ಬೆಂಗಳೂರು ಈಗ ಕೋವಿಡ್ ರಾಜಧಾನಿ: ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!


Team Udayavani, Oct 8, 2020, 7:38 AM IST

ಬೆಂಗಳೂರು ಈಗ ಕೋವಿಡ್ ರಾಜಧಾನಿ: ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗ ದೇಶಕ್ಕೆ ಕೋವಿಡ್ ರಾಜಧಾನಿಯಾಗಿ ಪರಿವರ್ತನೆ ಗೊಂಡಿದೆ! ಕಳೆದ ಒಂದು ವಾರದಲ್ಲಿ ದೇಶದ ಮಹಾ ನಗರಗಳ ಪೈಕಿ ಅತಿ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಕಾಣಿಸಿಕೊಂಡಿರುವುದು ಬೆಂಗಳೂರಿನಲ್ಲಿಯೇ.

ಸದ್ಯ ಬೆಂಗಳೂರು ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿರಬಹುದು. ಆದರೆ, ಮಅಕ್ಟೋಬರ್‌ನಿಂದೀಚೆಗೆ ಬೆಂಗಳೂರಿನಲ್ಲಿ ಪ್ರಕರಣಗಳ ತೀವ್ರತೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಅ.1 ರಿಂದ 7 ರ ನಡುವೆ ಬೆಂಗಳೂರಿನಲ್ಲಿ 29,578 ಮಂದಿಗೆ ಸೋಂಕು ತಗುಲಿದೆ. ಅಂದರೆ ನಿತ್ಯ ಸರಾಸರಿ 4,225 ಮಂದಿ ಸೋಂಕಿತರಾಗಿದ್ದಾರೆ. ಇದೇ ಅವಧಿಯಲ್ಲಿ ನಿತ್ಯ ಸರಾಸರಿ ಪೂನಾದಲ್ಲಿ 2,195, ಮುಂಬೈನಲ್ಲಿ 2099, ದೆಹಲಿಯಲ್ಲಿ 3,111 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕೋವಿಡ್ ಸೋಂಕು ಪ್ರಕರಣಗಳಲ್ಲಿ ದೇಶದ ಎಲ್ಲಾ ಮಹಾನಗರಗಳನ್ನು ಬೆಂಗಳೂರು ಮೀರಿಸಿದೆ.

ಐದು ಸಾವಿರಕ್ಕೆ ಹೆಚ್ಚಳ: ಕಳೆದ ಎರಡು ದಿನಗಳಿಂದ ಮುಂಬೈ, ದೆಹಲಿ, ಪೂನಾದಲ್ಲಿ 3 ಸಾವಿರದ ಆಸುಪಾಸಿನಲ್ಲಿ ಸೋಂಕು ವರದಿಯಾಗುತ್ತಿವೆ. ಆದರೆ, ಬೆಂಗಳೂರಿನಲ್ಲಿ 5ಸಾ ವಿರಕ್ಕೆ ಹೆಚ್ಚಳವಾಗಿವೆ. ಸೋಂಕಿನ ತೀವ್ರತೆ ಮುಂದುವರೆದರೆ ಮುಂದಿನ ದಿನಗಳಲ್ಲಿ ಪ್ರಕರಣಗಳ ಪಟ್ಟಿಯಲ್ಲಿಯೂ ಬೆಂಗಳೂರು ಅಗ್ರಸ್ಥಾನಕ್ಕೇರಲಿದೆ.

250ಕ್ಕೂ ಹೆಚ್ಚು ಮಂದಿ ಸಾವು: ಸೋಂಕಿತರ ಸಾವಿನ ವಿಚಾರದಲ್ಲಿಯೂ ಬೆಂಗಳೂರು ಮುಂಚೂಣಿಯಲ್ಲಿದೆ. ಕಳೆದ 1 ವಾರದಲ್ಲಿ 254 ಸೋಂಕಿತರು ಮೃತಪಟ್ಟಿದ್ದಾರೆ. ನಿತ್ಯ ಸರಾಸರಿ 37 ಮಂದಿ ಮೃತಪಟ್ಟಂತಾಗಿದೆ. ಇತರೆ ಮಹಾನಗರಗಳಲ್ಲಿಯೂ ನಿತ್ಯ 40 ಸೋಂಕಿತರ ಸಾವಾಗುತ್ತಿದೆ.

30 ಸಾವಿರ ಸೋಂಕು ಪರೀಕ್ಷೆ: ನಗರದಲ್ಲಿ ಸೋಂಕು ಪರೀಕ್ಷೆಗಳ ಸಂಖ್ಯೆಯೂ ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸೆಪ್ಟೆಂಬರ್‌ನಲ್ಲಿ ನಿತ್ಯ ಸರಾಸರಿ 20 ಸಾವಿರ ಪರೀಕ್ಷೆ ನಡೆದಿದ್ದವು. ಸದ್ಯ ಆ ಪ್ರಮಾಣ 30 ಸಾವಿರಕ್ಕೆ ಹೆಚ್ಚಳವಾಗಿದೆ. ಅ.1 ರಿಂದ ಅ.7ರವರೆಗೆ ಒಟ್ಟು 2,16,739 ಸೋಂಕು ಪರೀಕ್ಷೆಗಳು ನಡೆದಿವೆ. ಬುಧವಾರ ಹಿಂದೆಂದಿಗಿಂತಲೂ ಅತಿ ಹೆಚ್ಚು 35183 ಪರೀಕ್ಷೆ ನಡೆದಿವೆ. ಇನ್ನು ದೇಶದಲ್ಲಿಯೇ ದೆಹಲಿ ಹೊರತುಪಡಿಸಿದರೆ ಅತಿ ಹೆಚ್ಚು ಪರೀಕ್ಷೆ ಬೆಂಗಳೂರಿನಲ್ಲಿ ನಡೆಯುತ್ತಿವೆ. ಇದೇ ಕಾರಣಕ್ಕೆ ಸೋಂಕು ಹೆಚ್ಚಳವಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸುತ್ತಾರೆ.

