ಗುತ್ತಿಗೆ ಬಿಲ್‌ ಪಾವತಿಗೆ ಸರ್ಕಾರದ ಮೊರೆ


Team Udayavani, Dec 20, 2022, 12:51 PM IST

TDY-6

ಬೆಂಗಳೂರು: ಸದ್ಯದ ಮಟ್ಟಿಗೆ ಬಿಬಿಎಂಪಿ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಆಸ್ತಿಗಳನ್ನು ಅಡವಿಟ್ಟು ಪಡೆಯಲಾಗಿದ್ದ ಎಲ್ಲ ಸಾಲವನ್ನು ತೀರಿಸಲಾಗಿದೆ. ಆದರೂ, ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಬಿಲ್‌ ಪಾವತಿಗೆ ರಾಜ್ಯ ಸರ್ಕಾರದಿಂದ ಅನುದಾನ ಕೋರಿ ಪತ್ರ ಬರೆಯಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸದ್ಯ 5 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಕಾಮಗಾರಿಗಳು ಪ್ರಗತಿಯಲ್ಲಿವೆ. ಅದರ ಜತೆಗೆ ಬಾಕಿ ಬಿಲ್‌ಗ‌ಳ ಮೊತ್ತ 3 ಸಾವಿರ ಕೋಟಿ ರೂ.ಗಳಿದ್ದು, ಮುಂದೆ ಕೈಗೊಳ್ಳಬೇಕಾದ ಕಾಮಗಾರಿಗಳ ಮೊತ್ತ 5 ಸಾವಿರ ಕೋಟಿ ರೂ. ದಾಟಲಿದೆ. ಒಟ್ಟಾರೆ ಬಿಬಿಎಂಪಿ 13 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಹೊಣೆಗಾರಿಕೆಯನ್ನು ಹೊಂದಿದೆ. ಚಾಲ್ತಿ ಕಾಮಗಾರಿಗಳ ಪೈಕಿ ಶೇ. 90 ಕಾಮಗಾರಿಗಳು ರಾಜ್ಯ ಸರ್ಕಾರದ ಅನುದಾನದಲ್ಲಿ ಕೈಗೊಳ್ಳುವಂತಹದ್ದಾಗಿದೆ. ಉಳಿದ ಕಾಮಗಾರಿಗಳನ್ನು ಬಿಬಿಎಂಪಿ ಆದಾಯದಲ್ಲಿ ಪಾವತಿಸಬೇಕಿದೆ. ಹಾಗೆಯೇ, ಈಗಾಗಲೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್‌ ಪಾವತಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವೇ ಹಣ ನೀಡಬೇಕಿದೆ. ಹೀಗಾಗಿ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು 750 ಕೋಟಿ ರೂ. ಅನುದಾನ ನೀಡುವಂತೆ ಸರ್ಕಾರವನ್ನು ಕೋರಿದೆ.

ರಾಜ್ಯ ಸರ್ಕಾರದ ಅನುದಾನವೇ ಆಧಾರ: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡಿರುವ ಮತ್ತು ಅನುಷ್ಠಾನಗೊಳಿಸಲಾಗುತ್ತಿರುವ ಕಾಮಗಾರಿಗಳಲ್ಲಿ ಬಹುತೇಕವು ರಾಜ್ಯ ಸರ್ಕಾರದ ಅನುದಾನವನ್ನು ನೆಚ್ಚಿಕೊಂಡಿರುವಂತಹವಾಗಿವೆ. ಹೀಗಾಗಿ ಪ್ರತಿ ಬಾರಿ ಬಿಲ್‌ ಪಾವತಿ ವೇಳೆ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ ಅನುದಾನಕ್ಕಾಗಿ ಮನವಿ ಸಲ್ಲಿಸುತ್ತದೆ. ಅಲ್ಲದೆ, ರಾಜ್ಯ ಸರ್ಕಾರ ಕೂಡ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ಪ್ರತಿವರ್ಷ ಕನಿಷ್ಠ 3 ಸಾವಿರ ಕೋಟಿ ರೂ. ಅನುದಾನ ನೀಡುತ್ತದೆ. ಅದು ಕೂಡ 4 ಕಂತುಗಳಲ್ಲಿ ನೀಡಲಿದ್ದು, ಈ ಬಾರಿ ಈಗಾಗಲೇ 3 ಕಂತಿನಲ್ಲಿ ತಲಾ 750 ಕೋಟಿ ರೂ. ನೀಡಲಾಗಿದೆ. ಇದೀಗ ಕೊನೆಯ ಕಂತನ್ನು ನೀಡುವಂತೆ ಬಿಬಿಎಂಪಿ ಕೋರಿದೆ. ಒಂದು ವೇಳೆ ರಾಜ್ಯ ಸರ್ಕಾರ ಅನುದಾನ ನೀಡುವಲ್ಲಿ ತಡ ಮಾಡಿದರೆ ಗುತ್ತಿಗೆದಾರರಿಗೆ ಬಿಲ್‌ ನೀಡುವಲ್ಲಿಯೂ ವಿಳಂಬವಾಗಲಿದೆ.

