bengaluru karaga: ಹತ್ಯೆಗಾಗಿ ಹರಕೆ ರೂಪದಲ್ಲಿ ರಾಸಾಯನಿಕ ದಾಳಿ; ಓರ್ವ ಆರೋಪಿಯ ಬಂಧನ


Team Udayavani, Apr 14, 2023, 11:21 AM IST

bengaluru karaga: ಹತ್ಯೆಗಾಗಿ ಹರಕೆ ರೂಪದಲ್ಲಿ ರಾಸಾಯನಿಕ ದಾಳಿ; ಓರ್ವ ಆರೋಪಿಯ ಬಂಧನ

ಬೆಂಗಳೂರು: ಕರಗ ಹೊರುವ ವಿಚಾರಕ್ಕೆ ಈ ಬಾರಿ ಇತಿಹಾಸ ಪ್ರಸಿದ್ಧ ಬೆಂಗಳೂರು ಕರಗ ಹೊತ್ತಿದ್ದ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ಪದಾರ್ಥ ಎರಚಿ ಕೊಲೆಗೆ ಯತ್ನಿಸಿದ ಆರೋಪದ ಮೇಲೆ ಜೆ.ಪಿ.ನಗರ ನಿವಾಸಿ ಆದಿ ನಾರಾಯಣ ಎಂಬಾತನನ್ನು ಹಲಸೂರು ಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಆರೋಪಿಯ ಪ್ರಾಥಮಿಕ ವಿಚಾರಣೆಯಲ್ಲಿ ಹತ್ಯೆಗೈಯಲೆಂದೇ, ರಾಸಾಯನಿಕ ಪದಾರ್ಥ ಬಳಸಿ, ಕರಗ ಹೊತ್ತಿದ್ದಾಗ ಜ್ಞಾನೇಂದ್ರ ಅವರ ಮೇಲೆ ಎಸೆದಿರುವುದು ಬೆಳಕಿಗೆ ಬಂದಿದೆ. ಮತ್ತೂಬ್ಬ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಜ್ಞಾನೇಂದ್ರ ಮತ್ತು ಆರೋಪಿ ಆದಿನಾರಾಯಣ ಕುಟುಂಬದವರದ್ದು ಈ ಹಿಂದಿನಿಂದಲೂ ಕರಗ ಹೊರುವ ವಿಚಾರದಲ್ಲಿ ಪೈಪೋಟಿ ಇದೆ. ಕೋರ್ಟ್‌ ಮೆಟ್ಟಿಲು ಕೂಡ ಹತ್ತಿದ್ದಾರೆ. ಕರಗ ಹೊರಲು ಅರ್ಚಕರ ನಡುವೆ ಪೈಪೋಟಿ ನಡೆಯುತ್ತಲೇ ಇದೆ. ಕಾರಣ ಕರಗ ಹೊರುವ ಅರ್ಚಕರಿಗೆ ನೀಡುವ ದುಬಾರಿ ಗೌರವಧನ. ಹೀಗಾಗಿ ಕರಗ ಹೊರುವ ಅರ್ಚಕರ ನಡುವೆ ವಾದ-ಪ್ರತಿವಾದಗಳು ಇದ್ದೇ ಇರುತ್ತದೆ. ಅದೇ ರೀತಿ ಈ ವರ್ಷ ಕೂಡ ಚರ್ಚೆಯಲ್ಲಿತ್ತು. ಆಗ ದೇವಸ್ಥಾನ ಮಂಡಳಿಯ ಹಿರಿಯರು ಕೋರ್ಟ್‌ ಸೂಚನೆ ಮೇರೆಗೆ ಜ್ಞಾನೇಂದ್ರ ಅವರಿಗೆ ಈ ಬಾರಿಯ ಕರಗ ಹೊರುವ ಅವಕಾಶ ನೀಡಿದ್ದರು.

ಕರಗ ಉತ್ಸವ ವೇಳೆ ಸಂಪ್ರದಾಯಿಕವಾಗಿ ಹೂ, ಮೆಣಸಿನಕಾಳು, ಕಲ್ಲುಪ್ಪು ಸೇರಿ ಕೆಲ ಪದಾರ್ಥ ಗಳನ್ನು ಹರಕೆಯ ಹೆಸರಿಲ್ಲಿ ಭಕ್ತರು ಕರಗದ ಮೇಲೆ ಎಸೆಯುತ್ತಾರೆ. ಅದನ್ನು ದುರುಪಯೋಗ ಪಡಿಸಿಕೊಂಡು ಆದಿನಾರಾಯಣ ಏ.6ರಂದು ನಡೆದ ಕರಗ ಮಹೋತ್ಸವ ಸಂದರ್ಭದಲ್ಲಿ ಜ್ಞಾನೇಂದ್ರ ಅವರ ಮೇಲೆ ರಾಸಾಯನಿಕ ವಸ್ತು ಮತ್ತು ಖಾರದ ಪುಡಿ ಮಿಶ್ರಣದ ವಸ್ತು ಎಸೆದಿದ್ದಾರೆ. ಅದರಿಂದ ಜ್ಞಾನೇಂದ್ರ ಅವರಿಗೆ ಉರಿ ಹೆಚ್ಚಾಗಿದ್ದು, ಪಕ್ಕದಲ್ಲಿದ್ದ ವೀರಕುಮಾರರಿಗೆ ತಿಳಿಸಿದ್ದಾರೆ.

ಆರೋಪಿ ಆದಿನಾರಾಯಣ ತಪ್ಪಿಸಿಕೊಳ್ಳುವುದನ್ನು ಗಮನಿಸಿದ ವೀರಕುಮಾರರು ಆತನನ್ನು ಹಿಡಿದು ಥಳಿಸಿ ಮಂಡಳಿ ಸದಸ್ಯರ ವಶಕ್ಕೆ ನೀಡಿದ್ದರು. ಈ ಸಂಬಂಧ ಕೆಲ ದಿನಗಳ ಹಿಂದೆ ದೇವಾಲಯದ ಮಂಡಳಿ ಸದಸ್ಯರು ನೀಡಿದ ದೂರಿನ ಮೇರೆಗೆ ಆದಿನಾರಾಯಣನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

 

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Road rage case: ರೋಡ್‌ ರೇಜ್‌ ಕೇಸ್‌ ಬಗ್ಗೆ ದೂರು ನೀಡಿ; ಕಮಿಷನರ್‌

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Namma Metro: ಮೆಟ್ರೋ ಹಳಿ ಮೇಲೆ ಜಿಗಿದು ಆತ್ಮಹತ್ಯೆಗೆ ಯತ್ನ

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕಿ!

Laptop theft: ಕೆಲಸಕ್ಕಿದ್ದ ಕಂಪನಿಯಲ್ಲೇ 55 ಲ್ಯಾಪ್‌ಟಾಪ್‌ ಕದ್ದ ಟೆಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.