ವಾಹನ ಪಂಕ್ಚರ್ ಮಾಡಲು ರಸ್ತೆ ಮಧ್ಯೆ ಮೊಳೆ ಸುರಿದ ಕಿಡಿಗೇಡಿಗಳು?
Team Udayavani, Jul 30, 2024, 12:09 PM IST
ಬೆಂಗಳೂರು: ಜಾಲಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ವೃತ್ತದ ಕೆಳಸೇತುವೆ ರಸ್ತೆಯಲ್ಲಿ ನೂರಾರು ಸಣ್ಣ ಮೊಳೆಗಳು ಪತ್ತೆಯಾಗಿದ್ದು, ಇದರ ಹಿಂದೆ ಪಂಕ್ಚರ್ ಅಂಗಡಿಗಳ ಕೈವಾಡ ವಿರುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಹಾಗೂ ಸಂಚಾರ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಮಾರ್ಗದಲ್ಲಿ ಪದೇ ಪದೆ ವಾಹನಗಳ ಪಂಕ್ಚರ್ ಆಗುತ್ತಿತ್ತು. ಅದನ್ನು ಸಂಚಾರ ಪೊಲೀಸರು ಪರಿಶೀಲಿಸಿದಾಗ ರಸ್ತೆ ಹಾಗೂ ಪಾದಚಾರಿ ಮಾರ್ಗದಲ್ಲಿ ನೂರಾರು ಮೊಳೆಗಳು ಪತ್ತೆಯಾಗಿದ್ದವು. ಈ ಮೊಳೆಗಳನ್ನು ಸಂಚಾರ ಪೊಲೀಸರು ಹೆಕ್ಕಿ ರಸ್ತೆಯನ್ನು ಸ್ವತ್ಛಗೊಳಿಸಿದ್ದಾರೆ. ಈ ಸಂಬಂಧ ಜಾಲಹಳ್ಳಿ ಸಂಚಾರ ಠಾಣೆ ಪೊಲೀಸರು ಕೆಳಸೇತುವೆ ರಸ್ತೆ ಸ್ವತ್ಛತೆ ಹಾಗೂ ಸಂಗ್ರಹಿಸಿರುವ ಮೊಳೆಗಳ ಫೋಟೋವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಅದಕ್ಕೆ ಹಲವು ನೆಟ್ಟಿಗರು ಪ್ರತಿ ಕ್ರಿಯಿಸಿದ್ದು, ಇದರ ಹಿಂದೆ ಪಂಕ್ಚರ್ ಅಂಗಡಿಗಳ ಕೈವಾಡವಿರುವ ಸಾಧ್ಯತೆ ಯಿದೆ. ಸಮೀಪದ ಸಿಸಿ ಕ್ಯಾಮೆರಾ ಪರಿಶೀಲಿಸುವಂತೆ ಸಂಚಾರ ಪೊಲೀಸರಿಗೆ ಸಲಹೆ ನೀಡಿದ್ದಾರೆ. ಯಾರೋ ಉದ್ದೇಶಪೂರ್ವಕವಾಗಿ ಮೊಳೆಗಳನ್ನು ರಸ್ತೆಯಲ್ಲಿ ಚೆಲ್ಲಿರುವಂತಿದೆ.
ಕುವೆಂಪು ವೃತ್ತದ ಸಮೀಪದ ದೇವಿನಗರದ ಬಳಿ ಇರುವ ಪಂಕ್ಚರ್ ಶಾಪ್ಗ್ಳ ಕೈವಾಡ ಇರುವ ಸಾಧ್ಯತೆಯಿದ್ದು, ಈ ಬಗ್ಗೆ ಸಮೀಪದ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.