ಬಿಡಿಎ: ಮತ್ತೂಂದು ಸಗಟು ನಿವೇಶನ ಹಂಚಿಕೆ ಪ್ರಕರಣ ಬಯಲು

ಈಗ ಹೊಸಕೆರೆಹಳ್ಳಿ ಸರದಿ , 180 ಫಲಾನುಭವಿಗಳಲ್ಲಿ 80ಕ್ಕೂ ಹೆಚ್ಚು ಅಕ್ರಮ , ಕಾರ್ಯಪಡೆ ವರದಿಯಲ್ಲಿ ಉಲ್ಲೇಖ

Team Udayavani, Dec 23, 2020, 12:36 PM IST

ಬಿಡಿಎ: ಮತ್ತೂಂದು ಸಗಟು ನಿವೇಶನ ಹಂಚಿಕೆ ಪ್ರಕರಣ ಬಯಲು

ಬೆಂಗಳೂರು: ಸಗಟು ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಕ್ರಮ ದಾಖಲೆಗಳನ್ನು ಸಿದ್ಧಪಡಿಸುತ್ತಿದ್ದ ಪ್ರಕರಣ ಇನ್ನೂ ಹಸಿ ಯಾಗಿರುವಾಗಲೇ ಮತ್ತೂಂದು ಅಂತಹದ್ದೇ ಸಗಟು ನಿವೇಶನಗಳ ಹಂಚಿಕೆ ಪ್ರಕರಣ ಅದೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬೆಳಕಿಗೆ ಬಂದಿದೆ. ಈ ಬಾರಿ ಹೊಸಕೆರೆಹಳ್ಳಿಯ ಸರದಿ.

ವಿಚಿತ್ರವೆಂದರೆ, ಈ ಹಿಂದಿನ ಪ್ರಕರಣದಂತೆಯೇ ಇದರಲ್ಲೂ ಬಿಡಿಎ ಕಾರ್ಯದರ್ಶಿ-3 ಹಂತದ ಅಧಿಕಾರಿ ನೇತೃತ್ವದಲ್ಲಿ ಪ್ರಾಧಿಕಾರದಹಲವುಸಿಬ್ಬಂದಿಶಾಮೀಲಾಗಿರುವುದು ತನಿಖೆಯಿಂದ ಬಯಲಾಗಿದೆ.

ಬನಶಂಕರಿ 3ನೇ ಹಂತದ ಹೊಸಕೆರೆಹಳ್ಳಿಯ ಸರ್ವೇ ನಂಬರ್‌ 89, 90, 91 ಮತ್ತು 94ರಲ್ಲಿ ಈ ಹಿಂದೆ ಬಿಡಿಎ ಒಕ್ಕಲೆಬ್ಬಿಸಿದ್ದ ಗುಡಿಸಲು ನಿವಾಸಿಗಳಿಗೆಹಂಚಿಕೆ ಮಾಡಿದ 180 ನಿವೇಶನಗಳಲ್ಲಿ  ಹೆಚ್ಚು-ಕಡಿಮೆ ಅರ್ಧಕ್ಕರ್ಧ ನಿವೇಶನಗಳ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಸ್ವತಃಬಿಡಿಎ ಪೊಲೀಸ್‌ ಉಪಾಧೀಕ್ಷಕರ ನೇತೃತ್ವದ ಕಾರ್ಯಪಡೆ ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ : ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಪಾದ್ರಿ, ಸನ್ಯಾಸಿನಿಗೆ ಜೀವಾವಧಿ ಶಿಕ್ಷೆ ವಿಧಿಸಿದ CBI ಕೋರ್ಟ್

ಈ ಹಿಂದೆ ಬಿಡಿಎ ಉಪಕಾರ್ಯದರ್ಶಿ-3 ಹುದ್ದೆಯಲ್ಲಿದ್ದ ಹಾಗೂ ಈಗ ಕರ್ನಾಟಕ ಕೈಗಾರಿಕಾ ಪ್ರದೇ ಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಆಗಿರುವ ಅನಿಲ್‌ ಕುಮಾರ್‌ ಸೇರಿದಂತೆ 11 ಜನ ಬಿಡಿಎ ಸಿಬ್ಬಂದಿ ಶಾಮೀಲಾಗಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಬಿಡಿಎ ಆಯುಕ್ತರು ನೋಟಿಸ್‌ ಜಾರಿ ಮಾಡಿದ್ದಾರೆ. ಇದರತನಿಖಾ ವರದಿ “ಉದಯವಾಣಿ’ಗೆ ಲಭ್ಯವಾಗಿದೆ.

