![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 31, 2021, 11:05 PM IST
ಬೆಂಗಳೂರು: ಬಿಎಂಟಿಸಿ ಪುನರುಜ್ಜೀವಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ ಆನ್ಲೈನ್ ಮೂಲಕ ನಡೆಸಿದ ಅಭಿಯಾನಕ್ಕೆ 600ಕ್ಕೂ ಹೆಚ್ಚು ಜನ ಸಹಿ ಹಾಕುವ ಮೂಲಕ ಬೆಂಬಲ ಸೂಚಿಸಿದ್ದಾರೆ.
ಬಿಎಂಟಿಸಿ ಪುನರುಜ್ಜೀವಗೊಳಿಸುವ ದೂರದೃಷ್ಟಿಯಿಂದ ಯೋಜನೆಯೊಂದನ್ನು ರೂಪಿಸಲಾಗಿದ್ದು, ಇದಕ್ಕಾಗಿ 700 ಕೋಟಿ ರೂ.ಗಳ ಅವಶ್ಯಕತೆ ಇದೆ. ಆದರೆ, ಈ ಹಣಕ್ಕಾಗಿ ಸರ್ಕಾರ ವಿದೇಶಿ ಬ್ಯಾಂಕ್ಗಳ ಮೊರೆಹೋಗಲು ಸೂಚಿಸಿದೆ. ಆದರೆ, ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಯೋಜನೆಗಳಿಗೆ ಸಾವಿರಾರು ಕೋಟಿ ರೂ. ಸುರಿಯುತ್ತಿದೆ. ಈ ತಾರತಮ್ಯ ಯಾಕೆ? ತಕ್ಷಣ ಸಾರಿಗೆ ಸಂಸ್ಥೆಯ ಪುನರುಜ್ಜೀವಗೊಳಿಸಲು ಸಂಪೂರ್ಣ ಬೆಂಬಲ ನೀಡಬೇಕು ಎಂದು ಆಗ್ರಹಿಸಿ ವೇದಿಕೆಯು ಆನ್ಲೈನ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಮನವಿ ಮಾಡಿತ್ತು. ಇದನ್ನು ಬೆಂಬಲಿಸಿ 600ಕ್ಕೂ ಅಧಿಕ ಜನ ಸಹಿ ಹಾಕಿದ್ದಾರೆ.
ಮೆಟ್ರೋ ರೈಲಿನಲ್ಲಿ ಲಕ್ಷ ಜನ ಓಡಾಡಿದರೆ, ಬಸ್ನಲ್ಲಿ 20 ಲಕ್ಷಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದಾರೆ. ಬಸ್ ವ್ಯವಸ್ಥೆಗೆ ಆರ್ಥಿಕ ನೆರವು ನೀಡುವುದರ ಮೂಲಕ ಈ ನಗರದ ಸಂಚಾರ ಸಮಸ್ಯೆ ಕಡಿಮೆ ಆಗುತ್ತದೆ. ಮೆಟ್ರೋ ರೈಲಿನ ಯೋಜನೆ, ಸ್ಮಾರ್ಟ್ ಸಿಟಿ, ವರ್ತುಲ ರಸ್ತೆಗಳು, ಫ್ಲೈಓವರ್ಗಳಿಗೆ ಸಾವಿರಾರು ಕೋಟಿ ನೀಡುವ ಸರ್ಕಾರ, ನಗರದ ಬಡವರು, ಮಾಧ್ಯಮ ವರ್ಗದವರು ಉಪಯೋಗಿಸುವ ಬಸ್ಗೆ ಏಕೆ 700 ಕೋಟಿ ನೀಡಲು ಆಗುತ್ತಿಲ್ಲ. ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಬಿಎಂಟಿಸಿಗೆ ಯಾವುದೇ ಆರ್ಥಿಕ ನೆರವು ನೀಡದಿರುವುದು ಕೂಡ ಬೇಸರದ ಸಂಗತಿ ಎಂದು ವೇದಿಕೆಯ ಸದಸ್ಯರಾದ ರಾಮದಾಸ್ ರಾವ್, ಉದಿತ್ ಖಂಡೇಲ್ವಾಲ್, ಆರ್. ಜೆನಿಸಿಯಾ, ಲೇಖಾ ಅಡವಿ, ಶಹೀನ್ ಶಾಸ, ವಿನಯ್ ಶ್ರೀನಿವಾಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೋವಿಡ್ ಹಾವಳಿಯಿಂದ ಇಂದು ಬಿಎಂಟಿಸಿ ಸಂಕಷ್ಟದಲ್ಲಿದೆ. ಸಿಬ್ಬಂದಿ ವೇತನಕ್ಕೂ ಕಷ್ಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ಸಂಸ್ಥೆಯ ನೆರವಿಗೆ ಬಂದು ವೇತನ ಪಾವತಿಗೆ ಆರ್ಥಿಕ ನೆವರು ನೀಡಿದ್ದು ಸ್ವಾಗತಾರ್ಹ. ಆದರೆ, ಅದರ ಜತೆಗೆ ಸಂಸ್ಥೆಯ ಪುನರುಜ್ಜೀವ ಕೂಡ ಸರ್ಕಾರದ ಕರ್ತವ್ಯ ಎಂದು ವೇದಿಕೆಯು ಪ್ರಕಟಣೆಯಲ್ಲಿ ತಿಳಿಸಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.