ಅಶಾಂತಿ ಸೃಷ್ಟಿಸಲು ಬಿಜೆಪಿ ಪಣ


Team Udayavani, Feb 4, 2018, 12:16 PM IST

rajya-aashanti.jpg

ಬೆಂಗಳೂರು: ಬಿಜೆಪಿಯವರು ಕರ್ನಾಟಕದಲ್ಲಿ ಅಶಾಂತಿ ಸೃಷ್ಟಿಸಲು ಪಣ ತೊಟ್ಟಿದ್ದಾರೆ. ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿ, ಜಾತಿ-ಜಾತಿಗಳ ನಡುವೆ ಸಂಘರ್ಷ ಮೂಡಿಸುತ್ತಿರುವ ಬಿಜೆಪಿ ನಾಯಕರೇ ನಿಜವಾದ ತಾಲಿಬಾನಿಗಳು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಕಾಡುಗೊಂಡನಹಳ್ಳಿ ನೂತನ ಪೊಲೀಸ್‌ ಠಾಣೆ ಕಟ್ಟಡ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಲು ಕಂಕಣ ತೊಟ್ಟಿದ್ದಾರೆ. ಸಂಸದ ಪ್ರತಾಪ್‌ ಸಿಂಹ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್‌ ಶಾ ಹೊಸ ಕೆಲಸ ಕೊಟ್ಟಂತಿದೆ.

ಸಂಸದ ಪ್ರತಾಪ್‌ ಸಿಂಹ, ಕರ್ನಾಟಕವನ್ನು ತಾಲಿಬಾನ್‌ಗೆ ಹೊಲಿಸಿದ್ದಾರೆ. ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಅಮಿತ್‌ ಶಾ ಹೇಳಿದ್ದಾರೆಂದು ಸ್ವತಃ ಸಂಸದರೇ ಸಾಮಾಜಿಕ ಜಾಲತಾಲಣಗಳಲ್ಲಿ ಹೇಳಿಕೊಂಡಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಯ ನಾಟಕವಾಡಿ ಶಾಂತಿ ಕದಡುವ ವಿಫ‌ಲ ಯತ್ನ ನಡೆಸಿದ್ದ ಪ್ರತಾಪ್‌ ಸಿಂಹ, ಪ್ರಮಾಣಿಕ ಮತ್ತು ದಕ್ಷ ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದ್ದರು. ಇದು ಅವರ ತಾಲಿಬಾನ್‌ ಸಂಸ್ಕೃತಿಗೆ ಹಿಡಿದ ಕನ್ನಡಿ ಎಂದರು.

ಕಾಡೇ ಪ್ರಶಸ್ತ ತಾಣ: “ಮಂಗಳೂರು ಚಲೋ, ಬೈಕ್‌ ರ್ಯಾಲಿ ನಡೆಸಿ ಬೆಂಗಳೂರು ಮತ್ತು ಮಂಗಳೂರಿನಲ್ಲಿ ಗಲಭೆ ನಡೆಸುವ ಬಿಜೆಪಿ ಹುನ್ನಾರವನ್ನು ಸರ್ಕಾರ ವಿಫ‌ಲಗೊಳಿಸಿದೆ. ಈ ಎಲ್ಲ ವಿಫ‌ಲ ಯತ್ನಗಳಿಂದ ಪ್ರತಾಪ್‌ ಸಿಂಹ ಹತಾಶರಾಗಿದ್ದಾರೆ.

