Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ


Team Udayavani, Oct 22, 2024, 10:00 AM IST

Crime: ನಿಧಾನವಾಗಿ ಮಾತನಾಡಿ ಎಂದಿದ್ದಕ್ಕೆ  ಗಲಾಟೆ; ಪಾನಿಪೂರಿ ವ್ಯಾಪಾರಿ ಹತ್ಯೆ

ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ನಡೆದ ಜಗಳದಲ್ಲಿ ಪಾನಿಪೂರಿ ವ್ಯಾಪಾರಿ ಕೊಲೆಯಾಗಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋನಪ್ಪನ ಅಗಹ್ರಾರ ನಿವಾಸಿ ಸರ್ವೇಶ್‌ ಸಿಂಗ್‌ (32) ಕೊಲೆಯಾದವ. ಭಾನುವಾರ ರಾತ್ರಿ ಸುಮಾರು 11.30ಕ್ಕೆ ಬೆಂಗಳೂರು-ಹೊಸೂರು ಮುಖ್ಯರಸ್ತೆಯ ಕೋನಪ್ಪನ ಅಗ್ರಹಾರದ ಸರ್ಕಲ್‌ ಬಳಿ ಈ ಘಟನೆ ನಡೆದಿದೆ.

ಕೊಲೆ ಸಂಬಂಧ ಆರೋಪಿಗಳಾದ ಜಾರ್ಖಂಡ್‌ ಮೂಲದ ಸಹದೇವ(45) ಮತ್ತು ರಾಹುಲ್‌ ಕುಮಾರ್‌(26) ಎಂಬುವವರನ್ನು ಬಂಧಿ ಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಏನಿದು ಘಟನೆ?: ಉತ್ತರ ಪ್ರದೇಶ ಮೂಲದ ಸರ್ವೇಶ್‌ ಸಿಂಗ್‌, 12 ವರ್ಷಗಳಿಂದ ಕೋನಪ್ಪನ ಅಗ್ರಹಾರ ಪುರಸಭೆ ಎದುರು ರಸ್ತೆ ಬದಿ ಪಾನಿಪೂರಿ ವ್ಯಾಪಾರ ಮಾಡುತ್ತಿದ್ದ. ಪತ್ನಿ ಮತ್ತು ಮಕ್ಕಳ ಜತೆ ಕೋನಪ್ಪನ ಅಗ್ರಹಾರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಭಾನುವಾರ ರಾತ್ರಿ ಪಾನಿಪೂರಿ ವ್ಯಾಪಾರ ಮುಗಿಸಿಕೊಂಡು ಹೆದ್ದಾರಿ ಪಕ್ಕದಲ್ಲಿರುವ ಬಾರ್‌ಗೆ ಹೋಗಿ, ಮದ್ಯ ಸೇವಿಸಲು ಮುಂದಾಗಿದ್ದಾನೆ. ಈ ವೇಳೆ ಪಕ್ಕದ ಟೇಬಲ್‌ ಮೇಲೆ ಕುಳಿತಿದ್ದ ಆರೋಪಿಗಳು ಪರಸ್ಪರ ಅವಾಚ್ಯ ಶಬ್ಧ ಬಳಸಿಕೊಂಡು ಜೋರಾಗಿ ಮಾತನಾಡುತ್ತಿದ್ದರು. ಆಗ ಸರ್ವೇಶ್‌ ಸಿಂಗ್‌, ನಿಧಾನವಾಗಿ ಮಾತನಾಡುವಂತೆ ಹೇಳಿದ್ದಾನೆ. ಅಷ್ಟಕ್ಕೆ ಕೋಪಗೊಂಡ ಆರೋಪಿಗಳು, ಸರ್ವೇಶ್‌ ಸಿಂಗ್‌ ಜತೆ ಜಗಳ ತೆಗೆದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.

