ಆಡಿಯೋ ಸಿಎಂ ಕಟ್ಟುಕಥೆ: ಬಿಎಸ್ವೈ
Team Udayavani, Feb 9, 2019, 12:30 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನಕಲಿ ಧ್ವನಿಸುರುಳಿ ಬಿಡುಗಡೆಗೊಳಿಸಿದ್ದು, ಅವರ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಸಿನೆಮಾ ವ್ಯಕ್ತಿಯಾದ ಕುಮಾರಸ್ವಾಮಿ ಚೆನ್ನಾಗಿ ಕಥೆ ಕಟ್ಟಬಲ್ಲರಾಗಿದ್ದು, ಅದರಂತೆ ದೊಡ್ಡ ಕಥೆ ಕಟ್ಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿರುಗೇಟು ನೀಡಿದರು.
ಸಿಎಂ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮುಖ್ಯಮಂತ್ರಿಗಳು ನಕಲಿ ಧ್ವನಿಸುರುಳಿ ಬಿಡುಗಡೆ ಮಾಡುವ ಮೂಲಕ ತಮ್ಮ ಸರಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ದೊಂಬರಾಟ ನಡೆಸಿದ್ದಾರೆ. ಇದು ಶೇ. 101ರಷ್ಟು ಧ್ವನಿ ಅನುಕರಣೆ ಮಾಡಿರುವ ಧ್ವನಿಸುರುಳಿ ಎಂದು ಹೇಳಿದರು.
ಮುಖ್ಯಮಂತ್ರಿಗಳು ಆರೋಪ ಮಾಡುವಾಗ ಸಭಾಧ್ಯಕ್ಷರ ಹೆಸರು ಪ್ರಸ್ತಾವಿಸಿದ್ದು, ಒಂದೊಮ್ಮೆ ಕುಮಾರಸ್ವಾಮಿ ಆರೋಪ ಸಾಬೀತುಪಡಿಸಿದರೆ ವಿಪಕ್ಷ ನಾಯಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಷ್ಟೇ ಅಲ್ಲ, ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದರು.
ಸಿಎಂ ಅವರೇ ಬಿಜೆಪಿಯ ಸುಭಾಷ್ ಗುತ್ತೇದಾರ್ರನ್ನು ಸೆಳೆಯಲು ಯತ್ನಿಸಿದ್ದು, ಇದಕ್ಕೆದಾಖಲೆ ಬೇಕೇ? ಬಿಜೆಪಿಯ ನಾಲ್ವರು ಶಾಸಕರುನಮ್ಮೊಂದಿಗಿದ್ದಾರೆ ಎಂದು ಸಚಿವರಾದ ಸಾ.ರಾ.ಮಹೇಶ್, ಸಿ.ಎಸ್. ಪುಟ್ಟರಾಜು ಬಹಿರಂಗವಾ ಗಿಯೇ ಹೇಳಿದ್ದರು ಎಂದು ಸ್ಮರಿಸಿದರು.
ಕಾಂಗ್ರೆಸ್-ಜೆಡಿಎಸ್ ಶಾಸಕರು ಮುಂಬಯಿಯಲ್ಲಿ ಇದ್ದರೆ ಅದಕ್ಕೂ ನಮಗೂ ಸಂಬಂಧವಿಲ್ಲ. ಸಿಎಂಗೆ ಪ್ರಾಮಾಣಿಕತೆಯಿದ್ದರೆ ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಒಟ್ಟಿಗೆ ಇಟ್ಟುಕೊಳ್ಳಲಿ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ
MUDA Case: ಕೈ ಕಾಲು ಸುಟ್ಟುಕೊಂಡಿದ್ದು ಸಾಕು, ಇನ್ನಾದರು ರಾಜೀನಾಮೆ ನೀಡಿ… ವಿ.ಸೋಮಣ್ಣ
Vijayapura: ಗಣೇಶ ಮೂರ್ತಿಯ ಮಂಟಪದ ಗಾಜಿಗೆ ಕಿಡಿಗೇಡಿಗಳಿಂದ ಕಲ್ಲು ತೂರಿ ಹಾನಿ
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಒಪ್ಪಿಗೆ: ಜನ್ಮ ಇರುವವರೆಗೂ ಗಂಗಾವತಿ ಮರೆಯಲ್ಲ: ಶಾಸಕ ರೆಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss Kannada 11: ಚೈತ್ರಾ ಕುಂದಾಪುರರನ್ನು ಹೊರಗಿಡಿ; ಭೋಜರಾಜ್ ಆಗ್ರಹ
Davanagere: ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಮೃತ್ಯು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Ullal: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಸಹಾಯಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.