ಬಿಎಂಟಿಸಿ ಹಗರಣಗಳು: ಸಿಐಡಿ ತನಿಖೆಗೆ ಒತ್ತಡ


Team Udayavani, Aug 6, 2023, 12:19 PM IST

ಬಿಎಂಟಿಸಿ ಹಗರಣಗಳು: ಸಿಐಡಿ ತನಿಖೆಗೆ ಒತ್ತಡ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿನ ಹಗರಣಗಳು ಈಗ ನೀರಿನ ಒರತೆಯಂತೆ ಬಗೆದಷ್ಟೂ ಬಯಲಿಗೆ ಬರುತ್ತಲೇ ಇವೆ. ಕಳೆದ ಸುಮಾರು ಒಂದು ವರ್ಷದ ಅಂತರದಲ್ಲಿ 20ಕ್ಕೂ ಹೆಚ್ಚು ಫೋರ್ಜರಿ ಕಡತಗಳು ಬಯಲಿಗೆ ಬಂದಿದ್ದು, ಪ್ರಭಾವಿಗಳೂ ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಇದರೊಂದಿಗೆ ಹಗರಣ ತೀವ್ರತೆ ಪಡೆದುಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಐಡಿ ಅಥವಾ ಲೋಕಾಯುಕ್ತದಂತಹ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂಬ ಕೂಗು ಬಿಎಂಟಿಸಿ ವಲಯದಲ್ಲೇ ಕೇಳಿಬರುತ್ತಿದೆ.

ಬಿಎಂಟಿಸಿ ವ್ಯಾಪ್ತಿಯಲ್ಲಿನ ವಾಣಿಜ್ಯ ಮಳಿಗೆ ಗಳು, ಪಾರ್ಕಿಂಗ್‌ ಜಾಗಗಳು, ಶೌಚಾಲಯಗಳು, ಅಪಾರ್ಟ್‌ಮೆಂಟ್‌ ಫ್ಲ್ಯಾಟ್‌ಗಳು ಸೇರಿದಂತೆ ವಿವಿಧ ಪ್ರಕಾರದ ಟೆಂಡರ್‌ ಮತ್ತು ಪರವಾನಗಿ ನವೀಕರಣ ಹಾಗೂ ಮರುಟೆಂಡರ್‌ನಲ್ಲಿ ಹತ್ತಾರು ಕೋಟಿ ರೂ. ಗುಳುಂ ಮಾಡಿರುವುದು ಕಂಡುಬಂದಿದೆ. ಒಂದಲ್ಲ ಎರಡಲ್ಲ ಇಂತಹ 20ಕ್ಕೂ ಹೆಚ್ಚು ಕಡತಗಳಿಗೆ ಹಿಂದಿದ್ದ (ಈಗಿನವರದ್ದು ಸೇರಿ) ಮೂರರಿಂದ ನಾಲ್ವರು ವ್ಯವಸ್ಥಾಪಕ ನಿರ್ದೇಶಕರ ಸಹಿ ನಕಲು ಮಾಡಿರುವುದು ಇಲಾಖಾ ತನಿಖೆಯಿಂದ ಬೆಳಕಿಗೆ ಬಂದಿದೆ ಹಾಗೂ ಇನ್ನೂ ಬರುತ್ತಲೇ ಇದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಕೆಲ ಪ್ರಭಾವಿಗಳೂ ಈ ಹಗರಣದಲ್ಲಿ ಶಾಮೀಲಾಗಿರುವುದು ತನಿಖೆಯಿಂದ ಕಂಡು ಬರುತ್ತಿದೆ. ಈ ಮಧ್ಯೆ ಆರೋಪಿಗಳ ವಿರುದ್ಧ ಮೂರು ಎಫ್ಐಆರ್‌ ಅಂತೂ ದಾಖಲಾಗಿದ್ದು, ಇದುವರೆಗೆ ಎಂಟು ಜನರನ್ನು ಅಮಾನತು ಮಾಡಲಾಗಿದೆ. ಇದರಾಚೆಗೆ ಪ್ರಕರಣದ ತನಿಖೆಯಲ್ಲಿ ನಿರೀಕ್ಷಿತ ಮಟ್ಟದ ಪ್ರಗತಿ ಕಂಡುಬರುತ್ತಿಲ್ಲ. ಎಂದಿನಂತೆ ಆರೋಪಿಗಳಿಗೆ ಅರ್ಧದಷ್ಟು ವೇತನ ಪ್ರತಿ ತಿಂಗಳು ಅನಾಯಾಸವಾಗಿ ಖಾತೆಗೆ ಜಮೆ ಆಗುತ್ತಿದೆ. ಪ್ರಕರಣವು ಹತ್ತರೊಂದಿಗೆ ಹನ್ನೊಂದು ಆಗುವ ಎಲ್ಲ ಲಕ್ಷಣಗಳೂ ಕಂಡುಬರುತ್ತಿವೆ.

