ಹಂತಗಳ ಆಧಾರದಲ್ಲಿ ಬಸ್‌ ದರ ಪರಿಷ್ಕರಣೆ


Team Udayavani, Apr 14, 2017, 11:52 AM IST

bmtc-reddy.jpg

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗಳ ಪ್ರಯಾಣ ದರ ಪರಿಷ್ಕರಿಸಿದೆ. ಇದರಲ್ಲಿ ಕೆಲವು ಹಂತಗಳಲ್ಲಿ (ಎರಡು ಕಿ.ಮೀಗೆ ಒಂದು ಹಂತ)ದರ ಇಳಿಕೆ ಮಾಡಿದ್ದರೆ, ಇನ್ನು ಹಲವು ಹಂತಗಳಲ್ಲಿ ಪ್ರಯಾಣಿಕರಿಗೆ ಏರಿಕೆ ಬಿಸಿ ತಟ್ಟಲಿದೆ. 

ಸಾಮಾನ್ಯ ಬಸ್‌ಗಳಲ್ಲಿ ಅತಿ ಹೆಚ್ಚು ಶೇ. 26ರಷ್ಟು ಪ್ರಯಾಣಿಕರು ಸಂಚರಿಸುವ 2ನೇ ಹಂತದಲ್ಲಿ ದರವನ್ನು 12ರಿಂದ 10 ರೂ.ಗಳಿಗೆ ಇಳಿಸಲಾಗಿದೆ. ಬೆನ್ನಲ್ಲೇ 3, 6 ಮತ್ತು 8ನೇ ಹಂತಗಳಲ್ಲಿ ಕ್ರಮವಾಗಿ 1 ರೂ. ಹೆಚ್ಚಳ ಮಾಡಲಾಗಿದೆ. ಆದರೆ, ಇದರ ಬಿಸಿ ಶೇ. 10ರಷ್ಟು ಪ್ರಯಾಣಿಕರಿಗೆ ತಟ್ಟಲಿದೆ. 

ಅದೇ ರೀತಿ, ವೋಲ್ವೊ ಬಸ್‌ಗಳಲ್ಲಿ 1, 3, 4, 14ನೇ ಹಂತಗಳಲ್ಲಿ ಕ್ರಮವಾಗಿ 5 ರೂ. ಇಳಿಕೆ ಮಾಡಲಾಗಿದೆ. ಈ ಹಂತಗಳಲ್ಲಿ ಶೇ. 32ರಷ್ಟು ಪ್ರಯಾಣಿಕರು ಸಂಚರಿಸುತ್ತಿದ್ದು, ಅವರೆಲ್ಲರಿಗೂ ಇದರಿಂದ ಅನುಕೂಲ ಆಗಲಿದೆ. ಇನ್ನು 10, 16, 18, 19 ಮತ್ತು 22ನೇ ಹಂತಗಳಲ್ಲಿ ಕ್ರಮವಾಗಿ 5 ರೂ. ಹೆಚ್ಚಿಸಲಾಗಿದೆ.

ಈ ಹಂತಗಳಲ್ಲಿ ಕೇವಲ ಶೇ. 7ರಷ್ಟು ಪ್ರಯಾಣಿಕರು ಸಂಚರಿಸುವುದರಿಂದ ಅವರಿಗೆ ಅಷ್ಟಾಗಿ ಹೊರೆ ಆಗದು. ಈ ದರ ಪರಿಷ್ಕರಣೆಯಿಂದ ಸಾಮಾನ್ಯ ಬಸ್‌ಗಳ ಕಾರ್ಯಾಚರಣೆಯಲ್ಲಿ ನಿತ್ಯ ಒಂದೂವರೆ ಲಕ್ಷ ಹಾಗೂ ವೋಲ್ವೊದಲ್ಲಿ 3 ಲಕ್ಷ ರೂ. ಬಿಎಂಟಿಸಿಗೆ ಹೊರೆ ಆಗಲಿದೆ ಎಂದು ಅಂದಾಜಿಸಲಾಗಿದೆ. 

