ಪರಿವರ್ತನಾ ಯಾತ್ರೆಗೆ ಬಿಜೆಪಿ ಸಜ್ಜು


Team Udayavani, Oct 29, 2017, 7:15 AM IST

171028kpn97.jpg

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ನಿಟ್ಟಿನಲ್ಲಿ ನವೆಂಬರ್‌ 2 ರಿಂದ ಹಮ್ಮಿಕೊಂಡಿರುವ “ಪರಿವರ್ತನಾ ಯಾತ್ರೆ’ಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ ಸಾಧನೆಗಳು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳು ಹಾಗೂ ರಾಜ್ಯ ಕಾಂಗ್ರೆಸ್‌ ಸರ್ಕಾರದ ವೈಫ‌ಲ್ಯ-ಭ್ರಷ್ಟಾಚಾರ ಆರೋಪಗಳ ಪಟ್ಟಿ ಸಿದಟಛಿಪಡಿಸಲಾಗಿದೆ.

ಜತೆಗೆ “ಕಮಲವು ಅರಳಲಿ, ಕೇಸರಿ ಮರಳಲಿ, ಕರ್ನಾಟಕದಲ್ಲಿ ಕಮಲ ರಂಗೇರಲಿ, ಒಂದೇ ಮಾತರಂ, ಜೈ ಬಿಜೆಪಿ’ ಥೀಮ್‌ಸಾಂಗ್‌ ಸೀಡಿ ಸಹ ಸಿದ್ಧಗೊಳಿಸಲಾಗಿದ್ದು, ಬಿಜೆಪಿ ಸಾಧನೆ, ಕಾಂಗ್ರೆಸ್‌ನ ವೈಫ‌ಲ್ಯಗಳ ಕರಪತ್ರಗಳನ್ನು ರಾಜ್ಯದ ಎಲ್ಲ ವಿಧಾನಸಭೆ
ಕ್ಷೇತ್ರದ ಬೂತ್‌ ಮಟ್ಟಕ್ಕೆ ರವಾನಿಸುವ ಕಾರ್ಯ ಭರದಿಂದ ಸಾಗಿದೆ.

ಶನಿವಾರ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪರಿವರ್ತನಾ ಯಾತ್ರೆಯ ಕರಪತ್ರ, ಥೀಮ್‌ಸಾಂಗ್‌ ಸೀಡಿ ಬಿಡುಗಡೆಗೊಳಿಸಿ ಮಾತನಾಡಿದ ಸಂಸದೆ ಹಾಗೂ ಯಾತ್ರೆಯ ಉಸ್ತುವಾರಿ ಶೋಭಾ ಕರಂದ್ಲಾಜೆ, ಯಡಿಯೂರಪ್ಪ ನೇತೃತ್ವದಲ್ಲಿ 75 ದಿನಗಳ ಕಾಲ ನಡೆಯುವ ಯಾತ್ರೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು.

ನವೆಂಬರ್‌ 2 ರಂದು ಬೆಂಗಳೂರಿನ ತುಮಕೂರು ರಸ್ತೆಯ ವಸ್ತು ಪ್ರದರ್ಶನ ಕೇಂದ್ರ ಆವರಣದಲ್ಲಿ ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಪಾಲ್ಗೊಳ್ಳಲಿದ್ದು, ಸಮಾರೋಪದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಗವಹಿಸಲಿದ್ದಾರೆ.

ಉದ್ಘಾಟನಾ ದಿನ ರಾಜ್ಯದ ವಿವಿಧೆಡೆಯಿಂದ ಒಂದು ಲಕ್ಷ ಬೈಕ್‌ಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು ಈಗಾಗಲೇ 55 ಸಾವಿರ ಬೈಕ್‌ ಗಳು ನೋಂದಣಿಯಾಗಿವೆ. 3 ಲಕ್ಷ ಜನ ಸೇರುವ ಅಂದಾಜು ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದ 224 ಕ್ಷೇತ್ರಗಳಲ್ಲೂ ಸಂಚರಿಸುವ ಯಾತ್ರೆ ಯಶಸ್ವಿಗಾಗಿ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಹಲವಾರು ಸಮಿತಿ ರಚಿಸಲಾಗಿದೆ. ರಥ ನಿರ್ವಹಣೆ, ಯಾತ್ರಾ ಪ್ರಮುಖ್‌, ಬೈಕ್‌ ರ್ಯಾಲಿ ಪ್ರಮುಖ್‌, ಆರ್ಥಿಕ ಸಮಿತಿ, ಊಟ ಮತ್ತು ವಸತಿ ಸಮಿತಿ, ಸ್ವತ್ಛತಾ ಸಮಿತಿ, ಮಾಧ್ಯಮ ಸಮಿತಿ, ಸಾಮಾಜಿಕ ಜಾಲತಾಣ ನಿರ್ವಹಣೆ ಸಮಿತಿ ರಚಿಸಲಾಗಿದೆ.