“ಐ ಸಪೋರ್ಟ್‌ ಪ್ರತಾಪ್‌ ಸಿಂಹ’ ಯುವ ಮೋರ್ಚಾ ಫೇಸ್‌ಬುಕ್‌ ಪೇಜ್‌ನಲ್ಲಿ ಪ್ರತಾಪ್‌ ಸಿಂಹ ಬೆಂಬಲಿಗರು ರಾಜ್ಯದ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ಬೆಳವಡಿ ಮಲ್ಲಮ್ಮ, ಒನಕೆ ಓಬ್ಬವ್ವ ಅವರ ಕುರಿತು ಅವಾಚ್ಯ ಶಬ್ಧಗಳಿಂದ ನಿಂದಿಸಿ ಇವರ ಸಂಸ್ಕೃತಿಯನ್ನು ಪ್ರದರ್ಶಿಸಿದ್ದಾರೆ,’ ಎಂದು ದೂರಿದ ಸಚಿವರು, “ಬೆಂಕಿ ಹಚ್ಚುವುದು, ದಂಗೆ ಎಬ್ಬಿಸುವುದು ನಿಮ್ಮ ಉದ್ಯೋಗ. ಸದಾ ಬೆಂಕಿ ಉಗುಳುವ “ಸಿಂಹ’ಗೆ ಕಾಡೇ ಪ್ರಶಸ್ತವಾದ ತಾಣ’ ಎಂದು ಲೇವಡಿ ಮಾಡಿದರು.

ಮರಣೋತ್ತರ ಸದಸ್ಯತ್ವ: “ಬಿಜೆಪಿ ನಾಯಕರು ಸಂತೋಷ್‌ ಕೊಲೆಯಲ್ಲಿ ರಾಜಕೀಯ ಮಾಡುತ್ತಾರೆ. ಅಸಲಿಗೆ ಸಂತೋಷ್‌ ಯಾವುದೇ ಪಕ್ಷದ ಕಾರ್ಯಕರ್ತನಲ್ಲ. ಪರೇಶ್‌ ಮೆಸ್ತಾ ಸಾವಲ್ಲೂ ಬಿಜೆಪಿಯವರು ಇದೇ ರೀತಿ ರಾಜಕೀಯ ಮಾಡಿದ್ದರು. “ಆತ ನಮ್ಮ ಪಕ್ಷದ ಕಾರ್ಯಕರ್ತ’ ಎನ್ನುವ ಮೂಲಕ ಶೋಭಾ ಕರಂದ್ಲಾಜೆ, ಕೊಲೆಯಾದವರಿಗೆಲ್ಲ ಮರಣೋತ್ತರ ಸದಸ್ಯತ್ವ ಕೊಡುತ್ತಿದ್ದಾರೆ,’ ಎಂದು ಸಚಿವ ರಾಮಲಿಂಗಾ ರೆಡ್ಡಿ ಟೀಕಿಸಿದರು.

ದಾನಮ್ಮ ಸಾವು ಸಾವಲ್ಲವೇ?: ಚಿಕ್ಕಬಳ್ಳಾಪುರದ ಪರಿವರ್ತನಾ ರ್ಯಾಲಿಯಲ್ಲಿ ಬೆಲ್ಲಿ ಡ್ಯಾನ್ಸ್‌ ಮಾಡುತ್ತಾರೆ. ಇಂತಹ ನಾಯಕರು ವಿರೋಧ ಪಕ್ಷದಲ್ಲಿ ಕೂರಲೂ ನಾಲಾಯಕ್‌. ಗೌರಿ ಲಂಕೇಶ್‌ ಮೃತಪಟ್ಟಾಗ ಯಡಿಯೂರಪ್ಪ ಸಮೇತ ಯಾರೂ ಹೋಗಲಿಲ್ಲ. ದಾನಮ್ಮ ಮತ್ತು ಧನ್ಯಶ್ರೀ ಸಾವಿಗೆ ಬೆಲೆ ಇಲ್ವಾ? ಅವರ ಸಾವಿನ ಕುರಿತು ಯಾಕೆ ಪ್ರತಿಭಟನೆ ಮಾಡಲಿಲ್ಲ. ಹರೀಶ್‌ ಪೂಜಾರಿ, ವಿನಾಯಕ್‌ ಬಾಳಿಗ ಕೊಲೆಗೆಲ್ಲ ಪ್ರತಿಭಟನೆ ಮಾಡಲ್ಲ. ಅವರನ್ನು ಕೊಲೆಗೈದವರು ಬಿಜೆಪಿ ಬೆಂಬಲಿಗರೇ. ಅದಕ್ಕೆ ಅವರ ಹತ್ಯೆ ಬಗ್ಗೆ ಮಾತನಾಡುವುದಿಲ್ಲ,’ ಎಂದು ಆರೋಪಿಸಿದರು.

