ಮುರಳಿ ಆರಾಧನೆಗೆ ಜನಮನ ಸಜ್ಜು


Team Udayavani, Aug 14, 2017, 12:04 PM IST

krishna-janmashtami.jpg

ಬೆಂಗಳೂರು: ಶ್ರೀಕೃಷ್ಣನ ಬಾಲ್ಯಲೀಲೆಗಳನ್ನು ಕೊಂಡಾಡುವ ಶ್ರೀಕೃಷ್ಣ ಜನ್ಮಾಷ್ಟಮಿಯು ಇಂದು ಮತ್ತು ನಾಳೆ (ಆ.14 ಮತ್ತು15) ನಗರದಾದ್ಯಂತ ವೈಭವದಿಂದ ನಡೆಯಲಿದೆ. ದೇವಸ್ಥಾನದಲ್ಲಿ ಕೃಷ್ಣಪೂಜೆಯಾದರೇ, ಸಂಘಸಂಸ್ಥೆಗಳಿಂದ ಮುದ್ಧುಕೃಷ್ಣ, ರಾಧಾಕೃಷ್ಣ, ಮೊಸರು ಕುಡಿಕೆ ಒಡೆಯುವುದು ಹೀಗೆ ನಾನಾ ರೀತಿಯ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, ಮೆರವಣಿಗೆ, ಭಜನೆ, ಪ್ರವಚನ ಇತ್ಯಾದಿ ನೆರವೇರಲಿದೆ.

ಬಹುತೇಕ ಮನೆಗಳಲ್ಲಿ ರೂಢಿಸಿಕೊಂಡು ಬಂದಿರುವ ಸಂಪ್ರದಾಯದಂತೆ ಕೃಷ್ಣನ ಮೂರ್ತಿ ಕೂರಿಸಿ, ಆತನಿಗೆ ಪ್ರಿಯವಾದ ಚಕ್ಕುಲಿ, ಕೋಡುಬಳೆ, ನಿಪ್ಪಟ್ಟು, ರವೆ ಉಂಡೆ,  ಕಜ್ಜಾಯ ಹೀಗೆ ಬಗೆ ಬಗೆಯ ತಿನಿಸುಗಳ ನೈವೆದ್ಯ ಮಾಡಲಿದ್ದಾರೆ. ಮನೆ ಮುಂದೆ ರಂಗೋಲಿ ಹಾಕುವುದು, ಮುತ್ತೈದೆಯರಿಗೆ ಅರಸಿನ ಕುಂಕುಮ ನೀಡುವುದು, ಮಕ್ಕಳಿಗೆ ಪ್ರಸಾದ ವಿತರಣೆಯೂ ನಡೆಯಲಿದೆ.

ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಇಸ್ಕಾನ್‌ ಮಂದಿರ, ಇಂದಿರಾನಗರ ಶ್ರೀಕೃಷ್ಣ ದೇವಸ್ಥಾನ, ಶ್ರೀ ಪೂರ್ಣಪ್ರಜ್ಞಾ ವಿದ್ಯಾಪೀಠ, ಪುತ್ತಿಗೆ ಮಠದ ಗೋವರ್ಧನ ಪೀಠ, ಚಿಕ್ಕಲಾಲ್‌ಬಾಗ್‌ನ ತುಳಸಿವನಂ ಸೇರಿದಂತೆ ನಗರದ ಶ್ರೀ ಕೃಷ್ಣ ದೇವಸ್ಥಾನ, ಮಠಗಳಲ್ಲಿ ಧಾರ್ಮಿಕ ವಿಧಿ ವಿಧಾನ ಮತ್ತು ಅದ್ಧೂರಿಯ ಕಾರ್ಯಕ್ರಮದೊಂದಿಗೆ ಎರಡು ದಿನಗಳ ಕೃಷ್ಣಜನ್ಮಾಷ್ಟಮಿ ಸಂಪನ್ನಗೊಳ್ಳಲಿದೆ.