ಶಾಂತಿನಗರದ ಬಿಎಂಟಿಸಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಪರಿಷ್ಕೃತ ಬಸ್‌ ಪ್ರಯಾಣ ದರ ಪ್ರಕಟಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣ ದರಗಳನ್ನು ಪರಿಷ್ಕರಿಸಲಾಗಿದೆ. ಇದರ ಉದ್ದೇಶ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವುದಾಗಿದೆ. ಶೇ. 30ರಿಂದ 40ರಷ್ಟು ಪ್ರಯಾಣಿಕರು ಸಂಚರಿಸುವ ಹಂತಗಳನ್ನು ಗುರುತಿಸಿ, ಅಂತಹ ಕಡೆ ದರ ಇಳಿಸಲಾಗಿದೆ ಎಂದು ಹೇಳಿದರು. 

ಕಳೆದ ಒಂದು ವರ್ಷದಲ್ಲಿ ಡೀಸೆಲ್‌ ಬೆಲೆ 20 ರೂ. ಹೆಚ್ಚಳವಾಗಿದೆ. ಇದರಿಂದ 18 ಕೋಟಿ ರೂ. ಹಾಗೂ ಸಿಬ್ಬಂದಿ ವೇತನ, ತಟ್ಟಿಭತ್ಯೆ ಪರಿಷ್ಕರಣೆಯಿಂದ 12 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹೊರೆ ಆಗುತ್ತಿದೆ. ಆದರೆ, ಒಟ್ಟಾರೆ ನಿಗಮದ ನಷ್ಟದ ಬಾಬ್ತು ಎಷ್ಟು ಎಂದು ಈಗಲೇ ಹೇಳುವುದು ಕಷ್ಟ ಎಂದ ಅವರು, ಆರ್ಥಿಕ ಹೊರೆ ನಡುವೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ದರ ಪರಿಷ್ಕರಿಸಲಾಗಿದೆ ಎಂದರು.    

ಮುಂದಿನ ವಾರ ಸ್ಮಾರ್ಟ್‌ ಕಾರ್ಡ್‌: ಬಸ್‌ಗಳಲ್ಲಿ “ಸ್ಮಾರ್ಟ್‌ ಕಾರ್ಡ್‌’ ಪ್ರಾಯೋಗಿಕ ಬಳಕೆಗೆ ಇನ್ನೊಂದು ವಾರದಲ್ಲಿ ಚಾಲನೆ ದೊರೆಯಲಿದೆ. ಈ ಸಂಬಂಧ ಪೂರ್ವಸಿದ್ಧತೆಗಳು ಬಹುತೇಕ ಪೂರ್ಣಗೊಂಡಿದ್ದು, ನಗರದ ಯಾವುದಾದರೂ ಒಂದು ಮಾರ್ಗದಲ್ಲಿ ಪರೀಕ್ಷಾರ್ಥವಾಗಿ ಈ ಯೋಜನೆಯನ್ನು ಜಾರಿಗೊಳಿಸಲಾಗುವುದು. ಇದರಿಂದ ಬಸ್‌ ಪ್ರಯಾಣ ನಗದುರಹಿತ ವ್ಯವಸ್ಥೆಗೆ ಒಳಪಡಲಿದೆ.

ಮುಂದಿನ ದಿನಗಳಲ್ಲಿ ಮೆಟ್ರೋ ಜತೆಗೆ ಇದನ್ನು ಜೋಡಣೆ ಮಾಡಲಾಗುವುದು. ಆಗ ಎರಡೂ ಕಡೆಗಳಲ್ಲೂ ಈ ಸ್ಮಾರ್ಟ್‌ ಕಾರ್ಡ್‌ ಬಳಸಬಹುದು ಎಂದು ಸಚಿವ ರಾಮಲಿಂಗಾರೆಡ್ಡಿ ಇದೇ ವೇಳೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಎಂಟಿಸಿ ಅಧ್ಯಕ್ಷ ನಾಗರಾಜು ಯಾದವ್‌, ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಬಿಶ್ವಜಿತ್‌ ಮಿಶ್ರಾ ಮತ್ತಿತರರು ಉಪಸ್ಥಿತರಿದ್ದರು. 