ಪರಿವರ್ತನಾ ಯಾತ್ರೆಗೆ ರಾಜ್ಯಮಟ್ಟದಲ್ಲಿ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಿಂದ ಅನುಮತಿ ಪಡೆಯಲಾಗಿದೆಯಾದರೂ ಜಿಲ್ಲಾಮಟ್ಟದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೂ ಮನವಿಕೊಟ್ಟು ಅನುಮತಿ ಪಡೆಯಲಾಗುವುದು . ಯಾತ್ರೆ ಕೊಡಗು ಜಿಲ್ಲೆಗೆ ಪ್ರವೇಶ ಮಾಡುವುದಕ್ಕೆ ಅಲ್ಲಿನ ಜಿಲ್ಲಾಡಳಿತ ಅನುಮತಿ ಕೊಟ್ಟಿಲ್ಲ. ಹೀಗಾಗಿ, ಅರಕಲಗೂಡಿನಿಂದ ನೇರವಾಗಿ ಪುತ್ತೂರಿಗೆ ತೆರಳಿ
ಸುಳ್ಯದಲ್ಲಿ ಮರುದಿನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು.

ಉದ್ಘಾಟನೆಯಿಂದ ಸಮಾರೋಪದವರೆಗೆ 224 ಕ್ಷೇತ್ರಗಳಲ್ಲಿ ಸಂಚಾರ ಮತ್ತು ಭಾಷಣ ಎಲ್ಲವೂ ವಿಡಿಯೋ, ಫೋಟೋ ಸಹಿತ ದಾಖಲೀಕರಣ ಮಾಡಲಾಗುವುದು. 

ಪರಿವರ್ತನಾಯಾತ್ರೆ ಸಲುವಾಗಿಯೇ ಬಿಜೆಪಿ ಕಾರ್ಯಾಲಯ ಹೊರತುಪಡಿಸಿ ಮತ್ತೂಂದು ಕಾರ್ಯಾಲಯ ಸ್ಥಾಪಿಸಲಾಗಿದ್ದು, ಇದೇ ಕಚೇರಿಯ 3ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.

75 ದಿನಗಳ ಪರಿವರ್ತನಾ ಯಾತ್ರೆಯಲ್ಲಿ ರಾಜ್ಯ ನಾಯಕರು ಹಾಗೂ ಕೇಂದ್ರ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಸಂಸತ್‌ ಅಧಿವೇಶನವೂ ಅದೇ ಸಂದರ್ಭದಲ್ಲಿ ನಡೆಯುವುದರಿಂದ ಅಲ್ಲೂ ನಮ್ಮ ಹಾಜರಿ ಇರುವಂತೆ ನೋಡಿಕೊಂಡು ಯಾತ್ರೆಯಲ್ಲಿ ಭಾಗವಹಿಸಬೇಕಾದ ನಾಯಕರ ತಂಡ ರಚಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ವಕ್ತಾರರಾದ ವಾಮನಾಚಾರ್ಯ, ಸಹ ವಕ್ತಾರರಾದ ಎ.ಎಚ್‌.ಆನಂದ್‌, ಮಾಳವಿಕಾ ಅವಿನಾಶ್‌, ಮಧುಶ್ರೀ, ಲಹರಿ ವೇಲು ಉಪಸ್ಥಿತರಿದ್ದರು.

ಶೋಭಾ ಪರಿಕಲ್ಪನೆ 
ಪರಿವರ್ತನಾ ಯಾತ್ರೆಗೆ ರಚಿಸಲಾಗಿರುವ “ಕಮಲವು ಅರಳಲಿ, ಕೇಸರಿ ಮರಳಲಿ, ಕರ್ನಾಟಕದಲ್ಲಿ ಕಮಲ ರಂಗೇರಲಿ, ಒಂದೇ ಮಾತರಂ, ಜೈ ಬಿಜೆಪಿ’ ಥೀಮ್‌ಸಾಂಗ್‌ ಶೋಭಾ ಕರಂದ್ಲಾಜೆ ಅವರ ಪರಿಕಲ್ಪನೆಯಡಿ ಹರ್ಷಭಟ್‌ ಎಂಬುವರು ರಚನೆ ಮಾಡಿ ಪುತ್ತೂರಿನ ಜಗದೀಶ್‌ ಎಂಬುವರು ಹಾಡಿದ್ದಾರೆ.