ಇಸ್ಕಾನ್‌ ದೇವಸ್ಥಾನದಲ್ಲಿ ಎರಡು ದಿನಗಳು ನಿರಂತವಾಗಿ ಶ್ರೀ ಕೃಷ್ಣ ದೇವರ ಸಂಕೀರ್ತನೆ, ಹಾಡು, ಭಜನೆಯ ಜತೆ ಜತೆಗೆ ವಿಶೇಷ ಪೂಜೆ, ಪಲ್ಲಕ್ಕಿ ಉತ್ಸವ, ಮೆರವಣಿಗೆ ನಡೆಯಲಿದೆ. ಚಿಕ್ಕಲಾಲ್‌ಬಾಗ್‌ನ ತುಳಸಿವನಂನಲ್ಲಿ ಅಷ್ಟೋತ್ತರ ರಜತ ಕಳಶಾಭಿಷೇಕ, ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠದ  ಶ್ರೀಕೃಷ್ಣ ಗುರುರಾಜ ಸನ್ನಿಧಿಯಲ್ಲಿ 1,500 ವೈದಿಕರಿಂದ ಕೋಟಿ ತುಳಸಿ ನಾಮಾರ್ಚನೆ ನಡೆಯಲಿದೆ.

ಇಸ್ಕಾನ್‌ನಲ್ಲಿ ಕೃಷ್ಣಲೀಲೋತ್ಸವ: ಇಸ್ಕಾನ್‌ನಲ್ಲಿ ಬೆಳಗ್ಗೆ 4.15 ಮಹಾಮಂಗಳಾರತಿ, ನಂತರ 7.15 ದೇವರಿಗೆ ಹೊಸ ಬಟ್ಟೆ, ಚಿನ್ನಾಭರಣ ಅಲಂಕಾರದ ನಂತರ ಸಿಂಗಾರ ಆರತಿ, ಅಷ್ಟೋತ್ತರ ಪೂಜೆ, ಬೆಳಗ್ಗೆಯಿಂದ ರಾತ್ರಿಯವರೆಗೆ ನಾಲ್ಕು ಬಗೆಯ ಅಭಿಷೇಕ, ರಾಜಬೋಗ ಆರತಿ ಮತ್ತು ಸಂಗೀತೋತ್ಸವ ಇರುತ್ತದೆ. ಇದೇ ಮೊದಲ ಬಾರಿಗೆ ಇಸ್ಕಾನ್‌ ವತಿಯಿಂದ ಅರಮನೆ ಮೈದಾನದಲ್ಲಿ ಕೃಷ್ಣಜನ್ಮಾಷ್ಟಮಿ ಹಮ್ಮಿಕೊಳ್ಳಲಾಗಿದೆ.

10 ಸಾವಿರ ಮಕ್ಕಳಿಗೆ ಹ್ಯಾರಿಟೇಜ್‌ ಹಬ್ಬ, ತಾಯಂದಿರಿಗೆ ವಾತ್ಸಲ್ಯ ಸ್ಪರ್ಧೆ, ಹರಿಹರಪುರ ಪ್ರಸಿದ್ಧ ತಂಡದಿಂದ 30 ಅಡಿ ರಂಗೋಲಿ, ಶ್ರೀಕೃಷ್ಣಬಲರಾಮರ ಉತ್ಸವ ಮೂರ್ತಿಗೆ ಅಭಿಷೇಕ, ವಿದ್ಯಾರ್ಥಿಗಳಿಂದ ಬ್ಯಾಂಡ್‌ ವಾದನ, ಮಡಿಕೆ ಒಡೆಯುವ ಸ್ಪರ್ಧೆಯ ಜತೆಗೆ 60 ಅಡಿಯ ವೇಣುಗೋಪಾಲ ಫೋಟೋ ಚಿತ್ರ ಪ್ರದರ್ಶನ ಇರುತ್ತದೆ.

2 ಲಕ್ಷ ಲಾಡು: ಉತ್ಸವದ ಅಂಗವಾಗಿ ಇಸ್ಕಾನ್‌ನಿಂದ 1 ಲಕ್ಷಮಂದಿಗೆ ಪ್ರಸಾದ ವಿತರಣೆಗೆ ಎರಡು ಲಕ್ಷ ಲಾಡು ಹಾಗೂ ಅಂದಾಜು 15 ಟನ್‌ ಸಿಹಿ ಪೊಂಗಲ್‌ ತಯಾರಿಸಿದೆ. ಭಕ್ತರಿಗೆ ಲಾಡು ಹಾಗೂ ಪೊಂಗಲ್‌ ವಿತರಣೆಯಾಗಲಿದ್ದು, ದೇವರ ದರ್ಶನಕ್ಕೆ ಬೇಕಾದ ಎಲ್ಲ ವ್ಯವಸ್ಥೆಯ ಜತೆಗೆ, ಪಾರ್ಕಿಂಗ್‌ಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಲಾಗಿದೆ.

