ಎಸೆಸೆಲ್ಸಿ ಶುಲ್ಕ ಮರು ಪರಿಶೀಲನೆ: ಶಿಕ್ಷಣ ಸಚಿವ ನಾಗೇಶ್
Team Udayavani, Feb 14, 2023, 7:40 AM IST
ಬೆಂಗಳೂರು: ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ನಿಗದಿಪಡಿಸಲಾಗಿರುವ ಶುಲ್ಕವನ್ನು ಮರು ಪರಿಶೀಲನೆ ನಡೆಸುವುದಾಗಿ ಶಿಕ್ಷಣ ಸಚಿವ ನಾಗೇಶ್ ಭರವಸೆ ನೀಡಿದರು.
ನಿಯಮ 330ರಡಿ ಜೆಡಿಎಸ್ನ ಎಸ್.ಎಲ್. ಭೋಜೇಗೌಡ, ಕೆ.ಎ. ತಿಪ್ಪೇಸ್ವಾಮಿ ವಿಷಯ ಪ್ರಸ್ತಾವಿಸಿ, ಈಗಾಗಲೇ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಪ್ರತಿ ವಿದ್ಯಾರ್ಥಿಗಳಿಗೆ 60 ರೂ. ಶುಲ್ಕ ನಿಗದಿ ಮಾಡಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿರುವ ಬಡ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ. ಈ ಶುಲ್ಕ ನೀತಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಈ ಹಿಂದೆ ಮುಖ್ಯೋಪಾಧ್ಯಾಯರ ಸಂಘದ ಮೂಲಕ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ವಿತರಣೆ ಮಾಡಲಾಗುತ್ತಿತ್ತು. ಆಗಲೂ ಕೂಡ ವಿದ್ಯಾರ್ಥಿಗಳಿಂದ ಶುಲ್ಕ ವಿಧಿಸಲಾಗುತ್ತಿತ್ತು. ಇದನ್ನು ತಪ್ಪಿಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಇಒ ಹಂತದಲ್ಲಿ ವಿಷಯವಾರು ಪ್ರಶ್ನೆ ಪತ್ರಿಕೆ ವಿತರಿಸುವ ಕೆಲಸ ನಡೆದಿದೆ. ಈ ಹಿಂದೆ 2021-2022ನೇ ಸಾಲಿನಲ್ಲಿ ನಿಗದಿಪಡಿಸಿದ ಶುಲ್ಕವನ್ನೆ ಮುಂದುವರಿಸಲಾಗಿದೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.