ಸಭೆ ಮುಂದೂಡಿಕೆ ವಿರೋಧಿಸಿ ಪ್ರತಿಭಟನೆ

ಪಾಲಿಕೆ ಸಭೆ ಸೆ.5ಕೆ ಮುಂದೂಡಿಕ್ಕೆ/ಮುಂದಿನ ಶನಿವಾರ ಬಿಬಿಎಂಪಿ ಈ ಅವಧಿಯ ಕೊನೆಯ ಕೌನ್ಸಿಲ್‌ ಸಭೆ

Team Udayavani, Aug 29, 2020, 12:09 PM IST

ಸಭೆ ಮುಂದೂಡಿಕೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ಬಿಬಿಎಂಪಿಯ ಕೌನ್ಸಿಲ್‌ ಸಭೆಗೆ ಮೇಯರ್‌ ಎಂ.ಗೌತಮ್‌ಕುಮಾರ್‌, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್‌ ಹಾಗೂ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್‌ ಪ್ರಸಾದ್‌ ಹಾಜರಾಗದ ಹಿನ್ನೆಲೆಯಲ್ಲಿ ಸಭೆ ಸೆ.5ಕ್ಕೆ ಮುಂದೂಡಲಾಯಿತು. ಬಿಜೆಪಿ ವಿರುದ್ಧ ವಿರೋಧ ಪಕ್ಷದಿಂದ ಪ್ರತಿಭಟನೆ ನಡೆಯಿತು.

ಆ.28ರ ಬೆಳಗ್ಗೆ 11 ಗಂಟೆಗೆ ಕೌನ್ಸಿಲ್‌ ಸಭೆ ಕರೆಯಲಾಗಿತ್ತು. ಕೆಲವು ಸದಸ್ಯರು ಸಭೆಗೆ ಹಾಜರಾಗಿದ್ದರು. ಆದರೆ, ಸಭೆಗೆ ಬಂದ ಉಪಮೇಯರ್‌ ರಾಮ್‌ ಮೋಹನ್‌ ರಾಜು ಸೆ.5ಕ್ಕೆ ಪಾಲಿಕೆಯ ಸಭೆ ಮುಂದೂಡಿಕೆ ಯಾಗಿದೆ ಎಂದು ಘೋಷಿಸಿದರು. ಇದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ ಬಿಬಿಎಂಪಿಯ ವಿರೋಧ ಪಕ್ಷ ನಾಯಕ ಅಬ್ದುಲ್‌ ವಾಜಿದ್‌, ನಿಗದಿಯಾದ ಸಭೆ ದಿಢೀರ್‌ ಎಂದು ಹೇಗೆ ಮುಂದೂಡ ಲಾಗುತ್ತದೆ?, ಸರಿಯಾದ ಕಾರಣ ಕೊಡಿ. ಚುನಾವಣೆ ಬಗ್ಗೆ ಚರ್ಚೆ ಮಾಡುವುದಿದೆ ಎಂದರು. ಸಭೆಗೆ ಮೇಯರ್‌, ಆಯುಕ್ತರು ಹಾಗೂ ಆಡಳಿತ ಪಕ್ಷದ ನಾಯಕರೂ ಸೇರಿದಂತೆ ಯಾರೂ ಹಾಜರಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಭೆ ಮುಂದೂಡಿಕೆಗೆ ಪ್ರತಿಭಟನೆ: ಬಿಬಿಎಂಪಿಯ ಮಾಸಿಕ ಸಭೆ ಮುಂದೂಡಿಕೆ ಮಾಡಿದ್ದನ್ನು ವಿರೋ ಧಿಸಿ ವಿರೋಧ ಪಕ್ಷದ ಸದಸ್ಯರು ಬಿಜೆಪಿಯ ಆಡಳಿತ ವೈಫಲ್ಯವಾಗಿದೆ. ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಯೋಜನೆಗೆ ಆಯುಕ್ತರಿಂದ ತಡೆ ನೀಡಿಸಿದ್ದಾರೆ ಎಂದು ದೂರಿ ಪ್ರತಿಭಟನೆಗೆ ಮುಂದಾದರು.