ಇಸ್ಕಾನ್‌ ಸುತ್ತ ಸಂಚಾರ ಮಾರ್ಗ ಬದಲು
ಇಸ್ಕಾನ್‌ ಮಂದಿರದಲ್ಲಿ ಸೋಮವಾರ ಮತ್ತು ಮಂಗಳವಾರ ನಡೆಯುವ ಕೃಷ್ಣಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ವಾಹನ ನಿಲುಗಡೆ ಹಾಗೂ ಸಂಚಾರ ವ್ಯವಸ್ಥೆಯಲ್ಲಿ ಮಾರ್ಪಾಡು ಮಾಡಲಾಗಿದೆ.

ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳ ಹಲವಾರು ಸ್ಥಳಗಳಿಂದ ಗಣ್ಯವ್ಯಕ್ತಿಗಳು, ಸಾರ್ವಜನಿಕರು, ಭಕ್ತಾದಿಗಳು ವಾಹನಗಳ ಮೂಲಕ ಆಗಮಿಸುವುದರಿಂದ ಪಶ್ಚಿಮ ಕಾರ್ಡ್‌ ರಸ್ತೆಯಲ್ಲಿ ಸಂಚರಿಸುವ ನಿತ್ಯದ ವಾಹನಗಳ ಜತೆಗೆ ಇಸ್ಕಾನ್‌ಗೆ ಆಗಮಿಸುವ ವಾಹನಗಳ ಸಂಖ್ಯೆ ಹೆಚ್ಚಾಗಿ ಸಂಚರಿಸುವ ಅನಿವಾರ್ಯತೆ ಇದೆ. ಹೀಗಾಗಿ ಆ.14 ಮತ್ತು 15ರಂದು ಸುಗಮ ಸಂಚಾರಕ್ಕಾಗಿ ಮತ್ತು ಸೂಕ್ತ ರೀತಿಯ ಸಂಚಾರ ಬಂದೋ ಬಸ್ತ್ ಮಾಡಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಿಕೊಂಡು ತಾತ್ಕಾಲಿಕವಾಗಿ ಇಸ್ಕಾನ್‌ ಮಂದಿರಕ್ಕೆ ಆಗಮಿಸುವ ವಾಹನಗಳ ನಿಲುಗಡೆ ವ್ಯವಸ್ಥೆ ಮತ್ತು ವಾಹನಗಳ ಸಂಚಾರದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ.

