Bengaluru: ನಗರ ಸುತ್ತಿ ಆಡಳಿತ ವ್ಯವಸ್ಥೆಗೆ ಬಿಸಿ ಮುಟ್ಟಿಸಿದ ಸಿಎಂ ಸಿದ್ದರಾಮಯ್ಯ

ಪಾಲಿಕೆ, ಜಲಮಂಡಳಿ, ಬೆಸ್ಕಾಂ ಸೇರಿ ವಿವಿಧ ಇಲಾಖೆ ಅಧಿಕಾರಿಗಳ ಜೊತೆಗೆ ನಗರ ಪರಿವೀಕ್ಷಣೆ, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ

Team Udayavani, Sep 12, 2024, 12:24 AM IST

Bengaluru-CM-Visit

ಬೆಂಗಳೂರು: ರಾಜಧಾನಿಯ ರಸ್ತೆಗುಂಡಿಗಳ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಚಿವ ಸಂಪುಟದ ಸಹೋದ್ಯೋಗಿಗಳ ಜತೆಗೂಡಿ ನಗರಪ್ರದಕ್ಷಿಣೆ ಹಾಕಿದರು. ಆ ಮೂಲಕ ಜಡ್ಡು ಹಿಡಿದು ಕುಳಿತಿರುವ ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಿದರು. ಬಿಬಿಎಂಪಿ, ಜಲಮಂಡಳಿ, ಬೆಸ್ಕಾಂ, ಬಿಡಿಎ, ಮೆಟ್ರೋ, ಕೆಪಿಟಿಸಿಎಲ್‌, ನಗರಾಭಿವೃದ್ಧಿ ಇಲಾಖೆಗಳ ಕಾಮಗಾರಿಗಳ ಪರಿವೀಕ್ಷಣೆ ನಡೆಸಿ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

ಹವಾನಿಯಂತ್ರಿತ ಬಸ್‌ನಲ್ಲಿ ವಿಧಾನಸೌಧದ ಮೂಲಕ ನಗರ ಪರಿವೀಕ್ಷಣೆ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜಭವನ ರಸ್ತೆ ಮೂಲಕ ಸಾಗಿದರು. ಚಾಲುಕ್ಯ ವೃತ್ತ, ಹೈಗ್ರೌಂಡ್‌ ಸರ್ಕಲ್‌ ಮೂಲಕ ಬಳ್ಳಾರಿ ರಸ್ತೆಯತ್ತ ಮುಖ ಮಾಡಿದರು. ಅಲ್ಲಿಂದ ಮೇಖ್ರಿ ಸರ್ಕಲ್‌ ಮೂಲಕ ಸಾಗಿ ಸರ್ವೀಸ್‌ ರಸ್ತೆಯತ್ತ ಸಾಗಿದರು. ಹೆಬ್ಟಾಳ ಕೆಳಸೇತುವೆ ಬಳಿ ಸೇತುವೆ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು. ಹೆಣ್ಣೂರು ಜಂಕ್ಷನ್‌ ಬಳಿ ರಸ್ತೆ ಡಾಂಬರೀಕರಣದ ಬಗ್ಗೆ ಮಾಹಿತಿ ಕಲೆಹಾಕಿದರು. ಹೊರವರ್ತುಲ ರಸ್ತೆಯ ಕರಿಯಣ್ಣನ ಪಾಳ್ಯದ ಬಳಿಯ ಸರ್ವೀಸ್‌ ರಸ್ತೆಯಲ್ಲಿ ಡಾಂಬರೀಕರಣ ಕೆಲಸದ ಪ್ರಗತಿ ವೀಕ್ಷಣೆ ಮಾಡಿದರು. ನಂತರ ಕೆ.ಆರ್‌.ಪುರಂ ನತ್ತ ಸಾಗಿ ಮೆಟ್ರೋ ಕಾಮಗಾರಿಗಳ ಪ್ರಗತಿ ಬಗ್ಗೆ ವೀಕ್ಷಣೆ ಮಾಡಿದರು.

ಸಚಿವರು, ಶಾಸಕರು, ಅಧಿಕಾರಿಗಳ ದಂಡು:
ಮುಖ್ಯಮಂತ್ರಿಗಳ ನಗರ ಪ್ರದಕ್ಷಿಣೆ ವೇಳೆ ಸಚಿವರ, ಶಾಸಕರ ಮತ್ತು ಅಧಿಕಾರಿಗಳ ದಂಡಿತ್ತು. ಸಚಿವರಾದ ಕೆ.ಜೆ ಜಾರ್ಜ್‌, ಬೈರತಿ ಸುರೇಶ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಬೈರತಿ ಬಸವರಾಜು, ಎ.ಸಿ ಶ್ರೀನಿವಾಸ್‌, ಬಿಡಿಎ ಅಧ್ಯಕ್ಷ ಎನ್‌.ಎ.ಹ್ಯಾರೀಸ್‌, ಪರಿಷತ್‌ ಸದಸ್ಯ ನಾಗರಾಜ್‌ ಯಾದವ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಸೇರಿದಂತೆ ಸ್ಥಳೀಯ ಕಾಂಗ್ರೆಸ್‌ ಮುಖಂಡರು, ಪಾಲಿಕೆ ಮಾಜಿ ಸದಸ್ಯರು ಮುಖ್ಯಮಂತ್ರಿಗಳಿಗೆ ಸಾಥ್‌ ನೀಡಿದರು.