ಒಂದೆಡೆ ಲ್ಯಾಪ್‌ಟಾಪ್‌ ಖರೀದಿಸಿಲು ಅಧಿಕಾರಿಗಳು ಸಹಿ ಹಾಕ್ತಾರೆ. ಮತ್ತೂಂದೆಡೆ ಲ್ಯಾಪ್‌ ಟಾಪ್‌ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಆರೋಪಿಸಿ, ಸರ್ಕಾರಕ್ಕೂ ಪತ್ರ ಬರೆಯುತ್ತಾರೆ. ಇದು ಯಾವ ರೀತಿಯ ಆಡಳಿತ ವ್ಯವಸ್ಥೆ ಎಂದು ಅಬ್ದುಲ್‌ ವಾಜಿದ್‌ ಪ್ರಶ್ನಿಸಿದರು. ಪಾಲಿಕೆ ಸದಸ್ಯರ ಅಧಿ ಕಾರ ಅವಧಿ   ಸೆ.10ಕ್ಕೆ ಕೊನೆಯಾಗಲಿದೆ. ಚುನಾವಣೆ ನಡೆಸುವ ಬಗ್ಗೆ ಯಾವುದೇ ಪ್ರಕ್ರಿಯೆ ನೀಡುತ್ತಿಲ್ಲ. ಶುಕ್ರವಾರ ಬಡ ಮಕ್ಕಳಿಗೆ ಲ್ಯಾಪ್‌ಟಾಪ್‌ ನೀಡುವ ವಿಚಾರ ಚರ್ಚೆ ಆಗಬೇಕಿತ್ತು. ಆದರೆ, ಸಕಾರಣ ನೀಡದೆ ಸಭೆ ಮುಂದೂಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆ ಮುಂದೂಡಿಕೆಯಾಗಿದೆಯಾದರೂ, ಸಭೆ ಕರೆದ ಉದ್ದೇಶದಿಂದ ಮಾಡಲಾಗಿದ್ದ ಊಟ ವ್ಯರ್ಥ ಮಾಡದೆ ಸದಸ್ಯರು, ಪೊಲೀಸ್‌ ಸಿಬ್ಬಂದಿ ಭೋಜನ ಸವಿದರು.

ಹಣ ಯಾರು ಕೊಡುತ್ತಾರೆ? :  ಕೌನ್ಸಿಲ್‌ ಸಭೆ ಮುಂದೂಡಿಕೆ ಪೂರ್ವ ನಿಯೋಜಿತ. ಆಡಳಿತ ಪಕ್ಷದ ನಾಯಕರು ಸಭೆಗೆ ಹಾಜರಾಗಿಲ್ಲ. ಪಾಲಿಕೆ ಸದ್ಯರ ಅಧಿಕಾರ ಅವಧಿ ಮುಗಿಯುವ ಹಂತದಲ್ಲಿ ಸಭೆಯನ್ನು ಮುಂದೂಡಲಾಗಿದೆ. ಸಭೆ ನಡೆಸುವ ಆಸಕ್ತಿ ಇಲ್ಲದೆ ಇದ್ದಿದ್ದರೆ ಆ.27ಕ್ಕೆ ಸಭೆ ಮುಂದೂಡುವ ಬಗ್ಗೆ ಸೂಚನೆ ನೀಡಬೇಕಿತ್ತು. ಶುಕ್ರವಾರ ಕೌನ್ಸಿಲ್‌ ಸಭೆ ರದ್ದಾಗಿರುವುದರಿಂದ ಪಾಲಿಕೆಗೆ ಅಂದಾಜು 4 ಲಕ್ಷ ರೂ. ನಷ್ಟವುಂಟಾಗಿದೆ. ಪಾಲಿಕೆಗೆ ಉಂಟಾಗಿರುವ ನಷ್ಟಮೊತ್ತವನ್ನು ಮೇಯರ್‌ ಭರಿಸಬೇಕು ಎಂದು ವಿರೋಧ ಪಕ್ಷದ ಅಬ್ದುಲ್‌ ವಾಜಿದ್‌ ಆಗ್ರಹಿಸಿದರು.

