Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ


Team Udayavani, Oct 3, 2024, 10:55 AM IST

Bengaluru: ಮ್ಯಾನೇಜರ್‌ಗೆ ಇರಿಯಲು ಬಂದು ಕಂಡಕ್ಟರ್‌ಗೆ ಇರಿದ

ಬೆಂಗಳೂರು: ವೈಟ್‌ ಫೀಲ್ಡ್‌ ಘಟಕದ ಬಿಎಂಟಿಸಿ ವೋಲ್ವೋ ಬಸ್‌ ನಿರ್ವಾಹಕನಿಗೆ ಚಾಕು ಇರಿದಿರುವ ಜಾರ್ಖಂಡ್‌ ಮೂಲದ ಹರ್ಷ ಸಿನ್ಹಾ ಕೆಲವು ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದ ಮ್ಯಾನೇಜರ್‌ ನನ್ನು ಬೆದರಿಸಲು ಬ್ಯಾಗ್‌ನಲ್ಲಿ ಚಾಕು ಹಿಡಿದುಕೊಂಡು ಹೋಗಿದ್ದ ಎಂಬುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ‌

ವೈಟ್‌ ಫೀಲ್ಟ್ ಘಟಕದ ಬಿಎಂಟಿಸಿ ವೋಲ್ವೋ ಬಸ್‌ ನಿರ್ವಾಹಕನಿಗೆ ಚಾಕು ಇರಿದಿರುವ ಘಟನೆ ಮಂಗಳ ವಾರ ಐಟಿಪಿಎಲ್‌ ಬಸ್‌ ನಿಲ್ದಾಣದ ಬಳಿ ನಡೆದಿತ್ತು. ಆರೋಪಿ ಹರ್ಷ ಸಿನ್ಹಾನನ್ನು ಬಂಧಿಸಿರುವ ವೈಟ್‌ ಫೀಲ್ಡ್ ಠಾಣೆ ಪೊಲೀಸರು ಆತನನ್ನು ವಿಚಾರಣೆ ನಡೆಸಿದಾಗ ಮ್ಯಾನೇಜರ್‌ಗೆ ಚಾಕು ತೋರಿಸಲು ಬೆದರಿಸಲು ಮುಂದಾಗಿದ್ದ ಸಂಗತಿ ಬೆಳಕಿಗೆ ಬಂದಿದೆ. ‌