ನೂರು ಫೀಡರ್‌ ಬಸ್‌: ಮೆಟ್ರೋ ಮೊದಲ ಹಂತ ಏಪ್ರಿಲ್‌ಗೆ ಪೂರ್ಣಗೊಳ್ಳಲಿದ್ದು, ಇದಕ್ಕೆ ಪೂರಕವಾಗಿ ನೂರು “ಮೆಟ್ರೋ ಸಂಪರ್ಕ ಸೇವೆ’ಗಳನ್ನು ಆರಂಭಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಡಾ.ಏಕರೂಪ್‌ ಕೌರ್‌ ತಿಳಿಸಿದ್ದಾರೆ. ಈಗಾಗಲೇ 83 ಸಂಪರ್ಕ ಸೇವೆಗಳು ಅಸ್ತಿತ್ವದಲ್ಲಿವೆ. ಸ್ವಾಮಿ ವಿವೇಕಾನಂದ ರಸ್ತೆಯಿಂದ ವೈಟ್‌ಫೀಲ್ಡ್‌ ನಡುವೆ ವೋಲ್ವೊ ಬಸ್‌ಗಳನ್ನು ಕಲ್ಪಿಸಿದ್ದು, ಕಡಿಮೆ ದರದಲ್ಲಿ ದಿನದ ಬಸ್‌ ಪಾಸ್‌ ಕೂಡ ನೀಡಲಾಗುತ್ತಿದೆ.

ಮೆಟ್ರೋ ಮೊದಲ ಹಂತ ಪೂರ್ಣಗೊಂಡ ನಂತರ ಇನ್ನೂ ನೂರು ಸಂಪರ್ಕ ಸೇವೆಗಳು ಹಾಗೂ “ಚಕ್ರ’ ಸೇವೆ ಆರಂಭಿಸಲಾಗುವುದು ಎಂದರು.  ಅಲ್ಲದೆ, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದಲ್ಲಿ ಸಂಚರಿಸುವ ವಾಯುವಜ್ರ ಸೇವೆಗಳಲ್ಲಿ ಪ್ರಯಾಣಿಕರನ್ನು ಸೆಳೆಯಲು ನಾಲ್ಕಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ವಿನಾಯ್ತಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದರು. 

650 ಕೋಟಿ ರೂ. ಸಾಲದಲ್ಲಿರುವ ಬಿಎಂಟಿಸಿ 
ಪ್ರಸ್ತುತ ಬಿಎಂಟಿಸಿ ಸಾಲ 650 ಕೋಟಿ ರೂ. ಇದೆ. ಬಸ್‌ಗಳ ಸಂಖ್ಯೆ ಕಡಿಮೆ ಇದ್ದು, ಪೀಕ್‌ ಅವರ್‌ನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಲೋಡ್‌ ಫ್ಯಾಕ್ಟರ್‌ (ಒಂದು ಬಸ್‌ನಲ್ಲಿ ಪ್ರಯಾಣಿಸುವವರ ಸಂಖ್ಯೆ) ಶೇ. 78ರಷ್ಟಿದೆ ಎಂದು ಮಾಹಿತಿ ಬಿಎಂಟಿಸಿ ಎಂಡಿ ಏಕರೂಪ್‌ ಕೌರ್‌ ತಿಳಿಸಿದರು. ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಜುಲೈ ಅಂತ್ಯದೊಳಗೆ 1,658 ಹೊಸ ಬಸ್‌ಗಳು ಸೇರ್ಪಡೆಗೊಳ್ಳಲಿವೆ. ವರ್ಷಾಂತ್ಯಕ್ಕೆ ಸಂಸ್ಥೆಯಲ್ಲಿ 9 ಸಾವಿರ ಬಸ್‌ಗಳು ಕಾರ್ಯಾಚರಣೆ ಆರಂಭಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Namma Metro: ಹಳದಿ ಮಾರ್ಗ ಪೂರ್ಣಗೊಂಡಿದ್ದರೂ ಬೋಗಿಗಳ ಕೊರತೆ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Kidnapping Case: ವ್ಯಕ್ತಿಯ ಅಪಹರಿಸಿ ಸುಲಿಗೆಗೈದ 8 ಮಂದಿ ಬಂಧನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Younis Zaroora: ಎಂಜಿ ರಸ್ತೇಲಿ ಇನ್‌ಸ್ಟಾಗ್ರಾಮ್‌ ಸ್ಟಾರ್‌ ಯೂನಿಸ್‌ ನೋಡಲು ಕಿಕ್ಕಿರಿದ ಜನ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

Private bus: ಖಾಸಗಿ ಬಸ್‌ಗಳಿಂದ ಬೇಕಾಬಿಟ್ಟಿ ದರ ವಸೂಲಿ

2-bng

Bengaluru: ನಗರದೆಲ್ಲೆಡೆ ಟ್ರಾಫಿಕ್ ಜಾಮ್‌, ಮೆಜೆಸ್ಟಿಕ್‌ ರಷ್‌! ‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.