ಕರಪತ್ರದಲ್ಲೇನಿದೆ?
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಯಡಿಯೂರಪ್ಪ, ಸದಾನಂದಗೌಡ, ಜಗದೀಶ ಶೆಟ್ಟರ್‌ ಅವಧಿಯಲ್ಲಿ ಮಾಡಲಾದ ಸಾಧನೆಗಳು. ಪ್ರತ್ಯೇಕ ಕೃಷಿ ಬಜೆಟ್‌ ಮಂಡನೆ, ಸಾವಯವ ಕೃಷಿ ಮಿಷನ್‌ಗೆ 200 ಕೋಟಿ ರೂ. ಅನುದಾನ, 10 ಎಚ್‌ಪಿವರೆಗಿನ ಕೃಷಿ ಪಂಪ್‌ಸೆಟ್‌ಗೆ ಉಚಿತ ವಿದ್ಯುತ್‌, 20 ಲಕ್ಷ ರೈತರಿಗೆ ಕಿಸಾನ್‌ಕಾರ್ಡ್‌, ವಿದ್ಯಾರ್ಥಿನಿಯರಿಗೆ ಬೈಸಿಕಲ್‌ ವಿತರಣೆ, ಭಾಗ್ಯಲಕ್ಷ್ಮಿ, ಮಡಿಲು ಯೋಜನೆ, ಹಿಂದುಳಿದ ಸಮುದಾಯದ ಅಭಿವೃದ್ಧಿಗೆ ಆರ್ಥಿಕ ನೆರವು. ಸಕಾಲ ಯೋಜನೆ ಜಾರಿ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಉಜ್ವಲ ಯೋಜನೆ, ಜನ್‌ಧನ್‌, ಮುದ್ರಾ ಯೋಜನೆ, ಆದರ್ಶ ಗ್ರಾಮ, ಸ್ಮಾರ್ಟ್‌ ಸಿಟಿ, ಡಿಜಿಟಲ್‌ ಭಾರತ್‌, ಜಿಎಸ್‌ಟಿ ಜಾರಿ, ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯಾ ಸಮೃದಿಟಛಿ ಯೋಜನೆ ಜಾರಿ ಪ್ರಸ್ತಾಪಿಸಲಾಗಿದೆ. ರಾಜ್ಯ ಸರ್ಕಾರ ದ ವೈಫ‌ಲ್ಯಗಳಲ್ಲಿ 2000 ರೈತರ ಆತ್ಮಹತ್ಯೆ, ಎಸಿಬಿ ದುರುಪಯೋಗ, ಡಿವೈಎಸ್‌ಪಿ ಗಣಪತಿ , ಡಿ.ಕೆ.ರವಿ, ಕಲ್ಲಪ್ಪ ಹಂಡಿಬಾಗ್‌, ಅನುರಾಗ್‌ ತಿವಾರಿ ಸಾವು ಪ್ರಕರಣ, ಸ್ಟೀಲ್‌ ಬ್ರಿಡ್ಜ್, ದುಬಾರಿ ವಾಚ್‌ ಪ್ರಕರಣ ಪ್ರಸ್ತಾಪಿಸಲಾಗಿದೆ.

ಮೂವರು ಮಾತ್ರ
ಪರಿವರ್ತನಾ ಯಾತ್ರೆಗೆ ಬಿಜೆಪಿ ಕರ್ನಾಟಕ ಘಟಕ ವತಿಯಿಂದ ಮುದ್ರಿಸಿರುವ ಕರಪತ್ರ ಹಾಗೂ ಪೋಸ್ಟರ್‌ನಲ್ಲಿ ಪ್ರಧಾನಿ
ನರೇಂದ್ರಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ಶಾ ಹಾಗೂ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಅವರ ಭಾವಚಿತ್ರಗಳು ಮಾತ್ರ ಇವೆ. ಉಳಿದಂತೆ ಯಾವ ನಾಯಕರ ಚಿತ್ರಗಳೂ ಇಲ್ಲ. 

ನ. 10ರಂದು ರಾಜ್ಯ ಸರ್ಕಾರ ಟಿಪ್ಪು ಜಯಂತಿ ಮಾಡುತ್ತಿದೆ. ಆದರೆ, ನಾವು ನವೆಂಬರ್‌ 8ರಂದು ಕೊಡಗು ಜಿಲ್ಲೆಯ ಎರಡು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ನವೆಂಬರ್‌ 9 ಕ್ಕೆ ನಿರ್ಗಮಿಸುತ್ತೇವೆ, ಪುತ್ತೂರಿನಲ್ಲಿ ವಾಸ್ತವ್ಯ ಮಾಡಿಕೊಳ್ಳುತ್ತೇವೆ ಎಂದರೂ ಜಿಲ್ಲಾಡಳಿತ ಒಪ್ಪುತ್ತಿಲ್ಲ. ನಮ್ಮ ಯಾತ್ರೆ ಹತ್ತಿಕ್ಕುವ ಕೆಲಸವೂ ನಡೆಯುತ್ತಿದೆ. ಆದರೆ, ನಾವು ಗಲಾಟೆ ಮಾಡಲು ಹೋಗುತ್ತಿಲ್ಲ. ಸರ್ಕಾರ ಈ ಬಗ್ಗೆ ವಿನಾಕಾರಣ ಗೊಂದಲಕ್ಕೆ ಅವಕಾಶ ಮಾಡಿಕೊಡಬಾರದು. ಯಾತ್ರೆಗೆ ಅನುಮತಿ ಕೊಡಬೇಕು .
–  ಶೋಭಾ ಕರಂದ್ಲಾಜೆ, ಸಂಸದೆ

ಟಾಪ್ ನ್ಯೂಸ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು

Shobha Gasti: ಬೆಂಕಿಯಲ್ಲಿ ಅರಳಿದ ಹೂವು; ದೇವದಾಸಿಯರ ಹಾಡು ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Belthangady: ತೋಡಿಗೆ ಅಡಿಕೆ ಮರವೇ ಸಂಕ!

Belthangady: ತೋಡಿಗೆ ಅಡಿಕೆ ಮರವೇ ಸಂಕ!

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.