದೆ.

ಉತ್ತರ ವಿವಿಯ ವ್ಯಾಪ್ತಿ 
ವಿವಿ ವ್ಯಾಪ್ತಿಯಲ್ಲಿ 684 ಕಾಲೇಜುಗಳು ಬರಲಿದೆ. 50 ಹೊಸ ಕಾಲೇಜು ಸೇರಿಕೊಳ್ಳುವ ಸಾಧ್ಯತೆ ಇದೆ. ಶ್ರೀನಿವಾಸಪುರ, ಮುಳಬಾಗಿಲು, ಕೆಜಿಎಫ್ , ಬಂಗಾರ ಪೇಟೆ, ಮಾಲೂರು, ಕೆ.ಆರ್‌.ಪುರ, ಪುಲಕೇಶಿನಗರ, ಸರ್ವಜ್ಞ ನಗರ, ಸಿ.ವಿ.ರಾಮನ್‌ ನಗರ, ಮಹದೇವಪುರ, ಗೌರಿಬಿದನೂರು, ಬಾಗೇಪಳ್ಳಿ, ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ಹೊಸಪೇಟೆ ವಿಧಾನಸಭಾ ಕ್ಷೇತ್ರದ 200ಕ್ಕೂ ಅಧಿಕ ಕಾಲೇಜುಗಳು ಹಾಗೂ ಕೋಲಾರ ಸ್ನಾತಕೋತ್ತರ ಕೇಂದ್ರವು ಬೆಂಗಳೂರು ಉತ್ತರ ವಿವಿಯ ವ್ಯಾಪ್ತಿಗೆ ಬರಲಿದೆ.

ಕಟ್ಟಡ ಉದ್ಘಾಟನೆ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆಯನ್ನು ಸೆ.20ರ ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಯವರ ನೂತನ ಕಚೇರಿಯ ಆವರಣದಲ್ಲೇ ಉತ್ತರ ವಿವಿಯ ಉದ್ಘಾಟನೆ ಸಮಾರಂಭ ನಡೆಯಲಿದೆ. ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಕೇಂದ್ರ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಸಚಿವರಾದ ರಮೇಶ್‌ ಕುಮಾರ್‌, ಬಸವರಾಜ ರಾಯರೆಡ್ಡಿ, ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌, ಕುಲಪತಿ ಪ್ರೊ.ಟಿ.ಡಿ.ಕೆಂಪರಾಜು, ಕುಲಸಚಿವ ಪ್ರೊ.ಎಂ.ಎಸ್‌.ರೆಡ್ಡಿ, ಮೌಲ್ಯಮಾಪನ ಕುಲಸಚಿವ ಪ್ರೊ.ಸುಂದರ್‌ ರಾಜ್‌ ಅರಸ್‌ ಮೊದಲಾದವರು ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.