ಸದ್ಯ ಅತಿ ಹೆಚ್ಚು ಸೋಂಕಿತರು ಬೆಂಗಳೂರಿನಲ್ಲಿದ್ದಾರೆ!: ನಿರಂತರ ಗುಣಮುಖರ ಸಂಖ್ಯೆಗಿಂತಲೂ ಸೋಂಕು ಪ್ರಕರಣಗಳ ಹೆಚ್ಚಾದ ಹಿನ್ನೆಲೆ ಬೆಂಗಳೂರಿನ ಸಕ್ರಿಯ ಪ್ರಕರಣಗಳ ಪಟ್ಟಿಯಲ್ಲಿ ದೇಶದಲ್ಲಿಯೇ ಮೊದಲ ಸ್ಥಾನಕ್ಕೇ ತಲುಪಿದೆ. ಅಂದರೆ, ಸದ್ಯ ದೇಶದಲ್ಲಿಯೇ ಅತಿಹೆಚ್ಚು ಪಾಸಿಟಿವ್‌ ಪ್ರಕರಣ ಇಲ್ಲಿವೆ. ಮಂಗಳವಾರ ದವರೆಗೂ ಪೂನಾ ಮೊದಲ ಸ್ಥಾನದಲ್ಲಿತ್ತು. ಆದರೆ, ಬುಧವಾರ ದೇಶದಲ್ಲಿಯೇ ಅತಿ ಹೆಚ್ಚು ಪ್ರಕರಣ ಬೆಂಗಳೂರಿನಲ್ಲಿ ವರದಿ ಯಾದ ಪರಿಣಾಮ ಸಕ್ರಿಯ ಪ್ರಕರಣಗಳ ಸಂಖ್ಯೆ 58624 ಸಾವಿರಕ್ಕೆ ತಲುಪಿದೆ. ಪೂನಾ 57926 ಪ್ರಕರಣಗಳೊಂದಿಗೆ2ನೇ ಸ್ಥಾನಕ್ಕೆ ಇಳಿಕೆಯಾಗಿದೆ.

ಒಂದೇ ದಿನ 35 ಸಾವಿರ ಸೋಂಕು 
ಪಾಲಿಕೆ ಬುಧವಾರ ಒಂದೇ ದಿನ 35 ಸಾವಿರ ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಿದೆ. ಕಳೆದ 10ದಿನಗಳಿಂದ ನಗರದಲ್ಲಿ  ಸೋಂಕು ಪರೀಕ್ಷೆ ಪ್ರಮಾಣ ಹೆಚ್ಚಿಸಲಾಗಿದೆ. ಆದರೆ, ಇದೇ ಮೊದಲ ಒಂದೇ ದಿನ 35 ಸಾವಿರ ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ. ಬುಧವಾರ 35,183 ಮಂದಿ ಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ25,053 ಆರ್‌ಟಿಪಿಸಿಆರ್‌, 10,130 ರ್ಯಾಪಿಡ್‌ ಆ್ಯಂಟಿಜೆನ್‌ ಪರೀಕ್ಷೆ ನಡೆಸಲಾಗಿದೆ ಎಂದು ಪಾಲಿಕೆ ಆರೋ ಗ್ಯಾಧಿ ಕಾರಿಗಳು ತಿಳಿಸಿದ್ದಾರೆ. ಪ್ರತಿಕ್ರಿಯಿಸಿದ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, ಮೃತರ ಪ್ರಮಾಣ ಶೇ.1ಕ್ಕಿಂತ ಕಡಿಮೆ ಮಾಡುವ ಉದ್ದೇಶದಿಂದ ಹೆಚ್ಚು ಪರೀಕ್ಷೆ ಮಾಡಲಾಗುತ್ತಿದೆ ಎಂದರು.

ಮಹಾನಗರಗಳ ಪೈಕಿ ಬೆಂಗಳೂರಲ್ಲೇ ಹೆಚ್ಚು ವೈರಸ್!

ಅ. 1ರಿಂದ 7 ರ ನಡುವೆ 29,578 ಮಂದಿಗೆ ಸೋಂಕು

ಮಹಾನಗರ ಸೋಂಕು ಪ್ರಕರಣಸಾವು ಪ್ರಕರಣಸಕ್ರಿಯ ಪ್ರಕರಣ
ಬೆಂಗಳೂರು29,578254 58624
ದೆಹಲಿ21,78225522186
ಪೂನಾ15,37026057926
ಮುಂಬೈ14,69327626544

ಜಯಪ್ರಕಾಶ್ ಬಿರಾದಾರ್

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.