ಅಪರಾಧ ಸಂಖ್ಯೆ ಕಡಿಮೆಯಾಗಿದೆ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ಪೊಲೀಸ್‌ ಇಲಾಖೆಯಲ್ಲಿ 20ಸಾವಿರಕ್ಕೂ ಅಧಿಕ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದೇವೆ. ಅಲ್ಲದೇ 11 ಸಾವಿರ ಪೊಲೀಸ್‌ ಕುಟುಂಬಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಿದ್ದೇವೆ. ಪೊಲೀಸ್‌ ಕಲ್ಯಾಣಕ್ಕಾಗಿ ಸರ್ಕಾರ 2 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇವೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಠಾಣೆಯಲ್ಲಿ ಹೋಮ: ನೂತನವಾಗಿ ಉದ್ಘಾಟನೆಗೊಂಡ ಕಾಡುಗೊಂಡನಹಳ್ಳಿ ಠಾಣೆಯಲ್ಲಿ ಉದ್ಘಾಟನೆಗೂ ಮೊದಲು ಹೋಮ ನಡೆಸಲಾಯಿತು.  ಸಚಿವ ಕೆ.ಜೆ.ಜಾರ್ಜ್‌, ಶಾಸಕ ಅಖಂಡ ಶ್ರೀನಿವಾಸ ಮೂರ್ತಿ,  ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌, ಹೆಚ್ಚುವರಿ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌, ಐಜಿಪಿ ಎಂ.ನಂಜುಂಡಸ್ವಾಮಿ ಸೇರಿ ಹಿರಿಯ ಅಧಿಕಾರಿಗಳು  ಉಪಸ್ಥಿತರಿದ್ದರು.

ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್‌ರಾವ್‌ ಯಾರು? ರಾಜ್ಯದ ಬಗ್ಗೆ ಅವರಿಗೇನು ಗೊತ್ತು. ಕಾಂಗ್ರೆಸ್‌ ಪಿಎಫ್ಐ, ಎಸ್‌ಡಿಪಿಐ ಸಂಘಟನೆ ಜತೆ ಒಳಒಪ್ಪಂದ ಮಾಡಿಕೊಂಡಿರುವ ಬಗ್ಗೆ ಬೆಜೆಪಿ ಸ್ಪಷ್ಟನೆ ನೀಡಲಿ. ಕಾಂಗ್ರೆಸ್‌ ಯಾವ ಪಕ್ಷದೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ. ಬಿಜೆಪಿ ಪರೋಕ್ಷವಾಗಿ ಒವೈಸಿ ಜತೆ ನಿರಂತರ ಸಂಪರ್ಕದಲ್ಲಿದೆ.
-ರಾಮಲಿಂಗಾರೆಡ್ಡಿ, ಗೃಹ ಸಚಿವ

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-ksrtc-dasara

Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್‌ ಸಂಚಾರ

19-bbmp

Bengaluru: ಆನ್‌ಲೈನ್‌ನಲ್ಲೇ ಆಸ್ತಿ ಇ-ಖಾತಾ ಪಡೆಯಿರಿ

18-wonderla

Bengaluru: ವಂಡರ್‌ಲಾದಲ್ಲಿ 2 ಟಿಕೆಟ್‌ ಖರೀದಿಸಿದರೆ 1 ಟಿಕೆಟ್‌ ಫ್ರೀ

16-bng

Bengaluru: ದಸರಾ ಬೊಂಬೆಗಳ ಹಬ್ಬದಲ್ಲೂ ಅಯೋಧ್ಯಾ ಶ್ರೀ ರಾಮಮಂದಿರ

14-bng

Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.