ಬಿಕಾಂ ಪದವೀಧರನಾಗಿದ್ದ ಹರ್ಷ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚೆಗೆ ಆತನನ್ನು ಕೆಲಸದಿಂದ ವಜಾಗೊಳಿಸಲಾಗಿತ್ತು. ಇದರಿಂದ ಬೇರೆ ಕೆಲಸವಿಲ್ಲದೇ ಕಳೆದ 20 ದಿನಗಳಿಂದ ಹೂಡಿಯಲ್ಲಿರುವ ಪಿಜಿಯಲ್ಲೇ ಕಾಲ ಕಳೆಯುತ್ತಿದ್ದ. ಕೆಲಸಕ್ಕಾಗಿ ಅಲೆದು ಸುಸ್ತಾಗಿದ್ದ ಆತ ತನ್ನನ್ನು ಕೆಲಸದಿಂದ ತೆಗೆದ ಮ್ಯಾನೇಜರ್‌ನನ್ನು ಬೆದರಿಸಲು ಸಂಚು ರೂಪಿಸಿದ್ದ. ಅದರಂತೆ ಮಂಗಳವಾರ ಬ್ಯಾಗ್‌ನಲ್ಲಿ 2 ಚಾಕು ಇಟ್ಟುಕೊಂಡು ಹಿಂದೆ ಕೆಲಸ ಮಾಡುತ್ತಿದ್ದ ಕಂಪನಿಗೆ ತೆರಳಿದ್ದ. ಆದರೆ, ಕಂಪನಿಯ ಬಳಿ ಮ್ಯಾನೇಜರ್‌ ಹಾಗೂ ಇತರ ಅಧಿಕಾರಿಗಳು ಸಿಕ್ಕಿರಲಿಲ್ಲ. ಇದರಿಂದ ನೊಂದು ಹೂಡಿಯಲ್ಲಿರುವ ತನ್ನ ಪಿಜಿಗೆ ವಾಪಸ್‌ ಬರಲು ವೋಲ್ವೋ ಬಸ್‌ ಹತ್ತಿದ್ದ. ಬಸ್‌ ನಲ್ಲಿ ಫ‌ುಟ್‌ಬೋರ್ಡ್‌ ಮೇಲೆ ನಿಂತಿದ್ದ ಆತನನ್ನು ಬಸ್‌ ನೊಳಗೆ ಹೋಗುವಂತೆ ನಿರ್ವಾಹಕ ಯೋಗೇಶ್‌ ಹೇಳಿದ್ದರು. ಮೊದಲೇ ಕೆಲಸದಿಂದ ತೆಗೆದು ಹಾಕಿದ ಆಕ್ರೋಶದಲ್ಲಿದ್ದ ಹರ್ಷ ಸಿನ್ಹಾ ನಿರ್ವಾಹಕನ ಮಾತಿನಿಂದ ಕೆರಳಿ ಏಕಾಏಕಿ ತನ್ನ ಬ್ಯಾಗ್‌ನಲ್ಲಿದ್ದ ಚಾಕು ತೆಗೆದು ನಿರ್ವಾಹಕನಿಗೆ ಇರಿದಿದ್ದಾನೆ ಎಂಬ ವಿಚಾರ ತನಿಖೆಯಲ್ಲಿ ಗೊತ್ತಾಗಿದೆ.

ಮತ್ತೂಂದೆಡೆ ಗಾಯಾಳು ನಿರ್ವಾಹಕ ವೈಟ್‌ ಫೀಲ್ಡ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಂಡಿದ್ದಾರೆ. ‌

ಬಸ್‌ನೊಳಗೆ ಆರೋಪಿ ಕೃತ್ಯದ ವಿಡಿಯೋ ವೈರಲ್‌: ಇನ್ನು ನಿರ್ವಾಹಕ ಯೋಗೀಶ್‌ಗೆ ಚಾಕು ಹಾಕಿದ ಸಿನ್ಹಾ, ಇಷ್ಟಕ್ಕೆ ಸುಮ್ಮನಾಗದೇ ಬಸ್‌ ಗಾಜುಗಳನ್ನು ಚಾಕುವಿನಿಂದ ಒಡೆದು ಹಾಕಿದ್ದ. ಚಾಕು ಪ್ರದರ್ಶಿಸುತ್ತಿದ್ದ ಆರೋಪಿಯನ್ನು ಕಂಡು ಬಸ್‌ ನಲ್ಲಿ ತುಂಬಿದ್ದ ಪ್ರಯಾಣಿಕರು ಭಯಭೀತರಾಗಿ ಬಸ್‌ನಿಂದ ಇಳಿದು ಹೋಗಿದ್ದರು. ಈ ದೃಶ್ಯವು ಬಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ವೈರಲ್‌ ಆಗಿದೆ. ಇನ್ನು ಈ ವಿಡಿಯೋ ನೋಡಿ ಹೊರ ರಾಜ್ಯದಿಂದ ಬೆಂಗಳೂರಿಗೆ ಉದ್ಯೋಗ ಅರಸಿ ಬರುತ್ತಿರುವವರ ಕುರಿತು ಬಗ್ಗೆ ಅಪಸ್ವರ ಕೇಳಿ ಬಂದಿದೆ. ಈ ಹಿಂದೆಯೂ ಬೆಂಗಳೂರಿನಲ್ಲಿ ಹೊರ ರಾಜ್ಯದವರಿಂದ ಇಂತಹ ಕೃತ್ಯಗಳು ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಾಲತಾಣಗಳಲ್ಲಿ ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾನಸಿಕವಾಗಿ ನೊಂದಿದ್ದ ಆರೋಪಿ :

