ಪಾಲಿಕೆ ಕೊಳವೆಬಾವಿಗಳು ಜಲಮಂಡಳಿಗೆ ವರ್ಗ


Team Udayavani, Sep 18, 2022, 12:23 PM IST

ಪಾಲಿಕೆ ಕೊಳವೆಬಾವಿಗಳು ಜಲಮಂಡಳಿಗೆ ವರ್ಗ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ತನ್ನ ಸುಪರ್ದಿಯಲ್ಲಿರುವ ಕೊಳವೆ ಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ಮುಂದಾಗಿದೆ.

ಬೇಸಿಗೆಯಲ್ಲಿ ಕಾವೇರಿ ನೀರಿನ ಕೊರತೆ ಉಂಟಾಗಿ ನಗರದಲ್ಲಿ ಎದುರಾಗುವ ನೀರಿನ ಸಮಸ್ಯೆ ನೀಗಿಸಲು ಜಲಮಂಡಳಿ ಬೋರ್‌ವೆಲ್‌ಗ‌ಳ ಮೊರೆ ಹೋಗುತ್ತದೆ. ಆದರೆ, ಬಿಬಿಎಂಪಿ ಸುಪರ್ದಿಯಲ್ಲಿರುವ ಕೊಳವೆಬಾವಿಗಳ ನಿರ್ವಹಣೆ ಸರಿಯಾಗಿಲ್ಲದ ಕಾರಣ ಕೆಲವೊಮ್ಮೆ ಅಲ್ಲಿಂದಲೂ ನೀರು ಪೂರೈಕೆ ಸಾಧ್ಯವಾಗುವುದಿಲ್ಲ. ಹೀಗಾಗಿಯೇ ಬಿಬಿಎಂಪಿ ತನ್ನ ಸುಪರ್ದಿಯಲ್ಲಿರುವ ಕೊಳವೆಬಾವಿಗಳನ್ನು ಜಲಮಂಡಳಿಗೆ ಹಸ್ತಾಂತರಿಸಲು ತೀರ್ಮಾನಿಸಿದೆ.

ಜತೆಗೆ ನಿರ್ವಹಣೆಗಾಗಿ ಪಾಲಿಕೆಯಿಂದ 40 ಕೋಟಿ ರೂ. ನೀಡಲು ನಿರ್ಧರಿಸಲಾಗಿದೆ. ಬೆಂಗಳೂರಿಗೆ ಪ್ರತಿದಿನ 1,450 ಎಂಎಲ್‌ಡಿ ನೀರಿನ ಅವಶ್ಯಕತೆಯಿದೆ. ಸದ್ಯ ಈ ನೀರನ್ನು ಕಾವೇರಿ 1ರಿಂದ 4ನೇ ಹಂತದ ಯೋಜನೆಯಿಂದ ಪೂರೈಸಲಾಗುತ್ತದೆ. ಬೇಸಿಗೆಯಲ್ಲೂ ಬಹುತೇಕ ಕಾವೇರಿ ನದಿ ನೀರನ್ನೇ ಬೆಂಗಳೂರು ನೆಚ್ಚಿಕೊಂಡಿದೆ. ಆದರೆ, ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಿಗೆ ಇನ್ನೂ ಸಮರ್ಪಕವಾಗಿ ಕಾವೇರಿ ನೀರು ಸಂಪರ್ಕ ನೀಡದ ಕಾರಣ, ಆ ಭಾಗಕ್ಕೆ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಅದರಲ್ಲಿ ಬಿಬಿಎಂಪಿಯ ಕೊಳವೆಬಾವಿಗಳೂ ಸೇರ್ಪಡೆಯಾ ಗಿದೆ. ಆದರೆ, ಬಿಬಿಎಂಪಿಯ ಕೊಳವೆ ಬಾವಿಗಳನ್ನು ಸಮರ್ಪಕ ನಿರ್ವಹಣೆ ಮಾಡಲಾಗದ ಕಾರಣ, ಅವುಗಳಿಂದ ನೀರು ಪೂರೈಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೊಳವೆಬಾವಿಗಳ ನಿರ್ವಹಣೆಯ ಹೊಣೆಯನ್ನು ಜಲಮಂಡಳಿಗೆವಹಿಸಲಾಗುತ್ತಿದೆ.

