ಕಾಂಗ್ರೆಸ್‌ ಟ್ವೀಟ್‌ ಸಮರಕ್ಕೆ ಬಿಜೆಪಿ ಪ್ರತಿಸಮರ


Team Udayavani, Mar 13, 2018, 12:00 PM IST

cong-tweet.jpg

ಬೆಂಗಳೂರು: ರಾಜ್ಯಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಮುಂದಿಟ್ಟುಕೊಂಡು “ಕನ್ನಡ ವಿರೋಧಿ ಬಿಜೆಪಿ’ ಎಂಬ 10 ಅಂಶಗಳ ಪಟ್ಟಿ ಮಾಡಿರುವ ಕಾಂಗ್ರೆಸ್‌ಗೆ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ಬಿಜೆಪಿ, ಟ್ವಿಟರ್‌ನಲ್ಲಿ ಸಮರವನ್ನೇ ಸಾರಿದೆ.

ರಾಜ್ಯಸಭೆ ಚುನಾವಣೆಗೆ ರಾಜೀವ್‌ ಚಂದ್ರಶೇಖರ್‌ ಅವರನ್ನು ಆಯ್ಕೆ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಬಿಜೆಪಿ, ಬೆಂಗಳೂರು ಮತ್ತು ಕರ್ನಾಟಕದ ಬಗ್ಗೆ ರಾಜೀವ್‌ ಚಂದ್ರಶೇಖರ್‌ ದನಿ ಎತ್ತಿರುವುದು ಜನರಿಗೆ ಗೊತ್ತಿದೆ. ಕಾಂಗ್ರೆಸ್‌ನ ಸ್ಟೀಲ್‌ಬಿಡ್ಜ್ ವಿರುದ್ಧ ರಾಜೀವ್‌ ದನಿ ಎತ್ತಿದ್ದರು. ಕಾಂಗ್ರೆಸ್‌ನ ಜೈರಾಮ್‌ ರಮೇಶ್‌, ಬಿ.ಕೆ ಹರಿಪ್ರಸಾದ್‌ ಏನು ಮಾಡಿದ್ದರೆಂದು ಪ್ರಶ್ನಿಸಿದೆ.

ಕೊಡುಗೆಯೇ ಸಿಕ್ಕಿಲ್ಲ: ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಜೈರಾಮ್‌ ರಮೇಶ್‌, ಆಸ್ಕರ್‌ ಪರ್ನಾಂಡೀಸ್‌ ಅವರು ರಾಜ್ಯದ ಗೌರವಯುತ ರಾಜ್ಯಸಭೆ ಸದಸ್ಯರಾಗಿ ಕೆಲಸ ಮಾಡಿದ್ದಕ್ಕಿಂತ ಹೆಚ್ಚು ದೆಹಲಿಯ “10 ಜನಪಥ್‌’ನ ಸಿಬ್ಬಂದಿಯಂತೆ ಕೆಲಸ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದೆ.

ರಾಜೀವ್‌ ಚಂದ್ರಶೇಖರ್‌ ಕೇರಳದವರು ಎಂಬ ಕಾರಣಕ್ಕೆ ಕಾಂಗ್ರೆಸ್‌ ಅವರ ಬಗ್ಗೆ ವಿರೋಧ ವ್ಯಕ್ತಪಡಿಸಿದೆ. ಆದರೆ, ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ಕೆ.ಜೆ.ಜಾರ್ಜ್‌ ಮತ್ತು ಶಾಸಕ ಎನ್‌.ಎ.ಹ್ಯಾರಿಸ್‌ ಕೂಡ ಕೇರಳದವರು ಎಂಬುದನ್ನು ಕಾಂಗ್ರೆಸ್‌ ನೆನಪಿಸಿಕೊಳ್ಳಬೇಕು ಎಂದು ಹೇಳಿದೆ.

ನಾಡಹಬ್ಬ ದಸರೆಗೆ ಬಜೆಟ್‌ನಲ್ಲಿ ಅನುದಾನ ಕೊಡಲಿಲ್ಲ. ಸಮಯ ಮತ್ತು ಹಣ ಇಲ್ಲ ಎಂಬ ಕಾರಣ ಒಡ್ಡಿ ವಿಶ್ವ ಕನ್ನಡ ಸಮ್ಮೇಳನ ಆಚರಣೆ ಕೈಬಿಟ್ಟಿದ್ದೀರಿ. ಆದರೆ, ಕನ್ನಡ ವಿರೋಧಿ ಟಿಪ್ಪು ಜಯಂತಿ ಆಚರಿಸಲು ನಿಮಗೆ ಹಣವೂ ಇದೆ, ಸಮಯವೂ ಇದೆ ಎಂದು ಕಿಡಿಕಾರಿದೆ.

ಮಹದಾಯಿ ವಿಚಾರ ಎತ್ತಿದ ಬಿಜೆಪಿ, ಸೋನಿಯಾ ಗಾಂಧಿ ಗೋವಾ ನೆಲದಲ್ಲಿ ನಿಂತು ಮಹದಾಯಿಯಿಂದ ಕರ್ನಾಟಕಕ್ಕೆ ಒಂದು ಹನಿ ನೀರು ನೀಡುವುದಿಲ್ಲ ಎಂದು ಹೇಳಿದ್ದು ಕಾಂಗ್ರೆಸ್‌ ನಾಚಿಕೆ ಪಟ್ಟುಕೊಳ್ಳುವ ಸಂಗತಿಯಲ್ಲವೇ ಎಂದಿದೆ.

