ಬ್ಲಾಕ್ಚೈನ್ ತಂತ್ರಜ್ಞಾನ ಬಳಕೆಗೆ ನೀಲನಕ್ಷೆ
Team Udayavani, Feb 16, 2018, 12:51 PM IST
ಬೆಂಗಳೂರು: ಕ್ರಾಂತಿಕಾರಿ “ಬ್ಲಾಕ್ ಚೈನ್’ ತಂತ್ರಜ್ಞಾನವನ್ನು ಆಡಳಿತದಲ್ಲಿ ಬಳಸಲು ನೀಲನಕ್ಷೆ ಸಿದ್ಧಪಡಿಸುತ್ತಿದ್ದು, ಪಾರದರ್ಶಕ ಹಾಗೂ ಪರಿಣಾಮಕಾರಿ ಕಾರ್ಯ ನಿರ್ವಹಣೆಗೆ ಈ ತಂತ್ರಜ್ಞಾನ ಬಳಕೆ ಸಾಧ್ಯತೆ ಅರಿತು ಮುಂದುವರಿಯುವುದಾಗಿ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ರಾಜ್ಯ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ “ಬ್ಲಾಕ್ ಚೈನ್’ ತಂತ್ರಜ್ಞಾನ ಕುರಿತ ಪ್ರಥಮ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಜನ ಕೇಂದ್ರಿತ ಬ್ಲಾಕ್ ಚೈನ್ ತಂತ್ರಜ್ಞಾನವು ಉಪಯುಕ್ತವೆನಿಸಿದ್ದು, ಆಡಳಿತದಲ್ಲಿ ಅಳವಡಿಕೆಗೆ ಪ್ರಯತ್ನ ನಡೆದಿದೆ ಎಂದು ಹೇಳಿದರು.
ಈ ಹೊಸ ತಂತ್ರಜ್ಞಾನವನ್ನು ತಕ್ಷಣ ಅಳವಡಿಸಲು ಸಾಧ್ಯವಾಗದಿದ್ದರೂ ಅದನ್ನು ಅರ್ಥ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಲಾಗಿದೆ. ಕಳೆದ ಜನವರಿಯಲ್ಲಿ ಐದು ಕ್ಷೇತ್ರಗಳಲ್ಲಿ ಈ ತಂತ್ರಜ್ಞಾನ ಅಳವಡಿಕೆ ಸಾಧ್ಯತೆ ತಿಳಿಯುವ ಪ್ರಯತ್ನಕ್ಕೆ ಉತ್ತಮ ಸ್ಪಂದನೆ ದೊರಕಿತ್ತು ಎಂದು ತಿಳಿಸಿದರು.
ಬೆಂಗಳೂರು ನಾಯಕತ್ವ: ಜಾಗತಿಕ ಮಟ್ಟದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಬೆಂಗಳೂರು ನಾಲ್ಕನೇ ಸ್ಥಾನದಲ್ಲಿದೆ. ಸ್ಟಾರ್ಟ್ಅಪ್ಗ್ಳಿಗೆ ಪೂರಕ ವಾತಾವರಣವಿರುವ ನಗರಗಳ ಪೈಕಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಈ ಎರಡೂ ಕ್ಷೇತ್ರ ಸೇರಿದಂತೆ ಜಾಗತಿಕ ಮಟ್ಟದಲ್ಲಿ ಅನ್ವೇಷಣೆ ಕ್ಷೇತ್ರದ ನಾಯಕತ್ವ ಬೆಂಗಳೂರು ವಹಿಸಬೇಕು ಎಂಬ ಗುರಿಯಿದ್ದು, ಆ ನಿಟ್ಟಿನಲ್ಲಿ ನಿರಂತರ ಪ್ರಯತ್ನ ನಡೆದಿದೆ. ಹೊಸ ತಂತ್ರಜ್ಞಾನಗಳ ಬಳಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ತಿಳಿಸಿದರು.
ಎಸ್ಎಪಿ ಲ್ಯಾಬ್ಸ್ನ ವ್ಯವಸ್ಥಾಪಕ ನಿರ್ದೇಶಕ ದಿಲೀಪ್ಕುಮಾರ್ ಖಂಡೇಲ್ವಾಲ್ ಮಾತನಾಡಿ, ಇತ್ತೀಚೆಗಷ್ಟೇ ಪ್ರಚಲಿತಕ್ಕೆ ಬರುತ್ತಿರುವ ಬ್ಲಾಕ್ ಚೈನ್ ತಂತ್ರಜ್ಞಾನವನ್ನು ಆಡಳಿತದಲ್ಲಿ ಬಳಸುವ ರಾಜ್ಯ ಸರ್ಕಾರದ ಪ್ರಯತ್ನ, ಸರ್ಕಾರದ ದೂರದೃಷ್ಟಿ ಹಾಗೂ ಸರಿಯಾದ ದಿಕ್ಕಿನತ್ತ ಸಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಐಟಿಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಐಟಿಬಿಟಿ ಇಲಾಖೆ ನಿರ್ದೇಶಕಿ ಸಲ್ಮಾ ಕೆ. ಫಾಹಿಂ, ಅರ್ನ್ಸ್ಟ್ ಆ್ಯಂಡ್ ಯಂಗ್ ಪಾಲುದಾರ ಪ್ರಕಾಶ್ ಜಯರಾಂ ಇತರರು ಉಪಸ್ಥಿತರಿದ್ದರು.
ಕೆಲ ರಾಜ್ಯಗಳು ಹೂಡಿಕೆದಾರರಿಗೆ ಭೂಮಿ, ನೀರು ಇತರೆ ಸೌಲಭ್ಯವನ್ನು ಉಚಿತವಾಗಿ ನೀಡಬಹುದು. ಆದರೆ ರಾಜ್ಯ ಅನ್ವೇಷಣೆ ಕ್ಷೇತ್ರದಲ್ಲಿ ಸಾಧಿಸಿರುವ ಪ್ರಗತಿ, ನುರಿತ ಮಾನವ ಸಂಪನ್ಮೂಲ, ವೃತ್ತಿಪರರ ಲಭ್ಯತೆ ಬೇರೆಲ್ಲೂ ಸಿಗದು. ಇದು ರಾತ್ರೋರಾತ್ರಿ ಸೃಷ್ಟಿಯಾದುದಲ್ಲ. ಹಲವು ದಶಕಗಳ ಪ್ರಯತ್ನ, ದೂರದೃಷ್ಟಿ, ಬದ್ಧತೆಯ ಕಾರ್ಯ ನಿರ್ವಹಣೆ ಫಲ.
-ಪ್ರಿಯಾಂಕ್ ಖರ್ಗೆ, ಐಟಿಬಿಟಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್
Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
Bengaluru: ಹಳೇ ದ್ವೇಷಕ್ಕೆ ವ್ಯಕ್ತಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್
MUST WATCH
ಹೊಸ ಸೇರ್ಪಡೆ
Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್
Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು
BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ
RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್
ಕರ್ಮಫಲ ಶಿಕಣದಿಂದ ಆತ್ಮೋನ್ನತಿ; ಬ್ರಹ್ಮಕುಮಾರೀಸ್ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ಕರುಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.