ತುಮಕೂರು ರಸ್ತೆ ಕಡೆಯಿಂದ-ಪಶ್ಚಿಮ ಕಾರ್ಡ್‌ ರಸ್ತೆ ಕಡೆಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳು ಮಾರಪ್ಪನಪಾಳ್ಯದಲ್ಲಿ ನೇರವಾಗಿ ಸಂಚರಿಸಿ-ಯಶವಂತಪುರ, ಬಿಎಚ್‌ಇಎಲ್, ಮಾರಮ್ಮ ಸರ್ಕಲ್-ಬೆಂಗಳೂರು ನಗರದ ಕಡೆ ಸಂಚರಿಸಬಹುದಾಗಿದೆ. ಇಸ್ಕಾನ್‌ ದೇವಾಲಯಕ್ಕೆ ಆಗಮಿಸುವ ವಾಹನಗಳಿಗೆ-ವಿವಿಐಪಿ ಪಾರ್ಕಿಂಗ್‌ ಇಸ್ಕಾನ್‌ನಲ್ಲಿ ಸ್ಥಳಾವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ಪಶ್ಚಿಮ ಕಾರ್ಡ್‌ ರಸ್ತೆಯಲ್ಲಿ ಸಂಚರಿಸಿ ಮಹಾಲಕ್ಷಿ ಲೇಔಟ್‌, ಜ್ಯೂಸ್‌ ಫ್ಯಾಕ್ಟರಿ ಮೈದಾನದಲ್ಲಿ ನಾಲ್ಕು ಚಕ್ರದ ವಾಹನಗಳಿಗೆ ನಿಲುಗಡೆಗೆ ಸ್ಥಳಾವಕಾಶ ಕಲ್ಪಿಸಲಾಗಿದೆ. ಪೈಪ್‌ಲೈನ್‌ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ, ಮೆಟ್ರೋ ಕೆಳ ಭಾಗದ ರಸ್ತೆಯಲ್ಲಿ ನಾಲ್ಕು, ದ್ವಿಚಕ್ರ ವಾಹನಗ ನಿಲುಗಡೆಗೆ ಕಲ್ಪಿಸಲಾಗಿದೆ. ಎರಡು ದಿನಗಳು ಮಾತ್ರ ಬೆಳಗ್ಗೆ 7ರಿಂದ ರಾತ್ರಿ 8 ಗಂಟೆಗೆ ಎಲ್ಲಾ ಮಾದರಿಯ ವಾಹನ ಚಾಲಕರು ಮತ್ತು ಸವಾರರು ಈ ಮೇಲ್ಕಂಡ ರಸ್ತೆಯಲ್ಲಿ ಸಂಚರಿಸದೆ ತಾತ್ಕಾಲಿಕವಾಗಿ ಪರ್ಯಾಯ ರಸ್ತೆಯಲ್ಲಿ ಸಂಚರಿಸುವಂತೆ ನಗರ ಪೊಲೀಸರು ಮನವಿ ಮಾಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಬ್ಬ
ಬೆಂಗಳೂರು:
ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಸೋಮವಾರ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀಕೃಷ್ಣ ಜಯಂತಿ ಆಚರಣೆ ನಡೆಯಲಿದೆ. ಸಂಜೆ 5 ಗಂಟೆಗೆ  ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ಇದಕ್ಕೂ ಮೊದಲು ಮಧ್ಯಾಹ್ನ 3 ಗಂಟೆಗೆ ಧರ್ಮರಾಯ ದೇವಸ್ಥಾನದಿಂದ ವಿವಿಧ ಜಾನಪದ ಕಲಾತಂಡಗಳ ಕಲೆಗಳ ಪ್ರದರ್ಶನದೊಂದಿಗೆ ಶ್ರೀಕೃಷ್ಣ  ಭಾವಚಿತ್ರ ಮೆರವಣಿಗೆ ರವೀಂದ್ರ ಕಲಾಕ್ಷೇತ್ರ ತಲುಪಲಿದೆ. ಸಂಜೆ ನಾಲ್ಕು ಗಂಟೆಗೆ ಶ್ವೇತಾ ಪ್ರಭು ಮತ್ತು ಕಲಾ ತಂಡದಿಂದ  ಸುಗಮ ಸಂಗೀತ ನಡೆಯಲಿದ್ದು. ಇದಾದ ಬಳಿಕ ಶ್ರೀಕೃಷ್ಣನ ಕುರಿತ ನೃತ್ಯ ರೂಪಕವನ್ನು ರಕ್ಷಾ ಜಯರಾಮ್‌ ತಂಡ ಪ್ರಸ್ತುತ ಪಡಿಸಲಿದೆ.

ಸಂಜೆ 5 ಗಂಟೆಗೆ ಆರಂಭವಾಗಲಿರುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉಧಾ^ಟಿಸಲಿದ್ದು, ಕೇಂದ್ರ ಸಚಿವ ಅನಂತಕುಮಾರ್‌, ಸಚಿವರಾದ ಉಮಾಶ್ರೀ, ಕೆ.ಜೆ ಜಾರ್ಜ್‌, ಮೇಯರ್‌ ಪದ್ಮಾವತಿ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಡಿ.ಎನ್‌ ಮುನಿಕೃಷ್ಣ  “ಶ್ರೀಕೃಷ್ಣನ ಜೀವನ ಹಾಗೂ ಸಂದೇಶ’ಗಳ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.