10 ಸಾವಿರ ಕೊಳವೆಬಾವಿಗಳು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಜಲಮಂಡಳಿಗೆ ಸೇರಿದ 10,316 ಕೊಳವೆಬಾವಿಗಳಿವೆ. ಅದರಲ್ಲಿ ಬಿಬಿಎಂಪಿಗೆ ಸೇರಿದ 8,691 ಹಾಗೂ ಜಲಮಂಡಳಿಯ 1,625 ಬೋರ್‌ವೆಲ್‌ಗ‌ಳಿವೆ. ಬಿಬಿಎಂಪಿಯ ಕೊಳವೆಬಾವಿಗಳಲ್ಲಿ 7,198 ಕಾರ್ಯನಿರ್ವಹಿಸುತ್ತಿದ್ದಂತೆ, 1,493 ಕೊಳವೆಬಾವಿಗಳಿಂದ ನೀರು ಹೊರತೆಗೆಯಲಾಗದ ಪರಿಸ್ಥಿತಿಯಿದೆ. ಅದೇ ರೀತಿ ಜಲಮಂಡಳಿಯ ಕೊಳವೆ ಬಾವಿಗಳ ಪೈಕಿ 1,436 ನೀರು ಪೂರೈಕೆ ಸ್ಥಿತಿಯಲ್ಲಿದ್ದರೆ, 189 ಕಾರ್ಯನಿರ್ವಹಿಸುತ್ತಿಲ್ಲ. ಒಟ್ಟಾರೆ 8,634 ಕೊಳವೆಬಾವಿಗಳು ಕೆಲಸ ಮಾಡುತ್ತಿದ್ದರೆ, 1,682 ಕೊಳವೆಬಾವಿಗಳ ಮೋಟಾರು ಹಾಳಾಗಿರುವುದು, ನೀರು ಬರದಿರುವ ಸ್ಥಿತಿಯಲ್ಲಿವೆ. ಅವುಗಳಲ್ಲಿ ಮೋಟಾರು ಹಾಳಾಗಿರುವ ಕೊಳವೆಬಾವಿಗಳನ್ನು ದುರಸ್ತಿ ಮಾಡುವ ಹೊಣೆ ಜಲಮಂಡಳಿಯದ್ದಾಗಿದೆ.

ಬಿಬಿಎಂಪಿಯಿಂದ 40 ಕೋಟಿ ರೂ.: ನಿರ್ವಹಣೆ ಸಾಧ್ಯವಾಗದೆ ಕೊಳವೆಬಾವಿಗಳನ್ನು ಹಸ್ತಾಂತರಿಸುತ್ತಿ ರುವ ಬಿಬಿಎಂಪಿ ಅದರ ಜತೆಗೆ ಜಲಮಂಡಳಿಗೆ ಹಣವನ್ನೂ ನೀಡುತ್ತಿದೆ. ಬೋರ್‌ವೆಲ್‌ಗ‌ಳನ್ನು ನಿಯಮಿತ ಅವಧಿಯಲ್ಲಿ ಪರಿಶೀಲಿಸುವುದು, ಅವುಗಳ ಮೋಟಾರು ಕೆಲಸ ಮಾಡುತ್ತಿವೆಯೇ ಎಂಬುದನ್ನು ಪರೀಕ್ಷಿಸುವ ಕೆಲಸ ಜಲಮಂಡಳಿ ಮಾಡಲಿದೆ. ಅದಕ್ಕಾಗಿ ಬಿಬಿಎಂಪಿ ಜಲಮಂಡಳಿಗೆ ವಾರ್ಷಿಕ 40 ಕೋಟಿ ರೂ. ಹಣವನ್ನು ನೀಡಲಿದೆ. ಈಗಾಗಲೆ ಬಿಬಿಎಂಪಿ ಜಲಮಂಡಳಿಗೆ ಹಣ ವರ್ಗಾಯಿಸಿದ್ದು, ಕೊಳವೆಬಾವಿಗಳ ಹಸ್ತಾಂತರ ಪ್ರಕ್ರಿಗೆ ಚಾಲನೆಯನ್ನೂ ನೀಡಿದೆ. ಕೊಳವೆ ಬಾವಿ ಪಡೆಯುವ ಜಲಮಂಡಳಿ ಬಿಬಿಎಂಪಿ ವ್ಯಾಪ್ತಿ ಯಲ್ಲಿ ಇನ್ನೂ ಕಾವೇರಿ ನೀರು ಸಂಪರ್ಕ ಸಿಗದ ಪ್ರದೇಶಗಳಿಗೆ ಕೊಳವೆಬಾವಿಯಿಂದ ಟ್ಯಾಂಕರ್‌ಗೆ ನೀರು ತುಂಬಿಸಿ ಪೂರೈಸಲಿದೆ. ಅದರಲ್ಲೂ 110 ಹಳ್ಳಿ ವ್ಯಾಪ್ತಿ ಯಲ್ಲಿ ಅಗತ್ಯವಿರುವಲ್ಲಿ ಉಚಿತವಾಗಿ ನೀರು ಸರಬ ರಾಜು ಮಾಡಬೇಕಿದೆ. ಹಾಗೆಯೇ, ಬಿಬಿಎಂಪಿ ಉದ್ಯಾನ ಸೇರಿ ಇನ್ನಿತರ ಕಡೆಗಳಿಗೆ ನೀರು ಪೂರೈಸಬೇಕಿದೆ.

