Blackmail: ಲೋಕಾ ಹೆಸರಿನಲ್ಲಿ ಎಂಜಿನಿಯರ್‌ಗಳಿಗೆ ಬ್ಲ್ಯಾಕ್‌ಮೇಲ್


Team Udayavani, Sep 2, 2023, 3:11 PM IST

TDY-9

ಬೆಂಗಳೂರು: ಸರ್ಕಾರಿ ಎಂಜಿನಿಯರ್‌ಗಳನ್ನೇ ಟಾರ್ಗೆಟ್‌ ಮಾಡಿ ದುಡ್ಡು ವಸೂಲಿಗಿಳಿದಿದ್ದ ನಕಲಿ ಲೋಕಾಯುಕ್ತ ಡಿವೈಎಸ್‌ಪಿಯ ಸಹಚರ ವಿಧಾನಸೌಧ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಬೆಳಗಾವಿ ಮೂಲದ ಸಂತೋಷ್‌ ಕೊಪ್ಪದ್‌ (25) ಬಂಧಿತ. ಪ್ರಮುಖ ಆರೋಪಿ ವಿಶಾಲ್‌ ಪಾಟೀಲ್‌ಗಾಗಿ ಶೋಧ ನಡೆಯುತ್ತಿದೆ.

ನಾಪತ್ತೆಯಾಗಿರುವ ಆರೋಪಿ ವಿಶಾಲ್‌ 2020ರಿಂದಲೂ ಇದೇ ದಂಧೆ ನಡೆಸುತ್ತಿರುವ ಸಂಗತಿ ಗೊತ್ತಾಗಿದೆ. ಸದ್ಯ ರದ್ದಾಗಿರುವ ಎಸಿಬಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಎಸಿಬಿ ಡಿವೈಎಸ್‌ಪಿಯಂತೆ ಬಿಂಬಿಸಿಕೊಂಡು ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಎಂಜಿನಿಯರ್‌ಗಳ ನಂಬರ್‌ ಕಲೆ ಹಾಕುತ್ತಿದ್ದ. ಬಳಿಕ ಎಂಜಿನಿಯರ್‌ ಗಳಿಗೆ ಕರೆ ಮಾಡಿ ತನ್ನನ್ನು ಎಸಿಬಿ ಡಿವೈಎಸ್‌ಪಿ ಎಂದು ಪರಿಚಯಿಸಿಕೊಂಡು ನಿಮ್ಮ ವಿರುದ್ಧ ಎಸಿಬಿ ದಾಳಿ ನಡೆಯಲಿದೆ ಎಂದು ಹೆದರಿಸುತ್ತಿದ್ದ. ಇದನ್ನು ತಪ್ಪಿಸಬೇಕಾದರೆ ತನಗೆ 1 ಲಕ್ಷ ರೂ. ದುಡ್ಡು ಕೊಡುವಂತೆ ಸೂಚಿಸುತ್ತಿದ್ದ. ಡೀಲ್‌ ಕುದುರಿಸಿದ ಬಳಿಕ ತನ್ನ ಸಹಚರ ಸಂತೋಷ್‌ ಕೊಪ್ಪದನನ್ನು ಬೆಂಗಳೂರಿಗೆ ಕಳುಹಿಸಿ ದುಡ್ಡು ವಸೂಲಿ ಮಾಡಿಸುತ್ತಿದ್ದ. ಎಸಿಬಿ ರದ್ದಾಗಿ ಲೋಕಾಯುಕ್ತ ಪೊಲೀಸರಿಗೆ ಮತ್ತೆ ಅಧಿಕಾರ ಸಿಕ್ಕಿದ ಬಳಿಕ ಲೋಕಾಯುಕ್ತ ಡಿವೈಎಸ್‌ಪಿ ಎಂದು ಬಿಂಬಿಸಿಕೊಂಡು ಮತ್ತೆ ವಸೂಲಿಗೆ ಇಳಿದಿದ್ದ. ಸರ್ಕಾರಿ ಅಭಿಯಂತರಿಗೆ ಕರೆ ಮಾಡಿ ಭ್ರಷ್ಟಾಚಾರ ಎಸಗಿ ಅಕ್ರಮ ಆಸ್ತಿ ಗಳಿಸಿರುವುದಕ್ಕೆ ಸಾಕ್ಷ್ಯ ಸಿಕ್ಕಿದ್ದು, ಲೋಕಾಯುಕ್ತ ಪೊಲೀಸರು ಸದ್ಯದಲ್ಲೇ ನಿಮ್ಮ ಆಸ್ತಿ ಮೇಲೆ ದಾಳಿ ಮಾಡಲಿದ್ದಾರೆ ಎಂದು ಬೆದರಿಕೆ ಹಾಕುತ್ತಿದ್ದ.

