ಸಾಲಕ್ಕಾಗಿ ಬಸ್ಸೇ ಹೈಜಾಕ್‌! ನಾಲ್ವರು ದುಷ್ಕರ್ಮಿಗಳ ಸೆರೆ


Team Udayavani, Apr 29, 2018, 6:00 AM IST

BUS-HIJACK.jpg

ಬೆಂಗಳೂರು: ಆ ಬಸ್‌ನಲ್ಲಿ ಸುಮಾರು 45 ಪ್ರಯಾಣಿಕರಿದ್ದರು… ಕೆಲವರು ನಿದ್ದೆಗೆ ಜಾರಿದ್ದರೆ, ಇನ್ನು ಕೆಲವರು ಮೊಬೈಲ್‌ ನೋಡುವುದರಲ್ಲಿ ಬ್ಯುಸಿಯಾಗಿದ್ರು. ನೋಡನೋಡುತ್ತಿದ್ದಂತೆ ರಸ್ತೆಯಲ್ಲೇ ಬಸ್‌ಗೆ ನುಗ್ಗಿದ ನಾಲ್ವರು ಆಗಂತುಕರು… ಏಕೆ, ಏನಾಯ್ತು ಎಂದು ಆತಂಕಗೊಂಡ ಪ್ರಯಾಣಿಕರು ಎದ್ದು ಕಣ್ಣು ಒರೆಸಿ ನೋಡಿದರೆ ಹಳೇ ವಸ್ತುಗಳ ತುಂಬಿದ ಗೋಡೌನ್‌!

ಇದು, ಶುಕ್ರವಾರ ತಡರಾತ್ರಿ ಬೆಂಗಳೂರಿನಿಂದ ಕೇರಳದ ಕಣ್ಣೂರಿಗೆ ಹೊರಟ್ಟಿದ್ದ ಖಾಸಗಿ ಬಸ್‌ನ್ನು ದುಷ್ಕರ್ಮಿಗಳು ಹೈಜಾಕ್‌ ಮಾಡಿದಾಗ ಪ್ರಯಾಣಿಕರಿಗೆ ಉಂಟಾದ ಅನುಭವ. ಸಾಲ ಮರುಪಾವತಿ ಮಾಡದ್ದಕ್ಕೆ ಫೈನಾನ್ಸ್‌ ಕಂಪನಿಯೊಂದು ಬಸ್‌ ಅನ್ನು ಅಪಹರಿಸಿರುವುದು ಆ ನಂತರ ಗೊತ್ತಾಯಿತು.

ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ 45 ಮಂದಿ ಪ್ರಯಾಣಿಕರ ಲಾಮಾ ಟ್ರಾವೆಲ್ಸ್‌ನ ಬಸ್‌ ಬೆಂಗಳೂರಿನ ಕಲಾಸಿಪಾಳ್ಯದಿಂದ ಕೇರಳದ ಕಣ್ಣೂರಿಗೆ ಹೊರಟಿದೆ. ರಾಜರಾಜೇಶ್ವರಿನಗರದ ಆರ್‌.ವಿ.ಕಾಲೇಜು ಬಳಿ ಬಸ್‌ ಹೋಗುತ್ತಿದ್ದಂತೆ ಪೊಲೀಸರ ಸೋಗಿನಲ್ಲಿ ಬೈಕ್‌ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಬಸ್‌ ಅಡ್ಡಗಟ್ಟಿದ್ದಾರೆ. ಬಳಿಕ ಚಾಲಕನನ್ನು ಬೆದರಿಸಿ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳ ಪೈಕಿ ಒಬ್ಟಾತ ಬಸ್‌ ಚಾಲನೆ ಮಾಡಿಕೊಂಡು ಪಟ್ಟಣಗೆರೆಯ ಗೋಡೌನ್‌ಗೆ ಕೊಂಡೊಯ್ದಿದ್ದಾನೆ. ಅಷ್ಟೇ ಅಲ್ಲ, ಇದನ್ನು ಪ್ರಶ್ನಿಸಿದ ಪ್ರಯಾಣಿಕರಿಗೆ ಸುಮ್ಮನೆ ಕುಳಿತುಕೊಳ್ಳಬೇಕು ಎಂಬ ಬೆದರಿಕೆಯನ್ನೂ ಹಾಕಿದ್ದಾನೆ.