2 ವರ್ಷದ ಬಿಲ್‌ ಬಾಕಿ: ಬಿಬಿಎಂಪಿಯಲ್ಲಿ ಸದ್ಯ ಹಿರಿತನದ ಆಧಾರದಲ್ಲಿ ಬಿಲ್‌ ಪಾವತಿಸಲಾಗುತ್ತಿದೆ. ಯಾವ ಕಾಮಗಾರಿ ಮೊದಲು ಪೂರ್ಣಗೊಂಡಿದೆ, ಯಾವ ಗುತ್ತಿಗೆದಾರರು ಮೊದಲು ಬಿಲ್‌ಗ‌ಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಆಧರಿಸಿ ಬಿಲ್‌ಗ‌ಳ ಹಿರಿತನವನ್ನು ನಿಗದಿ ಮಾಡಲಾಗುತ್ತದೆ. ಅದರ ಜತೆಗೆ 2 ವರ್ಷಗಳ ಹಿಂದಿನ ಬಿಲ್‌ಗ‌ಳಿಗಷ್ಟೇ ಹಣವನ್ನು ಪಾವತಿಸುವ ವ್ಯವಸ್ಥೆಯನ್ನೂ ಬಿಬಿಎಂಪಿ ಅನುಷ್ಠಾನಕ್ಕೆ ತಂದಿದೆ. ಹೀಗಾಗಿ 2020ರ ನವೆಂಬರ್‌ ಅಂತ್ಯದವರೆಗಿನ ಬಿಲ್‌ಗ‌ಳನ್ನು ಈಗಾಗಲೇ ಪಾವತಿಸಲಾಗಿದೆ. 2020ರ ಡಿಸೆಂಬರ್‌ನ ನಂತರದ ಬಿಲ್‌ಗ‌ಳನ್ನು ಈಗ ಪಾವತಿಸಬೇಕಿದ್ದು, ಅವುಗಳ ಮೊತ್ತ 3 ಸಾವಿರ ಕೋಟಿ ರೂ.ಗಳಷ್ಟಾಗಿದೆ. ಅಲ್ಲದೆ, ಮುಂದಿನ ಎರಡ್ಮೂರು ತಿಂಗಳಲ್ಲಿ 750 ಕೋಟಿ ರೂ. ಬಿಲ್‌ಗ‌ಳನ್ನು ಪಾವತಿಸಬೇಕಾದ ಹೊಣೆಗಾರಿಕೆ ಬಿಬಿಎಂಪಿ ಮೇಲಿದೆ.

ಬಿಲ್‌ ಪಾವತಿಗೆ ಹೊಸ ವ್ಯವಸ್ಥೆ : ಬಾಕಿ ಬಿಲ್‌ ಪಾವತಿಗೆ ಸರ್ಕಾರದ ನೆರವು ಕೋರಿರುವ ಬಿಬಿಎಂಪಿ, ಅದರ ಜತೆಗೆ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ಹೊಸ ವ್ಯವಸ್ಥೆಯನ್ನು ಜಾರಿಗೆ ತರುತ್ತಿದೆ. ಅದರ ಪ್ರಕಾರ ಗುತ್ತಿಗೆದಾರರು 2 ವರ್ಷದ ಬಡ್ಡಿಯನ್ನು ಬ್ಯಾಂಕ್‌ಗಳಿಗೆ ಪಾವತಿಸಿ ಕಾಮಗಾರಿ ಮೊತ್ತವನ್ನು ಸಾಲದ ರೂಪದಲ್ಲಿ ಪಡೆಯಬಹು ದಾಗಿದೆ. ಅದಕ್ಕೆ ಬಿಬಿಎಂಪಿಯಿಂದ ಖಾತರಿ ನೀಡಲಾಗುತ್ತದೆ. ತುರ್ತು ಹಣದ ಅಗತ್ಯ ಇರುವ ಗುತ್ತಿಗೆದಾರರು ಈ ವ್ಯವಸ್ಥೆಯಂತೆ 15 ದಿನಗಳಲ್ಲಿ ಕಾಮಗಾರಿ ಮೊತ್ತದ ಹಣವನ್ನು ಪಡೆಯಬಹುದಾಗಿದೆ. ಇದರಿಂದ ಬಿಲ್‌ ಪಾವತಿಗಾಗಿ 2 ವರ್ಷಗಳವರೆಗೆ ಕಾಯುವ ಸ್ಥಿತಿ ಇಲ್ಲದಂತಾಗಲಿದೆ.

ಈ ಕುರಿತು ಬಿಬಿಎಂಪಿ ಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಸರ್ಕಾರ ಅನುಮೋದನೆ ನೀಡಿದರೆ ಮುಂದಿನ ಆರ್ಥಿಕ ವರ್ಷದಿಂದ ನೂತನ ವ್ಯವಸ್ಥೆ ಜಾರಿಯಾಗಲಿದೆ.

ಗುತ್ತಿಗೆದಾರರಿಗೆ ಬಿಲ್‌ ಪಾವತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಅನುದಾನ ಕೋರಲಾಗಿದೆ. ಈ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸರ್ಕಾರ ಹಣ ನೀಡಿದ ಕೂಡಲೇ ಬಿಲ್‌ ಪಾವತಿಯನ್ನು ಮತ್ತೆ ಆರಂಭಿಸಲಾಗುವುದು. ಜತೆಗೆ ಗುತ್ತಿಗೆದಾರರಿಗೆ ಬಿಲ್‌ ಪಾವತಿಸಲು ಹೊಸ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. – ಜಯರಾಂ ರಾಯಪುರ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು)

-ಗಿರೀಶ್‌ ಗರಗ

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.