ಹೆಚ್ಚುವರಿ ಕೆಲಸದಿಂದ ಮುಕ್ತಿ : ನಗರದಲ್ಲಿ ಮೂಲಸೌಕರ್ಯ ಒದಗಿಸುತ್ತಿರುವ ಬಿಬಿಎಂಪಿ ಕೊಳವೆಬಾವಿ ನಿರ್ವಹಣೆ ಹೆಚ್ಚುವರಿ ಕೆಲಸವಾಗಿತ್ತು. ಕೊಳವೆಬಾವಿಗಳ ಮೋಟಾರನ್ನು ಕಾಲಕಾಲಕ್ಕೆ ಪರಿಶೀಲಿಸುವುದು, ನೀರು ಪೂರೈಕೆಗಾಗಿ ಬೇಡಿಕೆ ಬರುವಲ್ಲಿಗೆ ನೀರು ಪೂರೈಸುವ ಕೆಲಸ ಮಾಡಬೇಕಿತ್ತು. ಆದರೆ, ಕೊಳವೆಬಾವಿಗಳನ್ನೆಲ್ಲ ಜಲಮಂಡಳಿಗೆ ವಹಿಸುತ್ತಿರುವುದರಿಂದ ಆ ಕೆಲಸಗಳು ಜಲಮಂಡಳಿ ಹೆಗಲಿಗೆ ಬಿದ್ದಂತಾಗಿದೆ.

ನಿರ್ವಹಣೆ ಸೇರಿ ಇನ್ನಿತರ ಕಾರ್ಯಕ್ಕಾಗಿ ಬಿಬಿಎಂಪಿ ಸುಪರ್ದಿಯಲ್ಲಿದ್ದ ಕೊಳವೆಬಾವಿಗಳನ್ನು ಜಲಮಂಡಳಿಗೆ ವಹಿಸಲಾಗುತ್ತಿದೆ. ಅಲ್ಲದೆ ಕೊಳವೆಬಾವಿಗಳ ನಿರ್ವಹಣೆಗಾಗಿ ಬಿಬಿಎಂಪಿಯಿಂದ ಜಲಮಂಡಳಿಗೆ 40 ಕೋಟಿ ರೂ. ನೀಡಲಾಗಿದೆ. ತುಷಾರ್‌ ಗಿರಿನಾಥ್‌, ಬಿಬಿಎಂಪಿ ಮುಖ್ಯ ಆಯುಕ್ತ

 

ಗಿರೀಶ್‌ ಗರಗ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.