ಸಿಸಿಬಿಯವರು ಎಂದರು…
ಕಣ್ಣೆದುರೇ ನಡೆಯುತ್ತಿದ್ದನ್ನೆಲ್ಲಾ ನೋಡಿದ ಪ್ರಯಾಣಿಕರಿಗೆ ಜೀವ ಭಯ ಕಾಡಿದೆ. ಆಗ ಕೆಲವರು ದುಷ್ಕರ್ಮಿಗಳನ್ನು ಪ್ರಶ್ನಿಸಿದರೆ ನಾವು ಸಿಸಿಬಿ ಪೊಲೀಸರು ಎಂದು ಹೇಳಿ ಎಚ್ಚರಿಕೆ ನೀಡಿದ್ದಾರೆ. ಗೋಡೌನ್‌ನಲ್ಲಿ ಬಸ್‌ ನಿಲ್ಲಿಸಿದ್ದರಿಂದ ಅನುಮಾನಗೊಂಡ ನಾಲ್ಕೈದು ಮಂದಿ ಪ್ರಯಾಣಿಕರು ಕೂಡಲೇ ಪೊಲೀಸ್‌ ಸಹಾಯವಾಣಿ “ನಮ್ಮ-100’ಗೆ ಕರೆ ಮಾಡಿ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಸುಮಾರು 30 ಮಂದಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ನಾಲ್ಕು ಮಂದಿ ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಮೂವರು ತಲೆಮರೆಸಿಕೊಂಡಿದ್ದಾರೆ. ಬಳಿಕ 45 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಪೊಲೀಸರ ಹೆಲ್ಮೆಟ್‌ ಬಳಕೆ
ಅಪಹರಣಕ್ಕೊಳಗಾದ ಬಸ್‌ ಕೇರಳದ ನೌಷಾದ್‌ ಎಂಬಾತನಿಗೆ ಸೇರಿದ್ದು, ಈತ ಫ‌ುಲ್ಟ್ರಾನ್‌ ಎಂಬ ಫೈನಾನ್ಸಿ ಕಂಪನಿಯಿಂದ ಸಾಲ ಪಡೆದುಕೊಂಡಿದ್ದ. ಆದರೆ, ನಿಗದಿತ ಸಮಯಕ್ಕೆ ಮರು ಪಾವತಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಣ ವಸೂಲಿ ಮಾಡುವ ಖಾಸಗಿ ಕಂಪನಿಗೆ ಬಸ್‌ ಜಪ್ತಿ ಮಾಡಲು ಫೈನಾನ್ಸ್‌ ಕಂಪನಿ ಸೂಚಿಸಿತ್ತು. ಈ ಸಂಬಂಧ ದುಷ್ಕರ್ಮಿಗಳು ಪೊಲೀಸರ ಹೆಲ್ಮೆಟ್‌ ಬಳಸಿ ಬಸ್‌ ಹೈಜಾಕ್‌ ಮಾಡಿದ್ದಾರೆ. ಬಳಿಕ ಜಪ್ತಿ ಮಾಡಿದ ವಾಹನಗಳನ್ನು ನಿಲ್ಲಿಸುತ್ತಿದ್ದ ಪಟ್ಟಣಗೆರೆಯ ಗೋಡೌನ್‌ಗೆ ಕೊಂಡೊಯ್ದಿದ್ದಾರೆ.

ಆರು ಗಂಟೆ ಪರದಾಟ
ಈ ಘಟನೆಯಿಂದ ಎಲ್ಲ ಪ್ರಯಾಣಿಕರು ಸುಮಾರು ಆರು ಗಂಟೆಗಳ ಕಾಲ ಆತಂಕದಲ್ಲೇ ಕಾಲ ಕಳೆಯಬೇಕಾಯಿತು. ಸುರಕ್ಷಿತವಾಗಿ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸರು ಬಸ್‌ ಅನ್ನು ಪೊಲೀಸ್‌ ಠಾಣೆಗೆ ಕೊಂಡೊಯ್ದು, ಬಳಿಕ ಚಾಲಕ ಸೇರಿ ಎಲ್ಲ ಪ್ರಯಾಣಿಕರಿಂದ ಹೇಳಿಕೆ ದಾಖಲಿಸಿಕೊಂಡು ಶನಿವಾರ ನಸುಕಿನ 3.30ರ ಸುಮಾರಿಗೆ ಕೇರಳ ಕಣ್ಣೂರಿಗೆ ಕಳುಹಿಸಿಕೊಟ್ಟಿದ್ದಾರೆ.