ಪ್ರಕರಣದ ವಿವರ: ಹೊಸಕೆರೆಹಳ್ಳಿಯಲ್ಲಿ ಉದ್ದೇಶಿತ ಸರ್ವೆ ನಂಬರ್‌ಗಳಲ್ಲಿದ್ದ ಗುಡಿಸಲು ನಿವಾಸಿಗಳನ್ನು ಈ ಹಿಂದೆ ಒಕ್ಕಲೆಬ್ಬಿಸಲಾಗಿತ್ತು. ಇದರಲ್ಲಿ 541 ಫಲಾನು ಭವಿಗಳಿಗೆ ಬೇರೆ ಕಡೆಗೆ ಸಗಟು ನಿವೇಶನ ಹಂಚಿಕೆ ಮಾಡಬೇಕಿತ್ತು. ಅದರಲ್ಲಿ ಮೊದಲ ಹಂತದಲ್ಲಿ 238 ಫಲಾನುಭವಿಗಳಿಗೆ ಮಾತ್ರ 20×30 ಚದರಡಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗಿತ್ತು. ಉಳಿದಿದ್ದರಲ್ಲಿ180 ಫಲಾನುಭವಿಗಳಿಗೆ 2ನೇ ಹಂತದಲ್ಲಿ ಹಂಚಿಕೆ ಮಾಡುವ ವೇಳೆ ಈ ಅವ್ಯವಹಾರ ನಡೆದಿದೆ.

ಈ ಬಗ್ಗೆ ಖಾಸಗಿ ವ್ಯಕ್ತಿಯೊಬ್ಬರು ದಾಖಲೆ ಸಹಿತಬಿಡಿಎಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಬಿಡಿಎ ವಿಶೇಷ ಕಾರ್ಯಪಡೆ ತನಿಖೆ ನಡೆಸಿತು. ಪ್ರಕರಣದ ದಾಖಲೆಗಳು ಹಾಗೂ ಮೂಲ ಕಡತಗಳಿಂದ ಬಿಡಿಎಗೆ ವಂಚಿಸಿರುವುದು ಮತ್ತು ಆಮೂಲಕ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿರುವುದು ಕಂಡು ಬಂದಿದೆ.

ಈಚೆಗೆ ಕನ್ನಿಂಗ್‌ ಹ್ಯಾಂ ರಸ್ತೆಯಲ್ಲಿ ಬಿಡಿಎಗೆ ಪರ್ಯಾಯವಾಗಿ ಅಥವಾ ಬಿಡಿಎ ಉಪ ಶಾಖೆ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖಾಸಗಿ ಕಚೇರಿ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ತಯಾರಿಸುತ್ತಿದ್ದ ಹತ್ತಾರು ದಾಖಲೆ ವಶಪಡಿಸಿಕೊಳ್ಳಲಾಗಿತ್ತು.ನೂರಾರು ಕೋಟಿ ರೂ.ಅವ್ಯವಹಾರ ಪ್ರಕರಣದ ತನಿಖೆಯನ್ನು ವಿಶೇಶ ತನಿಖಾ ತಂಡ (ಎಸ್‌ಐಟಿ)ಕ್ಕೆ ವಹಿಸುವುದಾ ಗಿಯೂ ಪ್ರಾಧಿಕಾರದ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಪ್ರಕಟಿಸಿದ್ದರು. ಈ ಬೆನ್ನಲ್ಲೇ ಪ್ರಕರಣ ಬಹಿರಂಗಗೊಂಡಿದೆ.

ಪ್ರಕರಣದ ಅವ್ಯವಹಾರದ ಮೊತ್ತ ಎಷ್ಟು ಹಾಗೂ ಅನರ್ಹರಿಗೆ ಹಂಚಿಕೆಮಾಡಲಾದ ಭೂಮಿಯ ಪ್ರಮಾಣ ಎಷ್ಟು ಎಂಬುದನ್ನು ಇನ್ನಷ್ಟೇ ಲೆಕ್ಕ ಹಾಕಬೇಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆಕೆಲವು ಸಿಬ್ಬಂದಿಗೆ ನೋಟಿಸ್‌ ನೀಡಲಾಗಿದೆ. ಡಾ. ಮಹದೇವ್‌, ಆಯುಕ್ತರು, ಬಿಡಿಎ

 

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.