![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 1, 2024, 12:52 PM IST
ಬೆಂಗಳೂರು: ರಜತ ಮಹೋತ್ಸವದ ಸಂಭ್ರಮದಲ್ಲಿರುವ ಬಿಎಂಟಿಸಿ ಇದೀಗ ನೌಕರರ ವಿರುದ್ಧದ ಪ್ರಕರಣಗಳನ್ನು ವಿಲೇವಾರಿ ಮಾಡಿ ಅವರಿಗೆ ಹೊಸ ವರ್ಷದಲ್ಲಿ “ರಿಲೀಫ್’ ಕೊಟ್ಟಿದೆ. ರಜತ ಮಹೋತ್ಸವದ ಅಂಗವಾಗಿ ಒಂದು ಬಾರಿ ಅನ್ವಯ ಆಗುವಂತೆ ನೌಕರರ ವಿರುದ್ಧದ ಶಿಸ್ತುಕ್ರಮವನ್ನು ಬಿಎಂಟಿಸಿ ಇತ್ಯರ್ಥಪಡಿಸಿದೆ.
ಗೈರು ಹಾಜರಿ ಮತ್ತು ಶಿಸ್ತು ಪ್ರಕರಣಗಳು ಸೇರಿ ಇದೀಗ ಒಟ್ಟು 6960 ಪ್ರಕರಣಗಳನ್ನು ವಿಲೇವಾರಿ ಮಾಡಿ ಹೊಸ ಯಶೋಗಾಥೆ ಬರೆದಿದೆ.
ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ/ ತಾಂತ್ರಿಕ ಸಿಬ್ಬಂದಿಗಳು ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾಗಿರುವ, ಶಿಸ್ತು ಪ್ರಕರಣಗಳಲ್ಲಿ ಭಾಗಿಯಾಗಿರುವ ನೌಕರರಿಗೆ ಅವರ ಪ್ರವೃತ್ತಿಯಲ್ಲಿ ಬದಲಾವಣೆ/ಸುಧಾರಣೆ ತಂದುಕೊಳ್ಳಲು ಒಂದು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಒಂದು ಬಾರಿಗೆ ಅನ್ವಯವಾಗುವಂತೆ ಬಾಕಿ ಇರುವ ಎಲ್ಲ ಶಿಸ್ತುಕ್ರಮ ಕೇಸುಗಳನ್ನು ವಿಲೇವಾರಿ ಮಾಡಿದೆ.
ಮಾರ್ಗಸೂಚಿಯಂತೆ 2023ರ ನ.30ರ ಅಂತ್ಯಕ್ಕೆ ವಿವಿಧ ಹಂತದಲ್ಲಿ ಚಾಲನಾ/ತಾಂತ್ರಿಕ ಸಿಬ್ಬಂದಿಗಳ ವಿರುದ್ಧ ಘಟಕ ಹಾಗೂ ಕೇಂದ್ರ ಕಚೇರಿ ಮಟ್ಟದಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇದ್ದ 2536 ಗೈರು ಹಾಜರಿ, 4424 ಶಿಸ್ತು ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಬಿಬಿಎಂಟಿಸಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರ್ಣಗಳಿಸಿರುವ ಹಿನ್ನೆಲೆಯಲ್ಲಿ ರಜತ ಮಹೋತ್ಸವವನ್ನು ಆಚರಿಸುತ್ತಿದೆ. ಸಂಸ್ಥೆ ಏಳಿಗೆಗಾಗಿ ಹಲವು ನೌಕರರ ಪರಿಶ್ರಮವಿದೆ. ಸಂಸ್ಥೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ/ತಾಂತ್ರಿಕ ಸಿಬ್ಬಂದಿಗಳ ಪರಿಶ್ರಮವನ್ನು ಗುರುತಿಸಿ ಅವರಲ್ಲಿ ಸಂಸ್ಥೆ ಬಗ್ಗೆ ಇನ್ನೂ ಹೆಚ್ಚಿನ ಮಾನಸಿಕ ಸ್ಥೈರ್ಯ ಹೆಚ್ಚಿಸುವ, ನೌಕರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ, ನೌಕರರಲ್ಲಿ ಸಂಸ್ಥೆ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಲು ಬಿಎಂಟಿಸಿ ಮುಂದಾಗಿದೆ ಎಂದು ತಿಳಿಸಿದ್ದಾರೆ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.