ಹಿಂಬಾಲಿಸಿ ಹಲ್ಲೆ ಮಾಡಿ ಹತ್ಯೆ: ನಂತರ ಬಾರ್‌ ಸಿಬ್ಬಂದಿ ಮೂವರಿಗೂ ಸಮಧಾನ ಮಾಡಿ ಕಳುಹಿಸಿದ್ದಾರೆ. ಬಾರ್‌ನಿಂದ ಹೊರಗೆ ಬಂದ ಸರ್ವೇಶ್‌ ಸಿಂಗ್‌ ಸಿಗರೇಟ್‌ ಸೇದುವಾಗ ಮತ್ತೆ ಆರೋಪಿಗಳು ಆತನ ಬಳಿ ಬಂದು ಕಿರಿಕ್‌ ಮಾಡಿದ್ದಾರೆ. ಬಳಿಕ ಸರ್ವೇಶ್‌ ಸಿಂಗ್‌ ಹೆದ್ದಾರಿ ದಾಟಿಕೊಂಡು ಮನೆ ಕಡೆ ಹೊರಟ್ಟಿದ್ದಾನೆ. ಈ ವೇಳೆ ಆರೋಪಿಗಳ ಆತನನ್ನು ಹಿಂಬಾಲಿಸಿ ಮತ್ತೆ ಜಗಳ ತೆಗೆದು, ಸರ್ವೇಶ್‌ ಸಿಂಗ್‌ಗೆ ಕಾಲಿನಿಂದ ಒದ್ದು ರಸ್ತೆಗೆ ಕೆಡವಿದ್ದಾರೆ. ಬಳಿಕ ಅಲ್ಲೇ ಬಿದ್ದಿದ್ದ ಪಾರ್ಕಿಂಗ್‌ ಟೈಲ್ಸ್‌ ತೆಗೆದು ಸರ್ವೇಶ್‌ ಸಿಂಗ್‌ನ ತಲೆಗೆ ಹಲ್ಲೆ ಮಾಡಿ ಕೊಲೆ ಮಾಡಿ ಪರಾರಿಯಾಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಯಲ್ಲೇ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದ ಆರೋಪಿಗಳು: ಜಾರ್ಖಂಡ್‌ ಮೂಲದ ಆರೋಪಿಗಳು ಒಂದು ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ಗಾರೆ ಕೆಲಸ ಮಾಡಿಕೊಂಡಿದ್ದರು ಎಂಬುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ ಪೊಲೀಸರು ತಿಳಿಸಿದರು. ಈ ಸಂಬಂಧ ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Sandalwood: ಪಯಣದಲ್ಲಿ ನೀನಿರು ಸಾಕು..: ಅಭಿಮನ್ಯು ಚಿತ್ರದ ಹಾಡು ಬಂತು

Bishnoi: ಬಿಷ್ಣೋಯಿನ ಕೊಂದ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ

Bishnoi: ಬಿಷ್ಣೋಯಿನ ಕೊಲ್ಲುವ ಪೊಲೀಸ್‌ ಅಧಿಕಾರಿಗೆ 1.11 ಕೋಟಿ ರೂ. ಬಹುಮಾನ! ಕರ್ಣಿ ಸೇನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru Rain: ಪರಿಹಾರ ಕಾರ್ಯಕ್ಕೆ 1,000 ಕೋಟಿ ನೀಡಿ; ಅಶೋಕ್‌

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Jewellery: ಗ್ರಾಹಕರ ಸೋಗಿನಲ್ಲಿ ಬಂದು ಚಿನ್ನಾಭರಣ ದರೋಡೆ; ಮಾಲೀಕನಿಂದ ಗುಂಡಿನ ದಾಳಿ!

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

Shakib Fans: ಶಕೀಬ್‌ ಅಭಿಮಾನಿಗಳಿಗೆ ವಿರೋಧಿ ಗುಂಪಿನಿಂದ ಹಲ್ಲೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಗದಗ: ತುಂಗಭದ್ರಾ ನದಿಗೆ ಬಿದ್ದು ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.