ಕಾರು ತಗುಲಿದ್ದಕ್ಕೆ ಬಾನೆಟ್ಗೆ ಕಾಲಿನಿಂದ ಹೊಡೆದ ಬೈಕ್ ಸವಾರ
Team Udayavani, Jun 10, 2024, 12:03 PM IST
ಬೆಂಗಳೂರು: ಕಾರು ಚಾಲಕ ಯೂಟ ರ್ನ್ ಪಡೆಯುವ ವೇಳೆ ತನ್ನನ್ನು ಗಮನಿ ಸದೆ ಚಾಲನೆ ಮಾಡಿದಕ್ಕೆ ಆಕ್ರೋಶಗೊಂಡ ಬೈಕ್ ಸವಾರನೊಬ್ಬ ಕಾರನ್ನು ಅಡ್ಡಗಟ್ಟಿ ಬಾನೆಟ್ಗೆ ಕಾಲಿನಿಂದ ಒದ್ದು ಉದ್ಧಟತನ ಪ್ರದರ್ಶಿಸಿದ್ದಾನೆ.
ಈ ದೃಶ್ಯ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ಜೂ.7ರಂದು 11.30 ರ ಸುಮಾರಿಗೆ ಜಕ್ಕೂರು ಬಳಿಯ ಶ್ರೀರಾಮಪುರ ವಿಲೇಜ್ ಬಳಿ ಈ ಘಟನೆ ನಡೆದಿದ್ದು, ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಬೈಕ್ ಸವಾರ ಉದ್ಧಟತನ ತೊರಿರುವ ದೃಶ್ಯ ಸೆರೆಯಾಗಿದೆ.
ಕಾರಿನಲ್ಲಿ ಸಾಗುತ್ತಿದ್ದ ಚಾಲಕ ಪ್ರವೀಣ್, ಯೂಟರ್ನ್ ಪಡೆಯುವಾಗ ಬೈಕ್ ಸವಾರನನ್ನು ಗಮನಿಸದೆ, ಏಕಾಏಕಿ ಯೂಟರ್ನ್ ಮಾಡಿದ್ದಾರೆ. ಅದರಿಂದ ಆಕ್ರೋಶಗೊಂಡ ಬೈಕ್ ಸವಾರ ಸ್ವಲ್ಪ ದೂರ ಸಾಗಿದ ಬಳಿಕ ಕಾರನ್ನು ಓವರ್ ಟೇಕ್ ಮಾಡಿ ಅಡ್ಡಗಟ್ಟಿದ್ದಾನೆ. ನಂತರ ಬೈಕ್ನಿಂದ ಇಳಿದು ಬಂದು ಏಕಾಏಕಿ ಕಾರಿನ ಬಾನೆಟ್ ಗೆ ಕಾಲಿನಿಂದ ಒದ್ದು, ಕಾರು ಚಾಲಕನಿಗೆ ನಿಂದಿಸಿದ್ದಾನೆ. ಆರೋಪಿಯ ಕೃತ್ಯ ಕಾರಿನಲ್ಲಿ ಅಳವಡಿಸಿದ್ದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ಕುರಿತು ಕಾರು ಚಾಲಕ ಪ್ರವೀಣ್ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಪೊಲೀಸರು ಆತನನ್ನು ಸಂಪರ್ಕಿಸಿ ಬೈಕ್ ಚಾಲಕನ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL retention: ಚೆನ್ನೈ-ಮುಂಬೈಗೆ ಗುಡ್ ನ್ಯೂಸ್ ನೀಡಿದ ಐಪಿಎಲ್ ಹೊಸ ನಿಯಮ
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.