ನಿರಂತರವಾಗಿ ಮೂರು ವರ್ಷಗಳ ಕಾಲ ಹಲವು ವಿಭಾಗಗಳಲ್ಲಿ ಎಂಡಿಗಳ ಸಹಿಗಳು ಫೋರ್ಜರಿ ಆಗಿವೆ. ಇದರಲ್ಲಿ ಮುಖ್ಯ ಸಂಚಾರ ವ್ಯವಸ್ಥಾಪಕ (ವಾಣಿಜ್ಯ)ರಿಂದ ಹಿಡಿದು ವಿವಿಧ ಹಂತಗಳಲ್ಲಿನ ಅಧಿಕಾರಿಗಳ ತಂಡ ಇದರಲ್ಲಿ ಶಾಮೀಲಾಗಿದೆ. ಹೀಗಿರುವಾಗ, ಇಲಾಖೆ ಹಂತದಲ್ಲಿ ಪಾರದರ್ಶಕ ತನಿಖೆ ಅನುಮಾನ. ಆದ್ದರಿಂದ ಸಂಸ್ಥೆಯಿಂದ ಹೊರತಾದ ಯಾವುದಾದರೂ ತನಿಖಾ ಸಂಸ್ಥೆಯಿಂದ ಹಗರಣದ ತನಿಖೆಯ ಅವಶ್ಯಕತೆ ಇದೆ ಎಂದು ಬಿಎಂಟಿಸಿಯ ಹೆಸರು ಹೇಳಲಿಚ್ಛಿಸದ ಕೆಲ ಅಧಿಕಾರಿಗಳು ಹಾಗೂ ಸಾರಿಗೆ ನೌಕರರ ಸಂಘಟನೆಗಳಿಂದ ಒತ್ತಾಯ ಕೇಳಿಬರುತ್ತಿದೆ.

ಒಂದು ಕಣ್ಣಿಗೆ ಸುಣ್ಣ; ಒಂದು ಕಣ್ಣಿಗೆ ಬೆಣ್ಣೆ!: ಫೋರ್ಜರಿ ಪ್ರಕರಣವು ಕೆಎಸ್‌ಆರ್‌ಟಿಸಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘ (ಕೆಎಸ್‌ಆರ್‌ಟಿಸಿ ಎಂಪ್ಲಾಯೀಸ್‌ ಹೌಸಿಂಗ್‌ ಕೋ-ಆಪರೇಟಿವ್‌ ಸೊಸೈಟಿ) ಹಗರಣದ ಮುಂದುವರಿದ ಭಾಗವಾ ಗಿದೆ. ಇಲ್ಲಿಯೂ ಅಧಿಕಾರಿಗಳೇ ಶಾಮೀಲಾಗಿ ಎಂಡಿಗಳ ಸಹಿ ಫೋರ್ಜರಿ ಮಾಡಿದ್ದಾರೆ. ಆದ್ದರಿಂದ ಸಿಐಡಿ ಅಥವಾ ಲೋಕಾಯುಕ್ತರಿಂದ ಈ ಸಂಬಂಧದ ತನಿಖೆ ನಡೆಸುವ ಅವಶ್ಯಕತೆ ಇದೆ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್‌ ಆಗ್ರಹಿಸಿದ್ದಾರೆ.

“ಸಾರಿಗೆ ನೌಕರರು ಈ ಹಿಂದೆ ತಮ್ಮ ಹಕ್ಕುಗಳಿಗಾಗಿ ಬೀದಿಗಿಳಿದಾಗ ಇದೇ ಅಧಿಕಾರಿಗಳು ನೂರಾರು ನೌಕರರನ್ನು ವಜಾಗೊಳಿಸಿದರು. ವರ್ಷ ಕಳೆದರೂ ಸುಮಾರು ನೂರು ಪ್ರಕರಣಗಳು ಇನ್ನೂ ಇತ್ಯರ್ಥವಾಗಿಲ್ಲ. ಮತ್ತೂಂದೆಡೆ ಹತ್ತಾರು ಕಡೆ ಫೋರ್ಜರಿ ಮಾಡಿ ಲೂಟಿ ಮಾಡಿದ ಅಧಿಕಾರಿಗಳ ತಂಡವನ್ನು ಬರೀ ಅಮಾನತುಗೊಳಿಸಿ, ಅರ್ಧ ಸಂಬಳ ನೀಡುತ್ತಿದೆ. ಒಂದು ಕಣ್ಣಿಗೆ ಬೆಣ್ಣೆ ಮತ್ತೂಂದು ಕಣ್ಣಿಗೆ ಸುಣ್ಣ. ಈ ಧೋರಣೆ ಯಾಕೆ? ಹಗರಣದ ವಿರುದ್ಧ ತೀವ್ರ ಸ್ವರೂಪದ ತನಿಖೆ ನಡೆಸಲು ಆದೇಶಿಸುವಂತೆ ಸಾರಿಗೆ ಸಚಿವರನ್ನು ಖುದ್ದು ಭೇಟಿಯಾಗಿ ಮನವಿ ಮಾಡಲಾಗುವುದು. ಈಗಾಗಲೇ ಸಮಯವನ್ನೂ ಕೇಳಿದ್ದೇವೆ. ಇನ್ನೂ ಸಿಕ್ಕಿಲ್ಲ’ ಎಂದು ಚಂದ್ರಶೇಖರ್‌ ತಿಳಿಸಿದರು.