ವಿಚಾರಣೆ ವೇಳೆ ಕೆಲಸದಿಂದ ತೆಗೆದು ಹಾಕಿರುವ ಹಿನ್ನೆಲೆಯಲ್ಲಿ ಮಾನಸಿಕವಾಗಿ ನೊಂದಿದ್ದೆ. ಜೀವನ ನಿರ್ವಹಣೆ ಮಾಡಲು ಕೆಲಸಕ್ಕಾಗಿ ಅಲೆದಾಡಿದ್ದರೂ ನೌಕರಿ ಸಿಕ್ಕಿರಲಿಲ್ಲ ಎಂದು ಆರೋಪಿ ಹೇಳಿದ್ದಾನೆ. ಹೀಗಾಗಿ ನೊಂದು ಕೃತ್ಯ ಎಸಗಿರುವುದು ಕಂಡು ಬಂದಿದೆ. ಆದರೆ, ಆರೋಪಿಯು ಈ ವಿಚಾರ ಹೊರತುಪಡಿಸಿ ಮಾನಸಿಕವಾಗಿ ಯಾವುದೇ ಕಾಯಿಲೆಗೆ ಒಳಗಾಗಿಲ್ಲ. ಆರೋಗ್ಯವಾಗಿದ್ದಾನೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

Isha Foundation: ಈಶ ಫೌಂಡೇಶನ್‌ ವಿರುದ್ಧ ತನಿಖೆ-ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

BBK11: ನನಗೆ ಇಲ್ಲಿ ಇರೋಕೆ ಇಷ್ಟವಿಲ್ಲ.. ನಾನು ಬಿಗ್‌ಬಾಸ್‌ನಿಂದ ಹೊರ ಹೋಗ್ತೇನೆ – ಜಗದೀಶ್

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಜಾಸ್ತಿ ಬಾಡಿಗೆ ಕೊಡಲ್ಲಎಂದಿದ್ದಕ್ಕೆ ಯುವತಿಗೆ ಆಟೋ ಡ್ರೈವರ್‌ ನಿಂದನೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

ಷಡಕ್ಷರಿ ಮಠದ ಸ್ವಾಮೀಜಿಗೆ 6 ಕೋಟಿ ರೂ. ಹನಿಟ್ರ್ಯಾಪ್‌ ಕೇಸ್‌: ಮೂವರು ಸಿಸಿಬಿ ವಶಕ್ಕೆ

4

Bengaluru: ಬರ್ತ್‌ಡೇ ಪಾರ್ಟಿ ವೇಳೆ ಗಾಳಿಯಲ್ಲಿ 6 ಸುತ್ತು ಗುಂಡು; ಉದ್ಯಮಿ ಬಂಧನ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Serial Actress: ಮದುವೆ ನಿರಾಕರಿಸಿದ್ದಕ್ಕೆ ಕಿರುತೆರೆ ನಟಿಯ ಮನೆಯಲ್ಲೇ ಯುವಕ ಆತ್ಮಹ*ತ್ಯೆ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

Agriculture School: ಮೊದಲ ಕೃಷಿ ಶಾಲೆ ಜಾಗದಲ್ಲಿ ಪಾನೀಯ ನಿಗಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

ಬೆಳ್ಳಂಬೆಳಗ್ಗೆ ವಾಕಿಂಗ್ ಹೊರಟಿದ್ದ ಆರ್‌ಜೆಡಿ ನಾಯಕನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

1

Mangaluru: ಬರೊಂದುಲ್ಲ.. ಮಾರ್ನೆಮಿದ ಪಿಲಿಕುಲು!

6-ಗಾನಗಾವಾತಹಿ

ಮಾಜಿ ಮಂತ್ರಿ ಅನ್ಸಾರಿ ಆಪ್ತರ ಮೇಲುಗೈ; ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಇಲಿಯಾಸ್ ಖಾದ್ರಿ

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Kudroli: ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.