ಬಿಬಿಎಂಪಿ ಆಡಳಿತಾಧಿಕಾರಿ ಎಸ್‌.ಆರ್‌ ಉಮಾಶಂಕರ್‌, ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್‌ ರಾವ್‌, ಜಲಮಂಡಳಿ ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌, ಬಿಎಂಆಡಿಆರ್‌ಎ ಆಯುಕ್ತ ರಾಜೇಂದ್ರ ಚೋಳನ್‌, ಬಿಬಿಎಂಪಿ ವಿಶೇಷ ಆಯುಕ್ತ ಡಾ. ಕೆ. ಹರೀಶ್‌ ಕುಮಾರ್‌, ವಲಯ ಆಯುಕ್ತರಾದ ಸ್ನೇಹಲ್‌, ಅರ್ಚನಾ, ಕರೀಗೌಡ ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದು, ನಗರದ ರಸ್ತೆ ಗುಂಡಿಗಳ ದುರಸ್ತಿ, ರಸ್ತೆ ಅಭಿವೃದ್ಧಿ ಮತ್ತು ಇಲಾಖೆಗಳಿಂದ ಕೈಗೊಳ್ಳಲಾಗಿರುವ ಮೂಲಭೂತ ಸೌಕರ್ಯ ಕಾಮಗಾರಿಗಳ ಕಾರ್ಯ ಪ್ರಗತಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿದರು.

ಕಾಲಮಿತಿಯೊಳಗೆ ಕಾಮಗಾರಿ ಮುಗಿಸಿ:
ವಿವಿಧ ಕಾಮಗಾರಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದ ಸಿಎಂ ನಿಗದಿತ ಕಾಲ ಮಿತಿಯ ಒಳಗೆ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವಂತೆ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ಕೊಟ್ಟರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡಿರುವ ಹೆಬ್ಟಾಳದ ಅಂಡರ್‌ಪಾಸ್‌ ಹಾಗೂ ಫ್ಲೆ„ಓವರ್‌ ಕಾಮಗಾರಿ ಸಂಪೂರ್ಣ ವೀಕ್ಷಿಸಿದರು. ಕಾಲಮಿತಿಯಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಿಎಂ ಕಣ್ಣಿಗೆ ಬಿದ್ದ ಕಳಪೆ ಕಾಮಗಾರಿ
ನಗರ ಪ್ರದಕ್ಷಿಣ ವೇಳೆ ಹಲವು ಕಡೆಗಳಲ್ಲಿ ಕಳಪೆ ಕಾಮಗಾರಿ ನಡೆದಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಣ್ಣಿಗೆ ಬಿತ್ತು. ಹೆಣ್ಣೂರು ಜಂಕ್ಷನ್‌ ಬಳಿ ರಸ್ತೆ ಡಾಂಬರೀಕರಣದ ಬಗ್ಗೆ ಮಾಹಿತಿ ಕಲೆಹಾಕಿ ಗುಣಮಟ್ಟ ಕಾಯ್ದುಕೊಳ್ಳದಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ವಿರುದ್ಧ ಸಿಡಿಮಿಡಿಯಾದರು. ಇದೇನ್ರಿ ಗುಣಮಟ್ಟ ಎಂದು ಅಧಿಕಾರಿಗಳನ್ನ ಪ್ರಶ್ನೆ ಮಾಡಿದರು.

ಗುಣಮಟ್ಟದಲ್ಲಿ ಯಾವುದೇ ರೀತಿಯ ರಾಜೀ ಮಾಡಿಕೊಳ್ಳದೆ ಕೆಲಸ ಮಾಡಬೇಕು. ಕಳಪೆ ಕಾಮಗಾರಿಗಳನ್ನು ಸರಿಪಡಿಸಿ, ಮತ್ತೆ ಇಂತಹ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು. ಇಲ್ಲದೆ ಹೋದರೆ ಸಂಬಂಧ ಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ರಸ್ತೆ ಗುಂಡಿ ಮುಚ್ಚುವ ಕಾರ್ಯದ ಬಗ್ಗೆ ಪಾಲಿಕೆ ಆಡಳಿತಾಧಿಕಾರಿ ಎಸ್‌.ಆರ್‌ ಉಮಾಶಂಕರ್‌ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಸಿಎಂ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Dinesh-Meeting

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Champions Trophy; ICC delegation to Karachi for security review

Champions Trophy; ಭದ್ರತೆ ಪರಿಶೀಲನೆಗೆ ಐಸಿಸಿ ನಿಯೋಗ ಕರಾಚಿಗೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.