ಬ್ಯಾಂಕಿಂಗ್‌ ಪರೀಕ್ಷೆಯಲ್ಲಿ ಕನ್ನಡ ವಿಚಾರ ಪ್ರಸ್ತಾಪಿಸಿದ್ದು, ಮೋದಿ ಸರ್ಕಾರ ಬಂದ ಮೇಲೆ ಎಐಐಎಂಎಸ್‌, ಐಐಟಿ, ಐಐಐಟಿ, ಕೌಶಲ್ಯಾಭಿವೃದ್ಧಿ ವಿವಿ, ಫ‌ುಡ್‌ಪಾರ್ಕ್‌ಗಳನ್ನು ರಾಜ್ಯಕ್ಕೆ ಮಂಜೂರು ಮಾಡಿರುವುದು, ರಾಜ್ಯಕ್ಕೆ ಅನುದಾನ ಹೆಚ್ಚಿಸಿರುವುದನ್ನು ಕೂಡ ಬಿಜೆಪಿ ಟ್ವಿಟರ್‌ನಲ್ಲಿ ಪ್ರಸ್ತಾಪಿಸಿದೆ. ಅಲ್ಲದೆ, ನಿಮ್ಮ ಢೋಂಗಿ ಕನ್ನಡ ಪ್ರೇಮ ನಮ್ಮ ಹಿಂದಿನ ಟ್ವೀಟ್‌ಗಳಲ್ಲಿ ಬಯಲುಮಾಡಿದ್ದೇವೆ. ಬಿಜೆಪಿ ಪ್ರಾದೇಶಿಕ ಭಾಷೆಗಳಿಗೆ ಎಂದಿನಿಂದಲೂ ಪ್ರಾಶಸ್ತ್ಯ ನೀಡುತ್ತಲೇ ಬಂದಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

Hubli: ಕ್ಷುಲ್ಲಕ ವಿಚಾರಕ್ಕೆ ಚೂರಿ ಇರಿತ; ಓರ್ವನ ಬಂಧನ, ಉಳಿದವರಿಗೆ ಶೋಧ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

ನನ್ನ ದೇಹದಲ್ಲಿ ಸಿಂಹದ ರಕ್ತ ಹರಿಯುತ್ತಿದೆ… ಬೆದರಿಕೆಗೆ ಹೆದರಲ್ಲ: ಬಾಬಾ ಸಿದ್ದಿಕಿ ಪುತ್ರ

‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

SC: ‘ಭಾರತ ಜಾತ್ಯತೀತವಾಗಿರುವುದು ನಿಮಗೆ ಇಷ್ಟವಿಲ್ಲವೇ?”: ಸಂವಿಧಾನ ಪೀಠಿಕೆ ಕುರಿತು ಸುಪ್ರೀಂ

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

By Election; ಮೂರು ಕ್ಷೇತ್ರಕ್ಕೆ ಶೀಘ್ರ ಅಭ್ಯರ್ಥಿಗಳು ಅಂತಿಮ: ಸಚಿವ ಲಾಡ್

Sirsi: ಮೂಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ

Sirsi: ಮುಡಾ ಹಗರಣದ ಮೂಲಕ ಸಿದ್ರಾಮಣ್ಣ ಹೊಸ ದಾಖಲೆಯನ್ನೇ ನಿರ್ಮಿಸಿದ್ದಾರೆ: ಕಾಗೇರಿ ಲೇವಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Consumer Court: ದೋಷಪೂರಿತ ಇವಿ ದ್ವಿಚಕ್ರ ವಾಹನ ಕೊಟ್ಟ ಕಂಪನಿಗೆ ಕೋರ್ಟ್‌ನಿಂದ 2ಲಕ್ಷ ದಂಡ

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

Fraud: ವಿದೇಶದಲ್ಲಿ ಉದ್ಯೋಗ‌ ಕೊಡಿಸುವುದಾಗಿ 9 ಲಕ್ಷ ವಂಚನೆ: ಮೂವರ ವಿರುದ್ಧ ಕೇಸ್‌ 

0527

Bengaluru: ತಂದೆ ಸಾಲದ ಹಣ ವಾಪಸ್‌ ಕೊಡದಕ್ಕೆ ಬಾಲಕಿ ಮೇಲೆ ರೇಪ್‌

031

Bengaluru: ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಪೊಲೀಸ್‌

5

Bengaluru: ಕುಡಿದು ಗಲಾಟೆ ಮಾಡುತ್ತಿದ್ದ ಮಗನ ಕೊಂದ ಅಪ್ಪ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7

Thekkatte: ಭತ್ತದ ಕಟಾವು ಆರಂಭ; ಎಲ್ಲೆಡೆ ಯಂತ್ರಗಳದೇ ಸದ್ದು!

6

Karkala: ಬಂಡಿಮಠ ಜಂಕ್ಷನ್‌ನಲ್ಲಿ ಅಪಘಾತಗಳ ಕಾಟ

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

Vettaiyan: ಈ ದಿನ ಓಟಿಟಿಗೆ ಬರಲಿದೆ ರಜಿನಿ ʼವೆಟ್ಟೈಯನ್‌ʼ?; ಇದುವರೆಗಿನ ಗಳಿಕೆ ಎಷ್ಟು?

5

Kinnigoli: ಪಕ್ಷಿಕೆರೆ-ಕೊಯಿಕುಡೆ ರಸ್ತೆಯುದ್ದಕ್ಕೂ ಹೊಂಡ ಗುಂಡಿ

ಸಿದ್ದರಾಮಯ್ಯ

ByPolls; ಕಾಂಗ್ರೆಸ್‌ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.