ಬಿಬಿಎಂಪಿ: 1,322 ಆಶಾ ಕಾರ್ಯಕರ್ತೆಯರ ಹುದ್ದೆ ಸೃಷ್ಟಿ


Team Udayavani, Sep 4, 2020, 11:53 AM IST

ಬಿಬಿಎಂಪಿ: 1,322 ಆಶಾ ಕಾರ್ಯಕರ್ತೆಯರ ಹುದ್ದೆ ಸೃಷ್ಟಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ 1,322 ಜನ ಆಶಾ ಕಾರ್ಯಕರ್ತೆಯರ ಹುದ್ದೆ ಮಂಜೂರು ಮಾಡಿ ಸರ್ಕಾರ ಆದೇಶ ಮಾಡಿದೆ. ರಾಜ್ಯದ 11 ಮಹಾನಗರ ಪಾಲಿಕೆಗಳಿಗೆ 1,786 ಆಶಾ ಕಾರ್ಯಕರ್ತೆಯರ ಹುದ್ದೆ ಮುಂಜೂರು ಮಾಡಲಾಗಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಈ ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಬಿಬಿಎಂಪಿಯಲ್ಲಿ 1,229 ಮಂದಿ ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿದ್ದು, ಈಗ 1,322 ಜನ ಸೇರ್ಪಡೆ ಆಗಿದ್ದು, ಆಶಾ ಕಾರ್ಯಕರ್ತೆಯರ ಸಂಖ್ಯೆ 2,551ಕ್ಕೆ ಏರಿಕೆಯಾಗಿದೆ. 5 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯಕರ್ತೆ ಲೆಕ್ಕದಲ್ಲಿ ಹೊಸ ನೇಮಕಾತಿ ಆಗಿದೆ.

ರಾಜ್ಯದ 11 ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 1.90 ಕೋಟಿ ಜನಸಂಖ್ಯೆ ಇದ್ದು, ಈಗ ಮಂಜೂರು ಮಾಡಲಾದ 1,786 ಹೊಸ ಹುದ್ದೆಗಳಿಂದ ಸರ್ಕಾರಕ್ಕೆ ವಾರ್ಷಿಕ 23.58 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಯಲ್ಲಿ ಪ್ರಸ್ತುತ ರಾಜ್ಯದಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳನ್ನೊಳಗೊಂಡಂತೆ 10 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯಕರ್ತೆಯಂತೆ ಒಟ್ಟು 42,524 ಮಂದಿ ಆಶಾ ಕಾರ್ಯರ್ತೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಪಾಲಿಕೆಗಳ ವ್ಯಾಪ್ತಿಯಲ್ಲಿ ಪ್ರತಿ 5 ಸಾವಿರ ಜನಸಂಖ್ಯೆಗೆ ಒಬ್ಬರು ಆಶಾ ಕಾರ್ಯರ್ತೆಯರ ನೇಮಕ ಮಾಡಬೇಕು ಎಂದು ಇತ್ತೀಚೆಗೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಸರ್ಕಾರಕ್ಕೆ ಮನವಿ ಮಾಡಿದ್ದರು.

………………………………………………………………………………………………………………………………………………………

ಜನವರಿಯಿಂದ ಜುಲೈವರೆಗೆ 35,307 ಜನರ ಮರಣ : ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಜನವರಿಯಿಂದ ಜುಲೈವರೆಗೆ 35,307 ಜನ ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ (ಸಾಂಖ್ಯಿಕ) ವಿಭಾಗ ತಿಳಿಸಿದೆ. ಮಾಜಿ ಸಚಿವ ಎಚ್‌. ಕೆ.ಪಾಟೀಲ್‌ ಅವರು ಇತ್ತೀಚೆಗೆ ಬಿಡುಗಡೆ ಮಾಡಿದ್ದ ಪತ್ರಿಕಾ ಹೇಳಿಕೆ ಪ್ರಕಾರ ನಗರದಲ್ಲಿ ಜನವರಿ-ಜುಲೈವರೆಗೆ 49,135 ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಹೇಳಲಾಗಿತ್ತು.

ಇನ್ನು ಕಳೆದ ವರ್ಷ ಇದೇ ಅವಧಿಯಲ್ಲಿ 37,001 ಸಾವಿನ ಪ್ರಕರಣಗಳು ವರದಿಯಾಗಿವೆ. ಅಂದರೆ, ಈ ವರ್ಷ 12,134 ಸಾವು ಪ್ರಕರಣ ಹೆಚ್ಚಾಗಿವೆ ಎಂದು ಉಲ್ಲೇಖೀಸಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಲಿಕೆ ಇ -ಜನ್ಮ ತಂತ್ರಾಂಶದ ಮಾಹಿತಿ ಅನ್ವಯ ಕಳೆದ ವರ್ಷ ಜನವರಿಯಿಂದ ಜುಲೈ ವರೆಗೆ ನಗರದಲ್ಲಿ 37,004 ಸಾವಿನ ಪ್ರಕರಣ ವರದಿಯಾಗಿವೆ, ಪ್ರಸಕ್ತ ವರ್ಷ ಇದೇ ಅವಧಿಯಲ್ಲಿ 35,307 ಸಾವಿನ ಪ್ರಕರಣ ವರದಿಯಾಗಿವೆ. ಆದರೆ, ಎಚ್‌. ಕೆ.ಪಾಟೀಲ್‌ ಅವರು ನೀಡಿರುವ ಮಾಹಿತಿಯ ಮೂಲ ಯಾವುದು ಎಂಬುದು ಸ್ಪಷ್ಟತೆ ಇಲ್ಲ. ಪಾಲಿಕೆಯ ಜನನ – ಮರಣ ಮುಖ್ಯ ನೋಂದಣಾಧಿಕಾರಿ ಕಚೇರಿಯ ಜಾಲತಾಣದ ಮಾಹಿತಿ ನಿಖರವಾಗಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.