ಆತಂಕಗೊಳ್ಳುತ್ತಿದ್ದ ಕೆಲ ಎಂಜಿನಿಯರ್‌ಗಳು ಆರೋಪಿಗೆ ದುಡ್ಡು ಕೊಡುತ್ತಿದ್ದರು. ಇತ್ತೀಚೆಗೆ ಲಿಂಗಸುಗೂರು, ಕುಷ್ಠಗಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಎಂಜಿನಿಯರ್‌ಗಳಿಗೆ ಹೆದರಿಸಿ ತನ್ನ ಮೇಲೆ ಅನುಮಾನ ಬಾರದಂತೆ ಬೆಂಗಳೂರಿನ ವಿಧಾನಸೌಧದ ಬಳಿ ಅವರನ್ನು ಕರೆಸಿಕೊಂಡು ಸಹಚರ ಸಂತೋಷ್‌ಗೆ ಹಣ ಕೊಡುವಂತೆ ಸೂಚಿಸುತ್ತಿದ್ದ. ಪ್ರಮುಖ ಆರೋಪಿ ವಿಶಾಲ್‌ ವಿರುದ್ಧ 2020ರಲ್ಲಿ ಇದೇ ಮಾದರಿಯ ವಂಚನೆ ಪ್ರಕರಣದಡಿ ಬೆಳಗಾವಿಯ ಬೈಲಹೊಂಗಲ ಪೊಲೀಸರು ಬಂಧಿಸಿದ್ದರು. ಜಾಮೀನು ಪಡೆದು ಹೊರಬಂದು ಮತ್ತೆ ಹಳೆ ಚಾಳಿ ಮುಂದುವ ರೆಸುತ್ತಿದ್ದ. ಹಣ ಸಂಗ್ರಹಿಸುವುದಾಕ್ಕಾಗಿಯೇ ತನ್ನನ್ನು ನೇಮಿಸಿಕೊಂಡಿರುವುದಾಗಿ ಸಂತೋಷ್‌ ಕೊಪ್ಪದ್‌ ವಿಚಾರಣೆ ವೇಳೆ ತಿಳಿಸಿದ್ದಾನೆ.

ಪ್ರಮುಖ ಆರೋಪಿ ಜಸ್ಟ್‌ಮಿಸ್‌: ಎಂಜಿನಿಯರ್‌ಗಳು ವಿಶಾಲ್‌ ಪಾಟೀಲ್‌ ಮೇಲೆ ಅನುಮಾನಗೊಂಡು ಲೋಕಾಯುಕ್ತ ಪೊಲೀಸರ ಬಳಿ ವಿಚಾರಿಸಿದ್ದರು. ಲೋಕಾಯುಕ್ತ ಪೊಲೀಸರು ತಮಗೆ ಈ ವಿಚಾರ ತಿಳಿದೇ ಇಲ್ಲ. ನಾವು ಕಾನೂನು ಪ್ರಕಾರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದಾಗ ವಿಶಾಲ್‌ ಪಾಟೀಲ್‌ನ ಅಸಲಿ ಬಣ್ಣ ಎಂಜಿನಿಯರ್‌ಗಳಿಗೆ ಗೊತ್ತಾಗಿದೆ. ಈ ಸಂಗತಿ ಅರಿತ ಲೋಕಾಯುಕ್ತ ಪೊಲೀಸರು 2022ರಲ್ಲಿ ಆರೋಪಿ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ವಿಧಾನ ಸೌಧ ಪೊಲೀಸರು ಆರೋಪಿಗೆ ಹುಡುಕಾಟ ನಡೆಸುತ್ತಿದ್ದರು. ವಿಶಾಲ್‌ ಎಂಜಿನಿಯರ್‌ವೊಬ್ಬನಿಂದ ದುಡ್ಡು ವಸೂಲಿ ಮಾಡುವ ವೇಳೆ ಬೆಳಗಾವಿಗೆ ತೆರಳಿ ಆತನ ಬಂಧನಕ್ಕೆ ವಿಫ‌ಲ ಪ್ರಯತ್ನ ಮಾಡಲಾಗಿತ್ತು. ಬಳಿಕ ತಾಂತ್ರಿಕ ಕಾರ್ಯಾಚರಣೆ ನಡೆಸಿ ಆ.29ರಂದು ಬೆಳಗಾವಿಯಲ್ಲಿ ಆತನನ್ನು ಪತ್ತೆ ಹಚ್ಚಲಾಗಿತ್ತು. ಆದರೆ, ವಿಶಾಲ್‌ ಪೊಲೀಸರು ಬರುತ್ತಿರುವುದನ್ನು ಅರಿತು ಪರಾರಿಯಾಗಿದ್ದ. ಇತ್ತ ಆತನ ಸಹಚರ ಸಂತೋಷ್‌ನನ್ನು ಬೆಳಗಾವಿಯಲ್ಲಿ ವಶಕ್ಕೆ ಪಡೆದು ನಗರಕ್ಕೆ ಕರೆ ತಂದು ವಿಚಾರಣೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.