ಮಾರುಕಟ್ಟೆಯಲ್ಲಿ ವ್ಯಾಪಾರ ಅರಂಭಿಸಿದ ವರ್ತಕರು

ಸೋಂಕು ಭೀತಿಯಿಂದ ಮಾರ್ಕೆಟ್‌ಗೆ ಬಾರದ ಜನರು ,ಅವಕಾಶ ನೀಡದಿದ್ದಕ್ಕೆ ಬೀದಿ ಬದಿ ವ್ಯಾಪಾರಿಗಳಿಗೆ ನಿರಾಸೆ

Team Udayavani, Sep 2, 2020, 11:35 AM IST

ಮಾರುಕಟ್ಟೆಯಲ್ಲಿ ವ್ಯಾಪಾರ ಅರಂಭಿಸಿದ ವರ್ತಕರು

ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿ ಮಳಿಗೆಗಳನ್ನು ತೆರೆದಿರುವುದು.

ಬೆಂಗಳೂರು: ಸೋಂಕು ಭೀತಿ ಹಿನ್ನೆಲೆಯಲ್ಲಿ ಕಳೆದ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಕೃಷ್ಣರಾಜೇಂದ್ರ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಮಂಗಳವಾರದಿಂದ ಪ್ರಾರಂಭವಾಗಿದೆ.

ಕೆ.ಆರ್‌.ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದನ್ನೇ ಮುಖ್ಯ ವೃತ್ತಿಯಾಗಿ ಮಾಡಿಕೊಂಡಿರುವ ನೂರಾರು ಜನ ವ್ಯಾಪಾರಿಗಳು ಕಳೆದ ಐದು ತಿಂಗಳಿನಿಂದ ಯಾವುದೇ ವ್ಯಾಪಾರವಿಲ್ಲದೆ ನಷ್ಟದಲ್ಲೇ ಕಾಲಕಳೆದಿದ್ದರು. ಹೋರಾಟದ ನಂತರ ಪಾಲಿಕೆ ಈ ಎರಡು ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದೆಯಾದರೂ, ಶೇ.30ರಷ್ಟು ಸಾರ್ವಜನಿಕರೂ ಮಾರುಕಟ್ಟೆಗಳತ್ತ ಮುಖ ಮಾಡದೆ ಇರುವುದು ಇಲ್ಲಿನ ವ್ಯಾಪಾರಿಗಳಲ್ಲಿ ನಿರಾಸೆ ಮತ್ತು ಆತಂಕ ಮೂಡಿಸಿದೆ.

ವ್ಯಾಪಾರಿಗಳು ಇಲ್ಲ, ಗ್ರಾಹಕರೂ ಇಲ್ಲ: ಎರಡು ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಪಾಲಿಕೆ ಅಧಿಕೃತವಾಗಿ ಅವಕಾಶ ಕಲ್ಪಿಸಿದೆಯಾದರೂ ವ್ಯಾಪಾರ ಮಾಡಲು ಮಳಿಗೆಯ ಮಾಲೀಕರು ಹಾಗೂ ಖರೀದಿಸಲು ಗ್ರಾಹಕರು ಹಿಂದೇಟು ಹಾಕಿದ್ದು ಕಂಡು ಬಂತು. ಸೋಮವಾರ ಬೆಳಗ್ಗೆಯಿಂದಲೇ ಇಲ್ಲಿನ ಮಳಿಗೆಗಳ ಸ್ವತ್ಛತಾ ಕಾರ್ಯ ಪ್ರಾರಂಭಿಸಿ ಮಂಗಳವಾರದಿಂದ ವ್ಯಾಪಾರ ಮಾಡಲು ಪಾಲಿಕೆ ಅವಕಾಶ ಮಾಡಿ ಕೊಟ್ಟಿದೆಯಾದರೂ ಗ್ರಾಹಕರ ಕೊರತೆ ಎದ್ದು ಕಾಣಿಸುತ್ತಿತ್ತು.