ಚುನಾವಣೆ ಮುಂದೂಡಿಕೆ ಯತ್ನ: ಹೋರಾಟಕ್ಕೆ ನಿರ್ಧಾರ  ಬೆಂಗಳೂರು: ಪಾಲಿಕೆಯ ಚುನಾವಣೆಯನ್ನು ನಿಗದಿತ ಸಮಯಕ್ಕೆ ನಡೆಸದೆ ಮುಂದೂಡುವ ಪ್ರಯತ್ನಗಳು ನಡೆಯುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ನ ಮಾಜಿ ಮೇಯರ್‌ಗಳು ನ್ಯಾಯಾಲಯದ ಮೊರೆ ಹೋಗಲು ತೀರ್ಮಾನಿಸಿದ್ದಾರೆ. ಸರ್ಕಾರ ಕೂಡಲೇ ಪಾಲಿಕೆಯ ಚುನಾವಣೆ ನಡೆಸುವ ಬಗ್ಗೆ ಅಧಿಸೂಚನೆ ಹೊರಡಿಸಬೇಕು. ಇದಕ್ಕೆ ಸ್ಪಂದಿಸದೆ ಇದ್ದಲ್ಲಿ ಸೆಪ್ಟಂಬರ್‌ ಎರಡನೇ ವಾರದಲ್ಲಿ ನ್ಯಾಯಾಲಯಕ್ಕೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸುತ್ತೇವೆ ಎಂದು ಮಾಜಿ ಮೇಯರ್‌ಗಳಾದ ಎಂ ರಾಮಚಂದ್ರಪ್ಪ ಮತ್ತು ಪಿ.ಆರ್‌. ರಮೇಶ್‌ ಎಚ್ಚರಿಸಿದ್ದಾರೆ. ರಾಜ್ಯ ಚುನಾವಣಾ ಆಯೋಗವು ಈಗಾಗಲೇ ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಹಾಗೂ ಮೀಸಲಾತಿ ಪಟ್ಟಿ ಪ್ರಕಟ ಮಾಡುವುದಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶ ನೀಡಬೇಕು ಎಂದು ನ್ಯಾಯಾಲಯದಲ್ಲಿ ಕೋರಿದೆ. ಇದರ ಪ್ರಕ್ರಿಯೆಗಳನ್ನು ನೋಡಿಕೊಂಡು ನಾವು ಮುಂದುವರಿಯುತ್ತೇವೆ ಎಂದು ರಮೇಶ್‌ ತಿಳಿಸಿದರು.

ಸೆ.5ಕ್ಕೆ ಪಾಲಿಕೆಯ ಮತ್ತೂಂದು ಸಭೆ ಇದೆ. ಕಡಿಮೆ ಅವ ಧಿಯಲ್ಲಿ ಎರಡು ಸಭೆ ಬೇಡ ಎಂದು ಮುಂದೂಡಿದ್ದೇವೆ. ಈಗಾಗಲೇ ಸಭೆ ಕರೆಯಲಾಗಿದ್ದರಿಂದ ಶಿಷ್ಠಾಚಾರದಂತೆ ಸಭೆ ಕರೆದು ಮುಂದೂಡಲಾಗಿದೆ. ಇದರಲ್ಲಿ ಯಾವ ಒಳಸಂಚೂ ಇಲ್ಲ. ಸೆ.5ಕ್ಕೆ ಪಾಲಿಕೆಯ ಕೊನೆಯ ಸಭೆ ನಡೆಯಲಿದೆ,  ಮುನೀಂದ್ರ ಕುಮಾರ್‌, ಆಡಳಿತ ಪಕ್ಷದ ನಾಯಕ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.