ಬಿಐಎಎಲ್‌: ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ


Team Udayavani, Apr 23, 2019, 4:10 AM IST

bial

ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್‌ನ‌ (ಬಿಐಎಎಲ್‌) ಪ್ರಸಕ್ತ ಹಣಕಾಸು ವರ್ಷದ ಫ‌ಲಿತಾಂಶ ಪ್ರಕಟಗೊಂಡಿದ್ದು, 2018-19ರ ವರ್ಷಾಂತ್ಯಕ್ಕೆ ಪ್ರಯಾಣಿಕರ ಸಂಖ್ಯೆಯಲ್ಲಿ ಶೇ. 33.30ರಷ್ಟು ಏರಿಕೆ ಕಂಡುಬಂದಿದೆ.

ಕಳೆದೊಂದು ವರ್ಷದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 33.30 ದಶಲಕ್ಷ ಪ್ರಯಾಣಿಕರು ಸಂಚರಿಸಿದ್ದು, 2.40 ಲಕ್ಷ ವಿಮಾನಗಳು ಹಾರಾಟ ನಡೆಸಿವೆ. ಈ ಮೂಲಕ ಪ್ರಯಾಣಿಕರ ಸಂಖ್ಯೆ ಶೇ. 33.30ರಷ್ಟು ಹಾಗೂ ವಿಮಾನಗಳ ಸಂಚಾರದಟ್ಟಣೆಯಲ್ಲಿ ಶೇ. 21.8ರಷ್ಟು ವೃದ್ಧಿಯಾಗಿದೆ.

ಒಟ್ಟಾರೆ ಪ್ರಯಾಣಿಕರಲ್ಲಿ ದೇಶೀಯ ವಿಮಾನಗಳಲ್ಲಿ 28.82 ಹಾಗೂ ಅಂತಾರಾಷ್ಟ್ರೀಯ ವಿಮಾನಗಳಲ್ಲಿ 4.48 ದಶಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶೀಯ 23.09 ಹಾಗೂ ಅಂತಾರಾಷ್ಟ್ರೀಯ 3.81 ಸೇರಿದಂತೆ 26.91 ದಶಲಕ್ಷ ಜನ ಸಂಚರಿಸಿದ್ದರು. ಅಲ್ಲದೆ, ಈ ಅವಧಿಯಲ್ಲಿ ಸರಕು ಸಾಗಣೆಯಲ್ಲಿ ಕೂಡ ಶೇ. 11.0ರಷ್ಟು ಪ್ರಗತಿ ಸಾಧಿಸಿದೆ ಎಂದು ಬಿಐಎಎಲ್‌ ತಿಳಿಸಿದೆ.

ಬಿಐಎಎಲ್‌ ಪ್ರಯಾಣಿಕರಿಗೆ ಪೂರಕವಾದ ಹಲವು ಕ್ರಮಗಳನ್ನು ಕೈಗೊಂಡಿದ್ದು, ಕೇವಲ 45 ಸೆಕೆಂಡ್‌ಗಳಲ್ಲಿ ಬ್ಯಾಗೇಜ್‌ ಚೆಕ್‌ಇನ್‌ ವ್ಯವಸ್ಥೆಯನ್ನು ಈ ಅವಧಿಯಲ್ಲಿ ಅಳವಡಿಸಲಾಯಿತು. ಅಟೋಮೇಟೆಡ್‌ ಟ್ರೇರಿಟ್ರೀವಲ್‌ ಇರುವ ಸ್ಮಾರ್ಟ್‌ ಸೆಕ್ಯುರಿಟಿ ಲೇನ್‌ಗಳು ಸೇರಿದಂತೆ ಹಲವು ಮೈಲುಗಲ್ಲುಗಳಿಗೆ ಈ ವರ್ಷ ಸಾಕ್ಷಿಯಾಯಿತು ಎಂದು ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್‌ ತಿಳಿಸಿದ್ದಾರೆ.

ಅಲ್ಲದೆ, ಆಗಾಗ್ಗೆ ಮಂಜಿನಿಂದಾಗಿ ವಿಮಾನಗಳ ಸೇವೆಯಲ್ಲಿ ಉಂಟಾಗುತ್ತಿರುವ ವ್ಯತ್ಯಯಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಂಬಂಧದ ಅಧ್ಯಯನಕ್ಕಾಗಿ ಜವಾಹರಲಾಲ್‌ ನೆಹರು ಮುಂದುವರಿದ ವಿಜ್ಞಾನ ಸಂಶೋಧನಾ ಕೇಂದ್ರದೊಂದಿಗೆ 20 ತಿಂಗಳ ಒಪ್ಪಂದ ಕೂಡ ಮಾಡಿಕೊಳ್ಳಲಾಯಿತು. ಈಗ 13 ಸಾವಿರ ಕೋಟಿ ವೆಚ್ಚದಲ್ಲಿ ಬಿಐಎಎಲ್‌ ವಿಸ್ತರಣೆ ಆಗುತ್ತಿದ್ದು, 2,55,000 ಚ.ಮೀ.ನಲ್ಲಿ ಟರ್ಮಿನಲ್‌-2 ನಿರ್ಮಾಣ ಆಗುತ್ತಿದೆ.

2021ರ ವೇಳೆಗೆ ಟರ್ಮಿನಲ್‌-2 ಕಾರ್ಯಾರಂಭಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ. ಎರಡು ಹಂತಗಳಲ್ಲಿ ಉದ್ದೇಶಿತ ಟರ್ಮಿನಲ್‌ ನಿರ್ಮಾಣಗೊಳ್ಳಲಿದ್ದು, ಮೊದಲ ಹಂತದಲ್ಲಿ 25 ದಶಲಕ್ಷ ಪ್ರಯಾಣಿಕರಿಗೆ ಮತ್ತು 2ನೇ ಹಂತದಲ್ಲಿ 20 ದಶಲಕ್ಷ ಪ್ರಯಾಣಿಕರ ಸಾಮರ್ಥ್ಯ ಹೆಚ್ಚಿಸಲಿದೆ ಎಂದು ಹೇಳಿದರು.

ಪ್ರಯಾಣಿಕರ ಸಂಚಾರ (ದಶಲಕ್ಷಗಳಲ್ಲಿ) 2018-19 2017-18 ಪ್ರಗತಿ (ಶೇಕಡಾವಾರು)
-ದೇಶೀಯ 28.82 23.09 24.8
-ಅಂತಾರಾಷ್ಟ್ರೀಯ 4.48 3.81 17.5
-ಒಟ್ಟಾರೆ 33.30 26.91 23.8

ವಿಮಾನಗಳ ಸಂಚಾರ 2018-19 2017-18 ಪ್ರಗತಿ (ಶೇಕಡಾವಾರು)
-ದೇಶೀಯ 2,11,795 1,72,665 22.7
-ಅಂತಾರಾಷ್ಟ್ರೀಯ 2,11,795 24,665 15.4
-ಒಟ್ಟಾರೆ 2,40,251 1,97,330 21.8

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.