![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-415x249.jpg)
ಡಿನೋಟಿಫಿಕೇಶನ್ಗೆ ಭೂ ಮಾಲೀಕರಿಂದ ಹಣ ಪಡೆದಿದ್ದ ಬಿಎಸ್ವೈ: ಎಸಿಬಿ
Team Udayavani, Sep 5, 2017, 6:20 AM IST
![BSY-05.jpg](https://www.udayavani.com/wp-content/uploads/2017/09/5/BSY-05.jpg)
ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯಿಂದ 257. ಎಕರೆ 20.5 ಗುಂಟೆ ಜಮೀನು ಕೈ ಬಿಡುವಂತೆ ಸೂಚಿಸಿದ್ದ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಭೂ ಮಾಲೀಕರಿಂದ ಹಣ ಪಡೆದುಕೊಂಡಿದ್ದರು ಎಂಬ ಬಗ್ಗೆ ದೂರಿನಲ್ಲಿಯೇ ಉಲ್ಲೇಖವಾಗಿದೆ ಎಂದು ಎಸಿಬಿ ಹೈಕೋರ್ಟ್ಗೆ ತಿಳಿಸಿದೆ.
ತಮ್ಮ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯಪೀಠಕ್ಕೆ, ಎಸಿಬಿ ಪರ ವಕೀಲ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮಕುಮಾರ್, ಈ ಮಾಹಿತಿ ನೀಡಿದರು.
ಪ್ರೊ.ರವಿವರ್ಮಕುಮಾರ್, ಅವರ ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 6ಕ್ಕೆ ಮುಂದೂಡಿತು.ಜೊತೆಗೆ ಮುಂದಿನ ವಿಚಾರಣೆಯವರೆಗೆ ಅರ್ಜಿದಾರ ಬಿ.ಎಸ್ ಯಡಿಯೂರಪ್ಪನವರನ್ನು ಬಂಧಿಸದಂತೆ ನೀಡಲಾಗಿರುವ ಮಧ್ಯಂತರ ಆದೇಶವನ್ನೂ ವಿಸ್ತರಿಸಿತು.ಇದಕ್ಕೂ ಮೊದಲು ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಪ್ರೊ.ರವಿವರ್ಮಕುಮಾರ್, ಅರ್ಜಿದಾರ ಯಡಿಯೂರಪ್ಪನವರ ವಿರುದ್ಧ ಡಿನೋಟಿಫಿಕೇಶನ್ ಆರೋಪ ಸಂಬಂಧ ಎಸಿಬಿಗೆ ದೂರು ನೀಡಿರುರುವ ದೂರುದಾರರು, ಶಿವರಾಮ ಕಾರಂತ ಬಡಾವಣೆಯ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆಯಿಂದ 257. ಎಕರೆ 20.5 ಗುಂಟೆ ಜಮೀನು ಕೈ ಬಿಡುವಂತೆ ಸೂಚಿಸಿದ್ದ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಭೂ ಮಾಲೀಕರಿಂದ ಹಣ ಪಡೆದುಕೊಂಡಿದ್ದಾರೆ. ಭೂ ಮಾಲೀಕರ ಹಿತ ಕಲ್ಯಾಣದ ಜೊತೆಗೆ ಸ್ವ ಕಲ್ಯಾಣವನ್ನು ಮಾಡಿಕೊಂಡಿದ್ದಾರೆ.
ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಟ್ಟ ಜಮೀನಿನ ಮೌಲ್ಯ ಆಗ 200 ಕೋಟಿ ರೂ.ಗಳಿಗೂ ಅಧಿಕವಾಗಿತ್ತು .ತನ್ನದಲ್ಲದ ಅಧಿಕಾರವನ್ನು ಬಳಸಿಕೊಂಡಿರುವ ಯಡಿಯೂರಪ್ಪ ಭೂ ಮಾಲೀಕರಿಂದ ಹಣ ಪಡೆದುಕೊಂಡೇ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದಲ್ಲದೆ ಯಲಹಂಕ ಹೋಬಳಿ ಆವಲಹಳ್ಳಿ ಗ್ರಾಮದ ಸರ್ವೇನಂಬರ್ 109 ರಲ್ಲಿನ 3 ಎಕರೆ 6 ಗುಂಟೆ ಜಮೀನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈ ಬಿಡಲು ಕೋರಿ ಅಂದಿನ ಸಿಎಂ ಯಡಿಯೂರಪ್ಪ ಅವರಿಗೆ ಅರ್ಜಿ ಸಲ್ಲಿಸಿದ್ದ ಆಶಾ ಪರ್ದೇಸಿ ಎಂಬ ಮಹಿಳೆಯ ಹೆಸರಿನಲ್ಲಿ ಜಮೀನು ಖಾತೆಯಿರಲಿಲ್ಲ. ಅರ್ಜಿಯಲ್ಲಿ ಆಕೆಯ ಸಹಿ ಹಾಗೂ ದಿನಾಂಕ ಕೂಡ ನಮೂದಾಗಿರಲಿಲ್ಲ. ಈ ಸೋ ಕಾಲ್ಡ್ ಅರ್ಜಿದಾರಳಾದ ಆಶಾ ಪರದೇಸಿ ಜಮೀನು ಪ್ರಕ್ರಿಯಿಂದ ಜಮೀನು ಕೈ ಬಿಟ್ಟ ಬಳಿಕ ತನ್ನ ಹೆಸರಿನಲ್ಲಿ ಖಾತೆ ಮಾಡಿಸಿಕೊಂಡು ಕೋಟ್ಯಾಂತರ ರೂ.ಗಳಿಗೆ ಮಾರಾಟ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕಿದ್ದು ತಡೆಯಾಜ್ಞೆ ನೀಡಬಾರದು ಎಂದು ಕೋರಿದರು.
ಟಾಪ್ ನ್ಯೂಸ್
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1-maya](https://www.udayavani.com/wp-content/uploads/2024/07/1-maya-150x84.jpg)
K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ
![1hatharas](https://www.udayavani.com/wp-content/uploads/2024/07/1hatharas-150x84.jpg)
Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್ಗಳನ್ನು ತಂದಿದ್ದರೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.