
“ಲಕ್ಕಿ’ ಬಂಗಲೆ ಬೇಕೆಂದ ಬಿಎಸ್ವೈ
Team Udayavani, Jun 12, 2018, 11:45 AM IST

ಬೆಂಗಳೂರು: ಪ್ರತಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ರೇಸ್ಕೋರ್ಸ್ ರಸ್ತೆ ಬಳಿ ಇರುವ ಸರ್ಕಾರಿ ಬಂಗಲೆ ನೀಡುವಂತೆ ಕೋರಿಕೆ ಸಲ್ಲಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ವಾಸವಿದ್ದ ರೇಸ್ಕೋರ್ಸ್ ಬಳಿಯ ಬಂಗಲೆಯನ್ನೇ ಪ್ರತಿಪಕ್ಷ ನಾಯಕರಾಗಿರುವ ತಮಗೆ ಕೊಡಬೇಕು ಎಂದು ಕೇಳಿದ್ದಾರೆ.
ಆ ಬಂಗಲೆ ವಿಶಾಲವಾಗಿದ್ದು, ನಾಲ್ಕು ಕೋಣೆ ಹೊಂದಿದೆ. ಬಿಜೆಪಿಯ 104 ಶಾಸಕರೊಂದಿಗೆ ಸಭೆ ನಡೆಸಲು ವಿಶಾಲವಾದ ಬಂಗಲೆ ಬೇಕಾಗಿದೆ. ಹೀಗಾಗಿ, ಅದನ್ನೇ ಕೊಡಿ ಎಂದು ಪತ್ರ ಬರೆದಿದ್ದರು. ಈ ಸಂಬಂಧ ಮೇ 25ರಂದೇ ಯಡಿಯೂರಪ್ಪ ಮನವಿ ಸಲ್ಲಿಸಿದ್ದರೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಯಿಂದ ಸೂಕ್ತ ಸ್ಪಂದನೆ ದೊರೆತಿಲ್ಲ. ಹೀಗಾಗಿ ಜೂ.7ರಂದು ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಮತ್ತೂಂದು ಪತ್ರ ಬರೆದಿದ್ದಾರೆ.
ಪ್ರಸ್ತುತ ರೇಸ್ಕೋರ್ಸ್ ಬಂಗಲೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ ವಾಸವಿದ್ದಾರೆ. ಅವರು ತೆರವು ಮಾಡಿದ ನಂತರ ಬೇರೆಯವರಿಗೆ ನೀಡಬೇಕಾಗಿದೆ. ಆದರೆ, ತಮಗೆ ಆ ಬಂಗಲೆ ಸಿಗುವುದು ಅನುಮಾನ ಎಂದು ಗೊತ್ತಾಗಿದ್ದರಿಂದ ಯಡಿಯೂರಪ್ಪ ನೇರವಾಗಿ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆ ಬಂಗಲೆ ತಮ್ಮ “ಲಕ್ಕಿ’ ಎಂಬ ಕಾರಣಕ್ಕೆ ಯಡಿಯೂರಪ್ಪ ಅದೇ ಬಂಗಲೆಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಕಾವೇರಿ ಬಿಡ್ತಾರಾ ಸಿದ್ದು: ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ಕಾವೇರಿ’ ತೆರವು ಮಾಡಿ ವಿಜಯನಗರದಲ್ಲಿರುವ ಸ್ವಂತ ನಿವಾಸ “ಪ್ರಸಿದ್ಧಿ’ಗೆ ಹೋಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಹಿಂದೆ ಉಪ ಮುಖ್ಯಮಂತ್ರಿಯಾಗಿದ್ದಾಗ ಹಾಗೂ ಐದು ವರ್ಷ ಮುಖ್ಯಮಂತ್ರಿಯಾಗಿ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾಗೆ ಹೊಂದಿಕೊಂಡಿರುವ ಕಾವೇರಿಯಲ್ಲಿ ವಾಸವಿದ್ದ ಸಿದ್ದರಾಮಯ್ಯ ಅವರಿಗೂ ಒಂದು ರೀತಿಯಲ್ಲಿ ಲಕ್ಕಿ ನಿವಾಸವೇ ಆಗಿತ್ತು.
ಆದರೆ, ಇದೀಗ ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿದಿರುವುದರಿಂದ ಕಾವೇರಿ ಬಿಡಬೇಕಾಗಿದೆ. ಮತ್ತೂಂದು ಮೂಲಗಳ ಪ್ರಕಾರ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ದೊರೆತರೆ ಸರ್ಕಾರಿ ಬಂಗಲೆ ದೊರೆಯಲಿದ್ದು ಕಾವೇರಿಯಲ್ಲೇ ಇರಬಹುದು ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.