“ಸ್ವತಃ ಎಂಡಿಗಳ ಸಹಿ ಫೋರ್ಜರಿ ಮಾಡಿರುವುದರಿಂದ ಇಲ್ಲಿ ಪಲಾಯನಕ್ಕೆ ಅವಕಾಶ ಇಲ್ಲ ಎಂಬ ಭಾವನೆ ಇದೆ. ಆದರೆ, ತನಿಖೆ ಇನ್ನಷ್ಟು ತೀವ್ರವಾಗಿ ನಡೆಯಬೇಕಾದ ಅವಶ್ಯಕತೆ ಇದೆ. ಒಂದು ವೇಳೆ ಈಗಿನ ಧೋರಣೆ ಮುಂದುವರಿದರೆ, ಅಲ್ಲಿಗೆ ಹಿರಿಯ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂಬುದು ಸಾಬೀತಾಗುತ್ತದೆ. ಬಿಎಂಟಿಸಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಮತ್ತು ಈಗ ಕಾರ್ಯನಿರ್ವಹಿಸುತ್ತಿರುವವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬೇಕು. ಜತೆಗೆ ಸಂಘಟನೆಯಿಂದಲೂ ಹಗರಣದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಸಚಿವರ ಮೇಲೂ ಒತ್ತಡ ತರುವ ಕೆಲಸ ಆಗಲಿದೆ’ ಎಂದು ಕೆಎಸ್‌ಆರ್‌ಟಿಸಿ ನೌಕರರ ಜಂಟಿ ಕ್ರಿಯಾಸಮಿತಿ ಅಧ್ಯಕ್ಷ ಎಚ್‌.ವಿ. ಅನಂತಸುಬ್ಬರಾವ್‌ ಸ್ಪಷ್ಟಪಡಿಸಿದರು.

 ಒಂದು ಕಡತದ ಕತೆ!:

ವರ್ಷದ ಹಿಂದೆ ಕೇವಲ ಒಂದು ನಂದಿನಿ ಬೂತ್‌ಗೆ ಪರವಾನಗಿ ನವೀಕರಣಕ್ಕೆ ಸಂಬಂಧಿಸಿದ ಕಡತ ಆಕಸ್ಮಿಕವಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರ ಕಣ್ಣಿಗೆ ಬಿತ್ತು. ಅದರ ಜಾಡುಹಿಡಿದು ಹೋದಾಗ ಫೋರ್ಜರಿ ಆಗಿರುವುದು ಬಯಲಾಯಿತು. ಅಂತಹದ್ದೇ “ಫೋರ್ಜರಿ ಕೇಸು’ಗಳು ಗುತ್ತಿಗೆ ನವೀಕರಣ ಕುರಿತ ಕಡತಗಳಲ್ಲೂ ಕಂಡುಬಂತು. ಅಲ್ಲಿಂದ ಬಿಎಂಟಿಸಿಯಲ್ಲಿ ಕಡತ ಶೋಧನೆಯ ಯಜ್ಞ ಶುರುವಾಗಿದ್ದು, ಈಗಲೂ ಮುಂದುವರಿದಿದೆ.  ಬಿಎಂಟಿಸಿ ಮೂಲಗಳ ಪ್ರಕಾರ ಇದುವರೆಗೆ 20ರಿಂದ 25 ಕಡತಗಳಲ್ಲಿ ಫೋರ್ಜರಿ ಆಗಿರುವುದು ಪತ್ತೆಯಾಗಿದೆ. ಸುಮಾರು ಎಂಟು ತಿಂಗಳ ಹಿಂದೆ ಆರೋಪಿ ಮುಖ್ಯ ಸಂಚಾರ ವ್ಯವಸ್ಥಾಪಕ (ವಾಣಿಜ್ಯ)ರಾಗಿದ್ದವರ ವಿರುದ್ಧ ಎಫ್ಐಆರ್‌ ದಾಖಲಾಗಿ, ಬಂಧನಕ್ಕೊಳಪಡಿಸಲಾಗಿತ್ತು. ಪ್ರಕರಣದಲ್ಲಿ ಐವರನ್ನು ಅಮಾನತುಗೊಳಿಸಲಾಗಿತ್ತು. ಈಗ ಅದೇ ತಂಡದ ವಿರುದ್ಧ ಮತ್ತೆರಡು ಎಫ್ಐಆರ್‌ ಆಗಿವೆ.

-ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.