ಮಾರುಕಟ್ಟೆಯಿಂದ ಹೊರಕ್ಕೆ ಬಂದು ವ್ಯಾಪಾರ: ಕೆ.ಆರ್‌. ಮಾರುಕಟ್ಟೆಯ ಒಳಭಾಗದಲ್ಲಿ ಸಾರ್ವಜನಿಕರು ಬಂದು ವ್ಯಾಪಾರ ಮಾಡದ ಹಿನ್ನೆಲೆಯಲ್ಲಿ ವ್ಯಾಪಾರಿಗಳೇ ಹೂವಿನ ಹಾರವನ್ನು ಹೊರಕ್ಕೆ ತಂದು ಮಾರಾಟ ಮಾಡಲು ಮುಂದಾಗಿದ್ದು, ಕಂಡುಬಂತು. ಮಾರುಕಟ್ಟೆಯ ಮುಖ್ಯ ರಸ್ತೆಯಲ್ಲಿ ಹೂವಿನ ಹಾರ ಹಿಡಿದು ವ್ಯಾಪಾರಿಗಳು ಮಾರಾಟ ಮಾಡಲು ಮುಂದಾದರಾದರೂ ಇಲ್ಲಿಯೂ ಗ್ರಾಹಕರು ಹೂ ಖರೀದಿಸಲು ಬರಲಿಲ್ಲ.

ಬುಧವಾರದಿಂದ ದಂಡ: ಕೆ.ಆರ್‌. ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಮಳಿಗೆಗಳಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಎನ್ನುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿ ಈ ಮಾರುಕಟ್ಟೆಗಳಲ್ಲಿ ವ್ಯಾಪಾರ ಮಾಡುವುದಕ್ಕೆ ಪಾಲಿಕೆ ಅವಕಾಶ ಕಲ್ಪಿಸಿದೆ. ಅಲ್ಲದೆ, ಈ ನಿಯಮಗಳು ಸರಿಯಾಗಿ ಪಾಲನೆಯಾಗುತ್ತಿದೆಯೋ ಇಲ್ಲವೋ ಎಂದು ನಿಗಾ ವಹಿಸಲು 15 ಜನ ಮಾರ್ಷಲ್‌ಗ‌ಳನ್ನೂ ಪಾಲಿಕೆ ನೇಮಕ ಮಾಡಿದೆ. ಆದರೆ, ಮಂಗಳವಾರ ಹಲವು ವ್ಯಾಪಾರಿಗಳು ಈ ನಿಯಮ ಉಲ್ಲಂಘನೆ ಮಾಡಿದ್ದು, ಇವರಿಗೆ ಮಂಗಳವಾರ ಎಚ್ಚರಿಕೆ ನೀಡಿ ಬಿಡಲಾಗಿದೆ. ಬುಧವಾರದಿಂದ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲು ಮಾರ್ಷಲ್‌ಗ‌ಳು ನಿರ್ಧರಿಸಿದ್ದಾರೆ.

ಕೊಳಚೆ ನಡುವೆಯೇ ವ್ಯಾಪಾರ ಮಾಡಿದ ವ್ಯಾಪಾರಿಗಳು: ಕಳೆದ ಎರಡು ದಿನಗಳಲ್ಲಿಂದ ನಗರದಲ್ಲಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಲಾಸಿಪಾಳ್ಯ ಮಾರುಕಟ್ಟೆ ಅಕ್ಷರಶಃ ಕೆಸರುಗೆದ್ದಯಂತೆ ಬದಲಾಗಿದ್ದು, ಕೆಸರು ಹಾಗೂ ಕೊಳಚೆ ಪ್ರದೇಶದಲ್ಲೇ ವ್ಯಾಪಾರಿಗಳು ವ್ಯಾಪಾರ ಮಾಡಿದ್ದು, ಕಂಡುಬಂತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.