ಪೊಲೀಸ್‌ ಸಹಾಯವಾಣಿ “ನಮ್ಮ-100’ನಿಂದ ದೂರು ಬರುತ್ತಿದ್ದಂತೆ ನಮ್ಮ ಸಿಬ್ಬಂದಿ ಕ್ಷೀಪ್ರ ಕಾರ್ಯಾಚರಣೆ ನಡೆಸಿ ಅಪಹರಣಕಾರರನ್ನು ಬಂಧಿಸಿದ್ದಾರೆ. ಹಾಗೆಯೇ ಅಕ್ರಮವಾಗಿ ಬಸ್‌ ತಡೆ ಹಿಡಿದಿದ್ದ ಫೈನಾನ್ಸ್‌ ಕಂಪನಿಯ ಮೇಲೆ ದಾಳಿ ನಡೆಸಿ ಜಪ್ತಿ ಮಾಡಲಾಗುವುದು. ನಸುಕಿನ 3.30ರ ಸುಮಾರಿಗೆ ಕಾನೂನು ಪ್ರಕ್ರಿಯೆ ಮುಗಿಸಿ ಬಸ್‌ ಮತ್ತು ಪ್ರಯಾಣಿಕರನ್ನು ಕಣ್ಣೂರಿಗೆ ಕಳುಹಿಸಿಕೊಡಲಾಯಿತು.
– ರವಿ ಡಿ. ಚನ್ನಣ್ಣನವರ್‌, ಪಶ್ಚಿಮ ವಿಭಾಗದ ಡಿಸಿಪಿ

ಟಾಪ್ ನ್ಯೂಸ್

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

7-thirthahalli

Thirthahalli: ಕಳ್ಳತನಕ್ಕೆ ಬಂದವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು !

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

ಮಮತಾ ಬ್ಯಾನರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

Ballari: ವಾಲ್ಮೀಕಿ ನಿಗಮದ ಪ್ರಕರಣ… ಎರಡನೇ ದಿನವೂ ಮುಂದುವರೆದ ಬಿಜೆಪಿ ಪ್ರತಿಭಟನೆ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

Renukaswamy Case 5 ತಿಂಗಳಿನಿಂದ ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ!

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

8-ptr-bus-campaign

Udayavani Campaign: 14 ಹೊಸ ಬಸ್‌ ಓಡಾಟಕ್ಕೆ ಕೆಎಸ್‌ಆರ್‌ಟಿಸಿ ಸಿದ್ಧ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

NEET Paper Leak case: ಸಿಬಿಐನಿಂದ ಜಾರ್ಖಂಡ್‌ ಕಾಲೇಜಿನ ಪ್ರಾಂಶುಪಾಲರ ಬಂಧನ

ವಿಜಯೇಂದ್ರ

Shimoga; ಸಿಎಂ ಗಮನಕ್ಕೆ ಬಾರದೆ ವಾಲ್ಮೀಕಿ ನಿಗಮ ಹಣ ಲೂಟಿ ಸಾಧ್ಯವಿಲ್ಲ: ವಿಜಯೇಂದ್ರ ಆರೋಪ

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Box office: ʼಕಲ್ಕಿ 2898 ಎಡಿʼಯ 2ನೇ ದಿನದ ಗಳಿಕೆಯಲ್ಲಿ ಭಾರೀ ಕುಸಿತ; ಗಳಿಸಿದ್ದೆಷ್ಟು?

Postponed UGC NET, CSIR NET exam date announced

NTA; ಮುಂದೂಡಲಾಗಿದ್ದ UGC NET, CSIR NET ಪರೀಕ್ಷಾ ದಿನಾಂಕ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.